No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಡಾರ್ಕ್‌ ಪ್ಯಾಟ್ರನ್‌ ನಿಯಂತ್ರಣಕ್ಕೆ 3 ಜಾಗೃತಿ ಅಪ್ಲಿಕೇಷನ್‌ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 29, 2025
in ರಾಷ್ಟ್ರೀಯ
0
ಡಾರ್ಕ್‌ ಪ್ಯಾಟ್ರನ್‌ ನಿಯಂತ್ರಣಕ್ಕೆ 3 ಜಾಗೃತಿ ಅಪ್ಲಿಕೇಷನ್‌ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಇ ಕಾಮರ್ಸ್‌ #E-Commerce ವೇದಿಕೆಗಳಲ್ಲಿ 13 ಮಾದರಿ ಡಾರ್ಕ್‌ ಪ್ಯಾಟ್ರನ್‌ಗಳನ್ನು ಗುರುತಿಸಿದ್ದು, ವಂಚನೆ ನಿಯಂತ್ರಣಕ್ಕಾಗಿ ಮೂರು ವಿಧದ ಜಾಗ್ರತಿ ಅಪ್ಲಿಕೇಷನ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ #Minister Pralhad Joshi ತಿಳಿಸಿದರು.

ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾದ್ಯಮದವರೊಂದಿಗೆ ಮಾತನಾಡಿ, ಇ ಕಾಮರ್ಸ್‌ ವೇದಿಕೆ, ಡಿಜಿಟಲ್‌ ವಹಿವಾಟಿನಲ್ಲಿ ವಂಚನೆ ತಡೆಯಲು, ಡಾರ್ಕ್‌ ಪ್ಯಾಟ್ರನ್‌ #Dark Pattern ಪರಿಹಾರ ಕ್ರಮವಾಗಿ ಆಂತರಿಕ ಲೆಕ್ಕಪರಿಶೋಧನೆ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಗ್ರಾಹಕರ ರಕ್ಷಣೆಗಾಗಿ ಡಾರ್ಕ್‌ ಪ್ಯಾಟ್ರನ್‌ಗಳನ್ನು ವಿಶ್ಲೇಷಿಸಲು, ತೆಗೆದುಹಾಕಲು ಸ್ವಯಂ ಲೆಕ್ಕಪರಿಶೋಧನೆಯನ್ನು ಅವಶ್ಯವಾಗಿ ನಡೆಸುವಂತೆ ಎಲ್ಲಾ ಇ-ಕಾಮರ್ಸ್ ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ, ಹಲವು ನಿಯಂತ್ರಣ ಕ್ರಮಗಳನ್ನು ಗ್ರಾಹಕ ರಕ್ಷಣಾ ಪ್ರಾಧಿಕಾರ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಎಲ್ಲಾ ಕಂಪನಿಗಳು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಆಂತರಿಕ ಆಡಳಿತ, ಗ್ರಾಹಕ ರಕ್ಷಣಾ ಕಾರ್ಯವಿಧಾನಗಳಲ್ಲಿ ಸಂಯೋಜಿಸಬೇಕು ಎಂದು ಸೂಚನೆ ನೀಡಿದರು.

ಮೂರು ಅಪ್ಲಿಕೇಷನ್‌ಗಳು: ಡಾರ್ಕ್ ಪ್ಯಾಟರ್ನ್‌ ಕುರಿತಂತೆ ಗ್ರಾಹಕರ ರಕ್ಷಣೆಗಾಗಿ IIT BHU ಸಹಯೋಗದೊಂದಿಗೆ ಈಗಾಗಲೇ ಮೂರು ಪ್ರಬಲ ಅಪ್ಲಿಕೇಷನ್‌ಗಳನ್ನು ಸಿದ್ಧಪಡಿಸಲಾಗಿದೆ. ʼಜಾಗೃತಿ ಅಪ್ಲಿಕೇಶನ್ʼ, ʼಜಾಗೋ ಗ್ರಹಕ್ ಜಾಗೋʼ ಮತ್ತು ʼಜಾಗೃತಿ ಡ್ಯಾಶ್‌ಬೋರ್ಡ್ʼ ಅನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ʼಜಾಗೃತಿ ಅಪ್ಲಿಕೇಶನ್ʼ ಗ್ರಾಹಕರು ಇ-ಕಾಮರ್ಸ್ ವೇದಿಕೆಗಳಲ್ಲಿನ ಡಾರ್ಕ್ ಪ್ಯಾಟರ್ನ್‌ಗಳ ಬಗ್ಗೆ ನೇರವಾಗಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(CCPA)ಕ್ಕೆ ವರದಿ ಮಾಡಲು ಮತ್ತು ಅನುಮಾನಾಸ್ಪದ ವೆಬ್‌ಸೈಟ್‌ಗಳನ್ನು ಫ್ಲ್ಯಾಗ್ ಮಾಡಲು ನೆರವಾಗುತ್ತದೆ. ʼಜಾಗೋ ಗ್ರಹಕ್ ಜಾಗೋʼ ಅಪ್ಲಿಕೇಶನ್ ದುರುದ್ದೇಶಪೂರಿತ ಇ ಕಾಮರ್ಸ್‌ ವೇದಿಕೆಗಳಿಂದ ಬಳಕೆದಾರರನ್ನು ರಕ್ಷಿಸುತ್ತದೆ ಮತ್ತು ಗ್ರಾಹಕರು ಭೇಟಿ ನೀಡುವ ಇ-ಕಾಮರ್ಸ್ ಲಿಂಕ್‌ಗಾಗಿ ನೈಜ ಸುರಕ್ಷತಾ ಸ್ಕೋರ್‌ ನೀಡುತ್ತದೆ. ಇನ್ನು, ʼಜಾಗೃತಿ ಡ್ಯಾಶ್‌ಬೋರ್ಡ್ʼ ದೃಢವಾದ ವಿಶ್ಲೇಷಣಾತ್ಮಕ ಸಾಧನವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಸಚಿವರು ವಿವರಿಸಿದರು.

ಈ ಅಪ್ಲಿಕೇಷನ್‌ಗಳನ್ನು ಪರಿಶೀಲಿಸುವ ಮೂಲಕ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಡಾರ್ಕ್ ಪ್ಯಾಟರ್ನ್‌ಗಳ ಕುರಿತು ವಿವರವಾದ ವರದಿ ಸಿದ್ಧಪಡಿಸಿ ನೀಡುತ್ತದೆ. ಇದರಿಂದ ಡಿಜಿಟಲ್ ಮಾರುಕಟ್ಟೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಹೆಚ್ಚುತ್ತದೆ. ನಮ್ಮ ಈ ಕ್ರಮ ಆನ್‌ಲೈನ್‌ನಲ್ಲಿ ದಾರಿ ತಪ್ಪಿಸುವ, ಮೋಸಗೊಳಿಸುವ ವಿನ್ಯಾಸ ಪದ್ಧತಿಗಳನ್ನು ಎದುರಿಸುವ ದೃಢ ಸಂಕಲ್ಪವಾಗಿದೆ ಎಂದು ಸಚಿವರು ಹೇಳಿದರು.
ಇದಕ್ಕೂ ಮುನ್ನ ನವದೆಹಲಿಯ ವಿಜ್ಞಾನ ಭವನದಲ್ಲಿ ಮಧ್ಯಾಹ್ನ, ಪ್ರಮುಖ ಇ-ಕಾಮರ್ಸ್ ಕಂಪನಿಗಳು, ಉದ್ಯಮ ಸಂಘಗಳು, ಸ್ವಯಂ ಸೇವಾ ಗ್ರಾಹಕ ಸಂಸ್ಥೆಗಳು ಮತ್ತು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಪ್ರಮುಖ ಪ್ರತಿನಿಧಿಗಳೊಂದಿಗೆ ಉನ್ನತ ಮಟ್ಟದ ಸಭೆ ಏರ್ಪಡಿಸಿ, ಆನ್‌ಲೈನ್‌ ವಂಚನೆ ನಿರ್ಮೂಲನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಖುದ್ದು ಸಂವಾದ ನಡೆಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ಗ್ರಾಹಕರು ಜಾಗರೂಕರಾಗಿದ್ದಾರೆ ಮತ್ತು ಮಾಹಿತಿ ಉಳ್ಳವರಾಗಿದ್ದಾರೆ. ತಮ್ಮ ಹಕ್ಕುಗಳ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಅವರು ಯಾವುದೇ ರೀತಿಯ ಮೋಸ-ವಂಚನೆಯನ್ನು ಸಹಿಸುವುದಿಲ್ಲ. ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಸಹ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಹೇಳಿದರು.

NCHನಲ್ಲಿ ದೂರು ಹೆಚ್ಚಳ: ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ (NCH) ಡಾರ್ಕ್ ಪ್ಯಾಟರ್ನ್‌ ಕುರಿತಂತೆ ವ್ಯಾಪಕ ದೂರುಗಳು ದಾಖಲಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ ಸಚಿವರು, ಇದರ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಹಕ ರಕ್ಷಣಾ ಪ್ರಾಧಿಕಾರ ಹಿಂಜರಿಯುವುದಿಲ್ಲ. ಪ್ರತಿ ಸಂಸ್ತೆಗಳೂ ಮಾರ್ಗಸೂಚಿ ಪಾಲಿಸಬೇಕು ಎಂದು ಇ ಕಾಮರ್ಸ್‌ ಪ್ರಮುಖರಿಗೆ ನಿರ್ದೇಶನ ನೀಡಿದರು.

ಇ ಕಾಮರ್ಸ್‌ ವೇದಿಕೆಗಳಲ್ಲಿ ಡಾರ್ಕ್ ಪ್ಯಾಟರ್ನ್‌ಗಳನ್ನು ಗುರುತಿಸಲು ಮತ್ತು ತೆಗೆದುಹಾಕಲು ನಿಯಮಿತ ಆಂತರಿಕ ಲೆಕ್ಕಪರಿಶೋಧನೆ ನಡೆಸಲೇಬೇಕು. ಕಂಪನಿಗಳು CCPA ಮಧ್ಯಪ್ರವೇಶಿಸುವವರೆಗೆ ಕಾಯಬಾರದು. ನೋಟಿಸ್‌ ನೀಡಿ ವಂಚನೆ ಮಾದರಿಗಳನ್ನು ತೆಗೆದುಹಾಕಬೇಕು ಎಂದು ಸೂಚನೆ ನೀಡಿದರು.
ಗ್ರಾಹಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಶ್ರೀಮತಿ ನಿಧಿ ಖರೆ ಅವರು ಮಾತನಾಡಿ, ಇ ಕಾಮರ್ಸ್‌ ವೇದಿಕೆಗಳಲ್ಲಿ ಡಾರ್ಕ್‌ ಪ್ಯಾಟ್ರನ್‌ಗಳು ಗ್ರಾಹಕರ ಹಿತಾಸಕ್ತಿಗೆ ವಿರುದ್ಧವಾಗಿವೆ. ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತವೆ. ಇದು ಗ್ರಾಹಕರ ನಂಬಿಕೆಗೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹಾಗಾಗಿ ಗ್ರಾಹಕರ ಹಕ್ಕುಗಳನ್ನು ಸಂರಕ್ಷಿಸಲು ಮತ್ತು ಡಿಜಿಟಲ್ ವಹಿವಾಟು ಪಾರದರ್ಶಕತೆಗೆ ಕ್ರಮ ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ಜಂಟಿ ಕಾರ್ಯದರ್ಶಿ ಅನುಪಮ್ ಮಿಶ್ರಾ ಅವರು, ಡಾರ್ಕ್ ಪ್ಯಾಟರ್ನ್ಸ್ ಮೋಸಗೊಳಿಸುವ ವಿನ್ಯಾಸವಾಗಿದ್ದು, ಇದನ್ನು ಎದುರಿಸಲು ಮೀಸಲಾದ ಮಾರ್ಗಸೂಚಿ ಹೊರಡಿಸಿದ ಮೊದಲ ದೇಶ ಭಾರತವಾಗಿದೆ ಎಂದು ಹೇಳಿದರು.

ಪ್ರಮುಖ ಇ-ಕಾಮರ್ಸ್ ಕಂಪನಿಗಳಾದ 1mg.com, AIRBNB, Amazon, Apple, Zepto, Booking.com, Ola Electric, Tata Digital, Adidas India, Samsung, Ikigai Law, Indigo Airlines, Ixigo, MakeMyTrip, Mastercard, Meta, Netmeds, Namma Yatri, PharmEasy, Reliance Retail, Rapido, Shiprocket, Snapdeal, Swiggy, Thomas Cook, Uber, Whatsapp, Yatra, Zomato & Blinkit, Flipkart, Google, Justdial, ONDC, ಮತ್ತು Paytm ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಅಲ್ಲದೆ, ಪ್ರಮುಖ ಕೈಗಾರಿಕಾ ಸಂಘಗಳಾದ CAIT, CCI, FICCI, NASSCOM, PHDCCI, ಮತ್ತು ಚಿಲ್ಲರೆ ವ್ಯಾಪಾರಿಗಳ ಸಂಘವು ಸ್ವಯಂಸೇವಾ ಗ್ರಾಹಕ ಸಂಸ್ಥೆಗಳು ಮತ್ತು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Dark PatternE CommerceKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Pralhad JoshiNew DelhiNews_in_KannadaNews_Kannadaಇ ಕಾಮರ್ಸ್‌ಡಾರ್ಕ್‌ ಪ್ಯಾಟ್ರನ್‌ನವದೆಹಲಿಸಚಿವ ಪ್ರಲ್ಹಾದ ಜೋಶಿ
Share196Tweet123Send
Previous Post

ಕಾನೂನು ಬಾಹಿರ ಚಟುವಟಿಕೆಗೆ ಹಿಂದುತ್ವ ದುರ್ಬಳಕೆ | ಸಚಿವ ಗುಂಡೂರಾವ್ ಕಳವಳ

Next Post

ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?

ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026

ಪ್ರಧಾನಿ ಮೋದಿಯ ಒಂದೇ ಒಂದು ಮಾತು | ಚಿನ್ನದ ಬೆಲೆಯಲ್ಲಿ ಗಣನೀಯ ಕುಸಿತ

May 11, 2026
ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

May 11, 2026
ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

May 10, 2026
ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

May 10, 2026
ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

May 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL