No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

NEET ReTest | ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ನಿರ್ಬಂಧ | ಕಾರಣವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 16, 2026
in ರಾಷ್ಟ್ರೀಯ
0
telegram ban in India till NEET UG Retest completes
Share on FacebookShare on TwitterShare on WhatsApp
ಸರ್ಕಾರವು ಟೆಲಿಗ್ರಾಂನಲ್ಲಿ ಸಂದೇಶಗಳನ್ನು ತಿದ್ದುಪಡಿ ಮಾಡುವ (edit) ವೈಶಿಷ್ಟ್ಯವನ್ನು ಜೂನ್ 30ರವರೆಗೆ ಭಾರತದಲ್ಲಿ ನಿಷ್ಕ್ರಿಯಗೊಳಿಸುವಂತೆ ನಿರ್ದೇಶನ ನೀಡಿದೆ. ಈ ವೈಶಿಷ್ಟ್ಯವನ್ನು ಹಿಂದಿನ ಸಂದರ್ಭಗಳಲ್ಲಿ ದುರುಪಯೋಗಪಡಿಸಿಕೊಂಡು, ಪರೀಕ್ಷೆಯ ಬಳಿಕ ಹಳೆಯ ಸಂದೇಶಗಳನ್ನು ತಿದ್ದುಪಡಿ ಮಾಡಿ ಪ್ರಶ್ನೆಪತ್ರಿಕೆ ಸೋರಿಕೆಯ ‘ಸಾಕ್ಷ್ಯ’ವನ್ನು ಕೃತಕವಾಗಿ ಸೃಷ್ಟಿಸಲಾಗುತ್ತಿತ್ತು ಎಂದು NTA ತಿಳಿಸಿದೆ.

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಜೂನ್ 21ರಂದು ನಡೆಯಲಿರುವ NEET (UG) 2026 ಮರುಪರೀಕ್ಷೆಯ ಮುನ್ನೆಚ್ಚರಿಕಾ ಕ್ರಮವಾಗಿ ಭಾರತದಲ್ಲಿ ಟೆಲಿಗ್ರಾಂ ಮೆಸೇಜಿಂಗ್ ವೇದಿಕೆಯ ಪ್ರವೇಶವನ್ನು ತಾತ್ಕಾಲಿಕವಾಗಿ ಜೂನ್ 22ರವರೆಗೆ ನಿರ್ಬಂಧಿಸಲಾಗಿದೆ.

ಈ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಣೆ ಹೊರಡಿಸಿದ್ದು, ಕೇಂದ್ರ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಕೈಗೊಂಡಿರುವ ಕ್ರಮವನ್ನು ಸ್ವಾಗತಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಕಲಂ 69A ಅಡಿಯಲ್ಲಿ ಈ ನಿರ್ಬಂಧ ಜಾರಿಗೊಂಡಿದೆ.

Also Read>> ಚಿಕ್ಕಮಗಳೂರು ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಹುಬ್ಬಳ್ಳಿಗೆ ಸ್ಪೆಷಲ್ ಎಕ್ಸ್’ಪ್ರೆಸ್

ಇದರ ಜೊತೆಗೆ, ಟೆಲಿಗ್ರಾಂನಲ್ಲಿ ಈಗಾಗಲೇ ಪೋಸ್ಟ್ ಮಾಡಿರುವ ಸಂದೇಶಗಳನ್ನು ತಿದ್ದುಪಡಿ ಮಾಡುವ (edit) ಸೌಲಭ್ಯವನ್ನು ಜೂನ್ 30ರವರೆಗೆ ನಿಷ್ಕ್ರಿಯಗೊಳಿಸುವಂತೆ ನಿರ್ದೇಶನ ನೀಡಲಾಗಿದೆ.

ಪರೀಕ್ಷೆಯ ಬಳಿಕ ಹಳೆಯ ಸಂದೇಶಗಳನ್ನು ತಿದ್ದುಪಡಿ ಮಾಡಿ ಪ್ರಶ್ನೆಪತ್ರಿಕೆಗಳನ್ನು ಸೇರಿಸಿ ತಪ್ಪು ಮಾಹಿತಿ ಹಬ್ಬಿಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು NTA ತಿಳಿಸಿದೆ.

“ಸಂಘಟಿತ ವಂಚನೆ ಜಾಲಗಳು ವಿದ್ಯಾರ್ಥಿಗಳನ್ನು ಮೋಸಗೊಳಿಸುವ ಉದ್ದೇಶದಿಂದ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ,” ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಇದಲ್ಲದೆ, ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಈ ಸಂಬಂಧ ಕಾರ್ಯಾಚರಣೆಯನ್ನು ಸಂಯೋಜಿಸುತ್ತಿದೆ.

ಜೂನ್ 21ರಂದು ಮರುಪರೀಕ್ಷೆ ನಿಗದಿಯಂತೆ ನಡೆಯಲಿದ್ದು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಪರಿಶೀಲಿತ ಮಾಹಿತಿಯನ್ನು ನಂಬದೆ, ಅಧಿಕೃತ ಮಾಹಿತಿಯನ್ನೇ ಅವಲಂಬಿಸಬೇಕು ಎಂದು NTA ಮನವಿ ಮಾಡಿದೆ.

ಟೆಲಿಗ್ರಾಂ ಚಾನಲ್‌ಗಳ ಮೂಲಕ ಮೋಸ: ಪ್ರಶ್ನೆಪತ್ರಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಸೂಲಿ ಯತ್ನ

NEET (UG) 2026 ಮರುಪರೀಕ್ಷೆಗೆ ಮುನ್ನ ಟೆಲಿಗ್ರಾಂನಲ್ಲಿ ಹಲವು ಚಾನಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅಭ್ಯರ್ಥಿಗಳು ಹಾಗೂ ಅವರ ಕುಟುಂಬಗಳಿಂದ ಸಾವಿರಗಳಿಂದ ಲಕ್ಷಾಂತರ ರೂಪಾಯಿವರೆಗೆ ಹಣ ವಸೂಲಿಸಲು ಯತ್ನಿಸಿರುವುದು ಬಹಿರಂಗವಾಗಿದೆ.

ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ನೀಡುವುದಾಗಿ ಭರವಸೆ ನೀಡುವ ಮೂಲಕ ಈ ಚಾನಲ್‌ಗಳು ಮೋಸಕ್ಕೆ ಮುಂದಾಗಿದ್ದವು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ.

ಆದರೆ ಭದ್ರತಾ ಕ್ರಮಗಳೊಳಗೆ ಇರುವ ಪರೀಕ್ಷಾ ವ್ಯವಸ್ಥೆ ಹೊರತುಪಡಿಸಿ ಯಾವುದೇ ಪ್ರಶ್ನೆಪತ್ರಿಕೆ ಲಭ್ಯವಿರುವುದಿಲ್ಲ ಎಂದು NTA ಸ್ಪಷ್ಟಪಡಿಸಿದೆ.

“ಇಂತಹ ಯಾವುದೇ ಪ್ರಶ್ನೆಪತ್ರಿಕೆ ಸಿಗುತ್ತದೆ ಎಂಬ ಭರವಸೆ ಪ್ರತಿಯೊಂದು ಸಂದರ್ಭದಲ್ಲೂ ವಂಚನೆಯೇ,” ಎಂದು ಸಂಸ್ಥೆ ಎಚ್ಚರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಪರಿಶೀಲಿತ ಮಾಹಿತಿಯನ್ನು ನಂಬಬಾರದು ಎಂದು ಅಭ್ಯರ್ಥಿಗಳು ಹಾಗೂ ಪಾಲಕರಿಗೆ NTA ಮನವಿ ಮಾಡಿದೆ.

ಸಂದೇಶ ತಿದ್ದುಪಡಿ ವೈಶಿಷ್ಟ್ಯ ನಿಷ್ಕ್ರಿಯಗೊಳಿಸಿದೇಕೆ? ಇಲ್ಲಿದೆ ಕಾರಣ

ಟೆಲಿಗ್ರಾಂನ ಸಂದೇಶ ತಿದ್ದುಪಡಿ (edit) ವೈಶಿಷ್ಟ್ಯವನ್ನು ನಿಷ್ಕ್ರಿಯಗೊಳಿಸುವ ನಿರ್ಧಾರಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸ್ಪಷ್ಟನೆ ನೀಡಿದ್ದು, ಇದು ಇತ್ತೀಚಿನ ಪರೀಕ್ಷೆಗಳಲ್ಲಿ ದುರುಪಯೋಗವಾಗಿರುವ ಪ್ರಮುಖ ದೋಷವನ್ನು ತಡೆಗಟ್ಟಲು ಕೈಗೊಂಡ ಕ್ರಮವಾಗಿದೆ ಎಂದು ತಿಳಿಸಿದೆ.

ಟೆಲಿಗ್ರಾಂ ವ್ಯವಸ್ಥೆಯಲ್ಲಿ ಚಾನಲ್ ನಿರ್ವಾಹಕರು ಹಿಂದಿನ ಸಂದೇಶಗಳನ್ನು ತಿದ್ದುಪಡಿ ಮಾಡಬಹುದು ಹಾಗೂ ಅದಕ್ಕೆ ಸಂಲಗ್ನಗೊಂಡಿರುವ ಫೈಲ್‌ಗಳನ್ನು (PDF ಮುಂತಾದವು) ಬದಲಾಯಿಸಬಹುದು. ಆದರೆ ಮೂಲ ಸಮಯದ ಗುರುತು (timestamp) ಹಾಗೆಯೇ ಉಳಿಯುತ್ತದೆ.

ಈ ವೈಶಿಷ್ಟ್ಯವನ್ನು ಬಳಸಿಕೊಂಡು, ಪರೀಕ್ಷೆಗೂ ಮುನ್ನ ಸಾಮಾನ್ಯ ಸಂದೇಶಗಳನ್ನು ಪೋಸ್ಟ್ ಮಾಡಿ, ನಂತರ ಪರೀಕ್ಷೆ ಮುಗಿದ ಬಳಿಕ ಅದನ್ನು ತಿದ್ದುಪಡಿ ಮಾಡಿ ನಿಜವಾದ ಪ್ರಶ್ನೆಪತ್ರಿಕೆಯನ್ನು ಸೇರಿಸುವ ಮೂಲಕ ‘ಮುಂಚಿತವಾಗಿ ಸೋರಿಕೆಯಾಗಿದೆ’ ಎಂಬ ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಲಾಗುತ್ತಿತ್ತು ಎಂದು NTA ಆರೋಪಿಸಿದೆ.

ಇಂತಹ ಸಂದೇಶಗಳ ಸ್ಕ್ರೀನ್‌ಶಾಟ್‌ಗಳನ್ನು ಹಳೆಯ ಸಮಯದ ಗುರುತಿನೊಂದಿಗೆ ಹರಡಿಸಿ, ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ತಪ್ಪು ಭಾವನೆ ಮೂಡಿಸಲಾಗುತ್ತಿತ್ತು. ಈ ರೀತಿಯ ವಂಚನೆ ಹಾಗೂ ತಪ್ಪು ಮಾಹಿತಿಯನ್ನು ತಡೆಯುವ ಉದ್ದೇಶದಿಂದಲೇ ಈ ವೈಶಿಷ್ಟ್ಯವನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಲಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಟೆಲಿಗ್ರಾಂ ವಂಚನೆ ವಿರುದ್ಧ ಹಲವು ಏಜೆನ್ಸಿಗಳ ಕಾರ್ಯಾಚರಣೆ

NEET (UG) 2026 ಮರುಪರೀಕ್ಷೆಗೆ ಸಂಬಂಧಿಸಿದಂತೆ ಟೆಲಿಗ್ರಾಂ ಮೂಲಕ ನಡೆಯುತ್ತಿದ್ದ ವಂಚನೆಗಳನ್ನು ತಡೆಗಟ್ಟಲು ಹಲವು ಕೇಂದ್ರ ಹಾಗೂ ರಾಜ್ಯ ಮಟ್ಟದ ಏಜೆನ್ಸಿಗಳು ಸಮನ್ವಯದೊಂದಿಗೆ ಕಾರ್ಯಾಚರಣೆ ನಡೆಸಿರವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ.

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಈ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, NTA ನೀಡಿದ ಮಾಹಿತಿ, ರಾಜ್ಯ ಪೊಲೀಸ್ ಗುಪ್ತಚರ ವಿಭಾಗದ ವರದಿಗಳು ಹಾಗೂ ಸ್ವಂತ ಮೇಲ್ವಿಚಾರಣೆಯ ಆಧಾರದ ಮೇಲೆ ಅನೇಕ ಟೆಲಿಗ್ರಾಂ ಚಾನಲ್‌ಗಳನ್ನು ಪತ್ತೆಹಚ್ಚಿ ತೆರವುಗೊಳಿಸಿದೆ. ಈ ಕಾರ್ಯಾಚರಣೆಗೆ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಸಹಕಾರ ನೀಡಿದೆ.Kalahamsa Infotech private limited

ಇದೇ ವೇಳೆ, ರಾಜ್ಯ ಮಟ್ಟದಲ್ಲೂ ತನಿಖೆಗಳು ವಂಚನೆಯ ವ್ಯಾಪಕತೆಯನ್ನು ಬಹಿರಂಗಪಡಿಸಿವೆ. ಜೂನ್ 9ರಂದು ಬಿಹಾರ ಪೊಲೀಸ್ ಆರ್ಥಿಕ ಅಪರಾಧ ಘಟಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ಟೆಲಿಗ್ರಾಂ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಪ್ರಶ್ನೆಪತ್ರಿಕೆ ಮುಂಚಿತವಾಗಿ ಸಿಗುತ್ತದೆ ಎಂಬ ಸುಳ್ಳು ಪ್ರಚಾರಗಳಿಂದ ದೂರವಿರಲು ಸೂಚಿಸಿದೆ.

ಅಹಮದಾಬಾದ್ ನಗರ ಸೈಬರ್ ಕ್ರೈಂ ಶಾಖೆ ಕೂಡ ಅಂತರ್‌ರಾಜ್ಯ ವಂಚನಾ ಜಾಲದ ಸದಸ್ಯರನ್ನು ಬಂಧಿಸಿದ್ದು, ಇದೇ ರೀತಿಯ ವಿಧಾನದಲ್ಲಿ ಎಂಟು ಟೆಲಿಗ್ರಾಂ ಚಾನಲ್‌ಗಳನ್ನು ನಡೆಸಲಾಗುತ್ತಿತ್ತು ಎಂದು ತಿಳಿಸಿದೆ. ತನಿಖೆಯಲ್ಲಿ ಸುಮಾರು ₹1.5 ಕೋಟಿ ಮೌಲ್ಯದ ವ್ಯವಹಾರಗಳು ನಕಲಿ ಬ್ಯಾಂಕ್ ಖಾತೆಗಳ ಮೂಲಕ ನಡೆದಿರುವುದು ಪತ್ತೆಯಾಗಿದ್ದು, ಒಂದು ತಿಂಗಳೊಳಗೆ ಸುಮಾರು 1,000 ಮೊಬೈಲ್ ಸಂಖ್ಯೆಗಳೊಂದಿಗೆ ಸಂಪರ್ಕ ಸಾಧಿಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಇತರ ಹಲವು ರಾಜ್ಯಗಳಲ್ಲಿ ಕೂಡ ತನಿಖೆಗಳು ಮುಂದುವರಿದಿವೆ.

ಟೆಲಿಗ್ರಾಂ ನಿರ್ಬಂಧದಿಂದ ಬಳಕೆದಾರರಿಗೆ ತೊಂದರೆ; NTA ಒಪ್ಪಿಗೆ

NEET (UG) 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂ ಮೇಲೆ ವಿಧಿಸಿರುವ ತಾತ್ಕಾಲಿಕ ನಿರ್ಬಂಧದಿಂದ ಲಕ್ಷಾಂತರ ಸಾಮಾನ್ಯ ಬಳಕೆದಾರರಿಗೆ ಅಸೌಕರ್ಯ ಉಂಟಾಗಬಹುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಒಪ್ಪಿಕೊಂಡಿದೆ.

ಶೈಕ್ಷಣಿಕ, ವೃತ್ತಿಪರ ಹಾಗೂ ವೈಯಕ್ತಿಕ ಸಂಪರ್ಕಕ್ಕಾಗಿ ಟೆಲಿಗ್ರಾಂ ಅನ್ನು ಬಳಸುತ್ತಿರುವ ಬಳಕೆದಾರರಿಗೆ ಈ ಕ್ರಮದಿಂದ ತೊಂದರೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿರುವ NTA, ಆದರೂ ಈ ನಿರ್ಬಂಧವನ್ನು ಜೂನ್ 22, 2026ರವರೆಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದೇ ವೇಳೆ, ಸಂದೇಶ ಸಂಪಾದನೆ (message edit) ವೈಶಿಷ್ಟ್ಯವನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಿದರೂ, ಬಳಕೆದಾರರು ಹೊಸ ಸಂದೇಶಗಳನ್ನು ಕಳುಹಿಸುವುದು ಅಥವಾ ಸ್ವೀಕರಿಸುವುದಕ್ಕೆ ಯಾವುದೇ ಅಡಚಣೆ ಇರುವುದಿಲ್ಲ ಎಂದು ಸಂಸ್ಥೆ ಭರವಸೆ ನೀಡಿದೆ.

ಪರೀಕ್ಷೆಗಳ ಭದ್ರತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು NTA ಸ್ಪಷ್ಟಪಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Breaking NewsKannada News WebsiteLatest News KannadaNational Testing AgencyNEETNEET UG re-examinationtelegram bantelegram ban in indiaಟೆಲಿಗ್ರಾಂರಾಷ್ಟ್ರೀಯ ಪರೀಕ್ಷಾ ಸಂಸ್ಥೆ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿಕ್ಕಮಗಳೂರು ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಹುಬ್ಬಳ್ಳಿಗೆ ಸ್ಪೆಷಲ್ ಎಕ್ಸ್’ಪ್ರೆಸ್

Next Post

ಶಿಕಾರಿಪುರ ಸಮೀಪ ಟಿಟಿ ವಾಹನ ಪಲ್ಟಿ; ಮೂವರಿಗೆ ಗಂಭೀರ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಶಿಕಾರಿಪುರ ಸಮೀಪ ಟಿಟಿ ವಾಹನ ಪಲ್ಟಿ; ಮೂವರಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
govt-makes-doctors-prescription-mandatory-to-buy-cough-syrup

ಇನ್ಮುಂದೆ ಮೆಡಿಕಲ್ ಶಾಪ್’ನಲ್ಲಿ ನೇರವಾಗಿ ಕೆಮ್ಮಿನ ಸಿರಪ್ ಕೊಳ್ಳುವಂತಿಲ್ಲ | ಕಾರಣವೇನು?

June 16, 2026
ಸಾಹಿತಿ ಶಾಸ್ತ್ರಿಯವರ ಸಾಧನೆಗೆ ತಕ್ಕ ಮಾನ್ಯತೆ ಸಿಗದಿರುವುದು ವಿಷಾದನೀಯ”: ವಾಸುದೇವ ಶಾನಭಾಗ

ಸಾಹಿತಿ ಶಾಸ್ತ್ರಿಯವರ ಸಾಧನೆಗೆ ತಕ್ಕ ಮಾನ್ಯತೆ ಸಿಗದಿರುವುದು ವಿಷಾದನೀಯ”: ವಾಸುದೇವ ಶಾನಭಾಗ

June 16, 2026
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಶಿಕಾರಿಪುರ ಸಮೀಪ ಟಿಟಿ ವಾಹನ ಪಲ್ಟಿ; ಮೂವರಿಗೆ ಗಂಭೀರ ಗಾಯ

June 16, 2026
telegram ban in India till NEET UG Retest completes

NEET ReTest | ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ನಿರ್ಬಂಧ | ಕಾರಣವೇನು?

June 16, 2026
Indian Railway Special Trains

ಚಿಕ್ಕಮಗಳೂರು ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಹುಬ್ಬಳ್ಳಿಗೆ ಸ್ಪೆಷಲ್ ಎಕ್ಸ್’ಪ್ರೆಸ್

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL