No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವರಾತ್ರಿಗೂ ಪ್ರಕೃತಿಗೂ, ವೈಜ್ಞಾನಿಕತೆಗೂ ಇದೆ ಸಂಬಂಧ | ಇದರ ಮಹತ್ವವೇನು?

kalpa News by kalpa News
September 30, 2025
in Special Articles
0
ನವರಾತ್ರಿಗೂ ಪ್ರಕೃತಿಗೂ, ವೈಜ್ಞಾನಿಕತೆಗೂ ಇದೆ ಸಂಬಂಧ | ಇದರ ಮಹತ್ವವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ನವರಾತ್ರಿಯು ದುಷ್ಟಶಕ್ತಿಗಳಿಂದ ನಮ್ಮನ್ನು ಕಾಪಾಡುವ ನಮಗೆ ಆಂತರಿಕ ಶಕ್ತಿಯನ್ನು ನೀಡುವ ಶಕ್ತಿ ದೇವತೆಯ ಉಪಾಸನಾ ಕಾಲ ಎಂಬುದು ಜನಜನಿತವಾಗಿದೆ. ನಮ್ಮಲ್ಲಿಯ ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಿ ಸಕಾತಾತ್ಮಕ ಶಕ್ತಿಯನ್ನು ಆತ್ಮಸ್ಥೈರ್ಯವನ್ನು ತುಂಬುವ ಪರ್ವವಾಗಿದೆ.

ನವರಾತ್ರಿ ಕೇವಲ ಧಾರ್ಮಿಕ ಹಬ್ಬವಾಗಿರದೇ ವೈಜ್ಞಾನಿಕವಾಗಿಯೂ ಮಹತ್ವವನ್ನು ಪಡೆದಿರುವ ಹಬ್ಬವಾಗಿದೆ. ನವರಾತ್ರಿಯಲ್ಲಿ ಒಂಬತ್ತು ಚಕ್ರಗಳನ್ನು ಜಾಗೃತಗೊಳಿಸುವುದು, ಪೂಜೆ ಆರಾಧನೆ, ಸಂಪ್ರದಾಯ, ಉಪವಾಸ ಮೊದಲಾದವುಗಳ ಮೂಲಕ ಹಬ್ಬವನ್ನು ಆಚರಿಸುತ್ತೇವೆ. ಪ್ರಕೃತಿ ಪೂಜೆಯು, ಸಾಧನೆಯನ್ನು ಕೂಡ ಮಾಡುತ್ತಾರೆ.

ವೈಜ್ಞಾನಿಕವಾಗಿ ಹಬ್ಬದ ಮಹತ್ವವನ್ನು ಚರ್ಚಿಸುವುದಾದರೆ ಈ ಕಾಲದಲ್ಲಿ ಮಳೆಗಾಲದಿಂದ ಚಳಿಗಾಲಕ್ಕೆ ಬದಲಾಗುವ ಸಮಯವಾಗಿದೆ. ಇಂತಹ ಬದಲಾವಣೆಯ ಸಮಯದಲ್ಲಿ ಹೆಚ್ಚಾಗಿ ರೋಗ ರುಜಿನಗಳು ಆರೋಗ್ಯ ಸಮಸ್ಯೆಗಳು ಬರುತ್ತವೆ. ಮಳೆಗಾಲದಲ್ಲಿ ಇರುವ ವಾತಾವರಣ ಮತ್ತು ಆಹಾರ ಪದ್ಧತಿಯ ಬದಲಾಗಿ ಮುಂದಿನ ನಾಲ್ಕು ತಿಂಗಳುಗಳಲ್ಲಿ ಬೇರೆ ರೀತಿ ಊಟೋಪಚಾರ ಆಹಾರ ವಿಹಾರಗಳನ್ನು ಅಭ್ಯಾಸ ಮಾಡಿಕೊಳ್ಳಲು ಆಶ್ವಯುಜ ಮಾಸ ಮೊದಲಾಗುತ್ತದೆ. ಈ ಮಳೆಗಾಲದ ಆರಂಭದಲ್ಲಿ ಕಫ ಉತ್ಪನ್ನ ಮಾಡುವ ಮೊಸರನ್ನು ಬಳಸುತ್ತಿರುವುದಿಲ್ಲ. ಈ ಬದಲಾವಣೆಯ ಸಮಯದಲ್ಲಿ ದವಸ ಧಾನ್ಯಗಳಲ್ಲಿ ಹುಳಗಳಾಗುವ ಸಂಭವ ಹೆಚ್ಚಾಗುವುದರಿಂದ ಬೇಳೆಕಾಳುಗಳನ್ನು ಮತ್ತು ತರಕಾರಿಗಳನ್ನು ಬಳಸುವುದಿಲ್ಲ, ಈ ಸಮಯದಲ್ಲಿ ಆರೋಗ್ಯಕ್ಕೆ ಯಾವುದು ಹಿತವೋ ಆಯುರ್ವೇದದಲ್ಲಿ ಈ ಕಾಲಕ್ಕೆ ಸೂಕ್ತ ಆಹಾರ ಸೂಚಿಸಿದೆಯೋ ಅಂತಹ ಆಹಾರ ಸೇವನೆ ಮಾಡಲಾಗುತ್ತದೆ.
ಉಪವಾಸದಲ್ಲಿ ಸಾತ್ವಿಕ ಆಹಾರವನ್ನು ಸೇವನೆ ಮಾಡಲಾಗುತ್ತದೆ. ಇದರಿಂದ ಹೆಚ್ಚಿನ ಮಸಾಲೆ ಜೀರ್ಣಕ್ರಿಯೆಗೆ ಬಾಧಕವಾದ ಅಂಶಗಳು ನಮ್ಮ ದೇಹದಲ್ಲಿ ಹೆಚ್ಚು ಪ್ರಮಾಣದ ಹಾನಿಕಾರಕ ಟಾಕ್ಸಿನ್‌ಗಳು ಶೇಖರವಾಗುವುದನ್ನು ಕಡಿಮೆ ಮಾಡಿ ಆರೋಗ್ಯ ಕಾಪ್ಡಿಕೊಳ್ಳಲು ಸಹಾಯಕವಾಗಿರುತ್ತದೆ. ಮನುಷ್ಯನ ಆರೋಗ್ಯ ಅವನ ಮನಸ್ಥಿತಿಗೆ ಕಾರಣವಾಗುವುದರಿಂದ ಈ ಸಮಯದ ಆಹಾರ ವಿಹಾರದ ಪದ್ಧತಿಯಿಂದ ಮನುಷ್ಯನ ಚಿಂತೆಗಳು ಪರಿಹಾರವಾಗಿ ಆನಂದದಿಂದ ಇರುತ್ತಾನೆ. ಏಕಾದಶಿ ದಿನದಂದು ಮಾತ್ರ ಸಂಪೂರ್ಣ ನಿರಾಹಾರ ಮಾಡುತ್ತಾರೆ. ಹಬ್ಬ ಹರಿದಿನ ವ್ರತ ನೇಮಾದಿಗಳನ್ನ ಮಾಡುವಾಗ ದೇಹದಲ್ಲಿ ಚೈತನ್ಯ ಕಾಪಾಡಿಕೊಂಡು ಶಕ್ತಿ ಪ್ರದಾಯಕ ಹಾಗೂ ಆರೋಗ್ಯಕರ ಫಲಾಹಾರ ಉಪಾಹಾರಗಳನ್ನ ಸೇವಿಸಲಾಗುತ್ತದೆ.

ಈ ಸಮಯದಲ್ಲಿ ಹಗಲು  12 ತಾಸು ರಾತ್ರಿಯೂ 12 ತಾಸುಗಳು ಇರುತ್ತವೆ ಇದನ್ನು ಇಕ್ಷಿನಾಕ್ಸ್‌ ಎಂದು ಕರೆಯಲಾಗುತ್ತದೆ ಇಂತಹ ಸಮಯದಲ್ಲಿ  ಕತ್ತಲು ಬೆಳಕು ಸಮ ಪ್ರಮಾಣದಲ್ಲಿರುತ್ತದೆ. ಬೇಸಿಗೆಕಾಲದಲ್ಲಿ ಹಗಲು ಹೆಚ್ಚು ರಾತ್ರಿ ಕಡಿಮೆ, ಚಳಿಗಾಲದಲ್ಲಿ ರಾತ್ರಿ ಹೆಚ್ಚು ಹಗಲು ಕಡಿಮೆ ಇರುತ್ತದೆ. ಈ ಕಾಲದಲ್ಲಿ ಅರ್ಧ ರಾತ್ರಿ ಅರ್ಧ ಹಗಲು ಇರುವುದರಿಂದ ಈ ಕಾಲದ ವಾತಾವರಣದಲ್ಲಿ ಉಪವಾಸ ಧ್ಯಾನ ಮೊದಲಾದ ಸಾಧನೆಗಳು ಮನುಷ್ಯನ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸರಿಯಾಗಿ ಗಮನ ಹರಿಸಬೇಕಾದ ಸಮಯವೇ ಆಗಿರುತ್ತದೆ.

ನವರಾತ್ರಿಯಲ್ಲಿ ಪರಿಸರ ಮತ್ತು ವಾತಾವರಣ ಬಣ್ಣಗಳಿಂದ ಶೃಂಗಾರಗೊಂಡು ಆನಂದಮಯವಾಗಿರುತ್ತದೆ ಹೂವುಗಳು ಚೆನ್ನಾಗಿ ಅರಳಿನಿಂತಿರುತ್ತವೆ ಅವುಗಳಿಂದ ದೇವಿಯ ಆರಾಧನೆಯನ್ನು ಒಂದೊಂದು ಬಣ್ಣಗಳ ಪ್ರತೀಕಗಳನ್ನು ಅರಿತು ನವದೇವಿಯರ ಪೂಜೆಯನ್ನು ಮಾಡಲಾಗುತ್ತದೆ.
ನವರಾತ್ರಿಯ ಸಮಯದ ಉಪವಾಸದಲ್ಲಿ ವಿವಿಧ ರೀತಿಯಲ್ಲಿ ಉಪವಾಸವನ್ನು ಮಾಡುತ್ತಾರೆ. ಕೇವಲ ನೀರನ್ನು ಸೇವಿಸಿ ಉಪವಾಸ ಕೇವಲ ಫಲಾಹಾರದ ಉಪವಾಸ, ಬೇಯಿಸದೇ ಮಾಡಿದ ಪದಾರ್ಥಗಳನ್ನು ತಿಂದು ಉಪವಾಸ, ನಿಷಿದ್ಧ ಅಂದರೆ ತಾಮಸಿ ಪದಾರ್ಥಗಳನ್ನು ಸೇವಿಸದೇ ಉಪವಾಸಗಳನ್ನು ಮಾಡುತ್ತಾರೆ. ಈ ಬಗೆಯಲ್ಲಿ ಉಪವಾಸಗಳನ್ನು ಅವರ ದೈಹಿಕ ಮತ್ತು ಆತ್ಮ ಶಕ್ತಿಯ ಅನುಸಾರ ಮಾಡುತ್ತಾರೆ. ಅತೀ ಸಾತ್ವಿಕ ಆಹಾರವನ್ನು ಸೇವಿಸುವವರು ದೇಹದಲ್ಲಿ ಊತ್ತಮ ಶಕ್ತಿಯನ್ನು ಉಳ್ಳವರು ಕೇವಲ ನೀರಿನ ಸೇವನೆಯಿಂದ ಉಪವಾಸ ಮಾಡುತ್ತಾರೆ. ಹೀಗೆ ನಮ್ಮ ಆಹಾರ ಮತ್ತು ಉಪವಾಸಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತವೆ. ನಮ್ಮಲ್ಲಿ ಸಾತ್ವಿಕತೆ ಮತ್ತು ಶಕ್ತಿ ಪ್ರದಾಯಕ ಆಹಾರ ಸೇವಿಸಿ ಭಕ್ತಿಯ ಜೊತೆಗೆ ಉತ್ತಮ ಆರೋಗ್ಯ ಪಡೆಯುವ ಕಾಲ ನವರಾತ್ರಿ.

ನವರಾತ್ರಿಯ ಸಮಯದಲ್ಲಿ ಪೂಜೆ ಮತ್ತು ಮಂತ್ರ ಜಪ ಅನುಷ್ಠಾನಗಳನ್ನು ಮಾಡುತ್ತಾರೆ. ಇದರಿಂದ ನಮ್ಮ ದೇಹದ ಚಕ್ರಗಳು ಜಾಗೃತಗೊಳ್ಳುತ್ತವೆ.  ನಮ್ಮಲ್ಲಿ ಎಲ್ಲ ರೀತಿಯಲ್ಲಿ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಜಾಗೃತಗೊಳಿಸಿ ದುಷ್ಟ ಶಕ್ತಿಗಳ ಜೊತೆಗೆ ಹೋರಾಡಲು ಪ್ರೇರಣೆಯನ್ನು ನೀಡಿ ನಮ್ಮನ್ನು ಜೀವನದಲ್ಲಿ ಜಯಶಾಲಿಗಳನ್ನಾಗಿ ಮಾಡುವ ಶಕ್ತಿಯನ್ನು ನಮ್ಮಲ್ಲಿ ನಾವು ಈ ಸಮಯದಲ್ಲಿ ಜಾಗೃತಗೊಳಿಸಬಹುದಾಗಿದೆ. ಇಲ್ಲಿ ನವ ಎಂದರೆ ಕೇವಲ ಒಂಭತ್ತು ಅಲ್ಲದೇ ನವ ಎಂದರೆ ಹೊಸದಾದ ಎಂದೂ ಕೂಡ ಅರ್ಥ ಮಾಡಿಕೊಳ್ಳಬಹದು. ನಮ್ಮ ಜೀವನದಲ್ಲಿ ನವಚೈತನ್ಯವನ್ನು ಹೊಸ ಶಕ್ತಿಯನ್ನು ಪಡೆದುಕೊಳ್ಳುವ ಕಾಲ ನವರಾತ್ರಿ.

ನವರಾತ್ರಿಯಲ್ಲಿ ದೇವಿಯ ಪ್ರಸನ್ನತೆಯ ಸಲುವಾಗಿ ಅನೇಕ ಹೋಮ ಹವನಾದಿಗಳನ್ನು ಮಾಡುತ್ತಾರೆ. ಇದರಿಂದ ವಾತಾವರಣದಲ್ಲಿ ಹಾನಿಕಾರಕ ಬ್ಯಾಕ್ಟಿರಿಯಾಗಳು, ಹಾನಿಕಾರಕ ವಸ್ತುಗಳು ನಾಶವಾಗಿ ವಾತಾವರಣವು ಪರಿಶುದ್ಧವಾಗಿ ಆರೋಗ್ಯಯುತ ವಾತಾವರಣವನ್ನು ಸೃಷ್ಟಿಸುತ್ತದೆ.  ಹೀಗೆ ಅನೇಕ ರೀತಿಯಲ್ಲಿ ವೈಜ್ಞಾನಿಕ ಕಾರಣಗಳನ್ನು ಇಟ್ಟುಕೊಂಡೇ ನಮ್ಮ ಪೂರ್ವಜರು ಹಬ್ಬಗಳನ್ನು ಸಂಪ್ರದಾಯಗಳನ್ನು ಬೆಳೆಸಿಕೊಂಡು ಬಂದಿದ್ದಾರೆ, ಶಿಸ್ತುಬದ್ಧ ಜೀವನ ಮತ್ತು ಸರಿಯಾದ ಅಭ್ಯಾಸಗಳನ್ನು ಮಾಡಿಸುವ ಕಾರಣ ದೇವರು ಪೂಜೆ ಸಂಪ್ರದಾಯಗಳ ಮೂಲಕ ಉತ್ತಮ ಜೀವನದ ಮಾರ್ಗವನ್ನು ತೋರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: #NavaratriDasara 2025Kannada News WebsiteLatest News KannadaNavratri Scientific Reasonಆಯುರ್ವೇದಒಂಬತ್ತು ಚಕ್ರತರಕಾರಿದುಷ್ಟಶಕ್ತಿಧಾರ್ಮಿಕ ಹಬ್ಬನವರಾತ್ರಿವೈಜ್ಞಾನಿಕಶಕ್ತಿ ದೇವತೆಸಂಪ್ರದಾಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ನವರಾತ್ರಿ ಸಂಭ್ರಮದಲ್ಲಿ ಗಮನಸೆಳೆದ ದಾಂಡಿಯಾ ರಾಸ್

Next Post

30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್ | ಕರ್ನಾಟಕದ ಪ್ರಜ್ವಲ್’ಗೆ ಜಯ!

kalpa News

kalpa News

Next Post
30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್ | ಕರ್ನಾಟಕದ ಪ್ರಜ್ವಲ್’ಗೆ ಜಯ!

30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್ | ಕರ್ನಾಟಕದ ಪ್ರಜ್ವಲ್'ಗೆ ಜಯ!

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL