Sunday, October 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಬಿಪಿನ್ ರಾವತ್ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ಸಿಗಲಿದೆ: ನಿವೃತ್ತ ಬ್ರಿಗೇಡಿಯರ್ ಹೇಮಂತ್

December 14, 2021
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ದೊರೆಯಲಿದೆ ಎಂದು ನಿವೃತ್ತ ಬ್ರಿಗೇಡಿಯರ್ ಹೇಮಂತ್ ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಭಾರತದ ಭದ್ರತೆ, ಬಾಹ್ಯ ಶತ್ರುಗಳು ಮತ್ತು ಆಂತರಿಕ ದೇಶದ್ರೋಹಿಗಳಿಂದ’ ಕುರಿತ ವಿಶೇಷ ಆನ್’ಲೈನ್’ ಸಂವಾದದಲ್ಲಿ ಅವರು ಮಾತನಾಡುತ್ತಿದ್ದರು.

ಭಾರತದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ಮೂರು ಸೇನಾಪಡೆಗಳನ್ನು ಒಟ್ಟಾಗಿಸಿ ದೇಶದ ಆಂತರಿಕ ಮತ್ತು ಬಾಹ್ಯ ಶತ್ರುಗಳ ವಿರುದ್ಧ ಪರಿಣಾಮಕಾರಿ ಕಾರ್ಯತಂತ್ರವನ್ನು ನಿರ್ಮಿಸಿದ್ದರು. ಉರಿ, ಮ್ಯಾನ್ಮಾರ್ ಮತ್ತು ಡೋಕ್ಲಾಮ್’ನಲ್ಲಿ ಯಶಸ್ವಿ ಸೇನಾ ಕಾರ್ಯಾಚರಣೆಗಳನ್ನು ನಡೆಸಲಾಯಿತು ಎಂದರು.

ರಾವತ್ ಅವರ ನಿರಂತರ ಪ್ರಯತ್ನಗಳಿಂದಾಗಿ ಮುಂದಿನ ಎರಡೂವರೆ ವರ್ಷಗಳಲ್ಲಿ ದೇಶದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತಿದ್ದವು. ಆದರೆ ಅವರ ಅಕಾಲಿಕ ನಿರ್ಗಮನವು ಅದರ ಮೇಲೆ ಪರಿಣಾಮ ಬೀರಬಹುದು, ಆದರೆ ಅವರ ನಂತರ, ಅದೇ ಸಾಮರ್ಥ್ಯದ, ಅಗಾಧ ಆಧ್ಯಯನವಿರುವ, ನಿಪುಣ, ಅನುಭವಿ ಮತ್ತು ನುರಿತ ನೂತನ ಸಿಡಿಎಸ್ ಆಯ್ಕೆಯಾಗುತ್ತಾರೆ ಮತ್ತು ಅವರು ಅವರ ಉಳಿದ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ. ಭಾರತದ ಭವಿಷ್ಯದ ಕೆಲಸದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಪೃಥ್ವಿ ಚೌಹಾಣ್ ಅವರು ಮಾತನಾಡಿ, ಸಿಡಿಎಸ್ ಬಿಪಿನ್ ರಾವತ್ ಅವರು ಆತ್ಮನಿಭರ್ರ ಭಾರತ್’ ಯೋಜನೆಯಡಿ ಮೂರು ಸೇನಾಪಡೆಗಳನ್ನು ಸಬಲಗೊಳಿಸುತ್ತಿದ್ದರು. ಎರಡೂವರೆ ಕಡೆಗಳಲ್ಲಿ ಅಂದರೆ ಪಾಕಿಸ್ತಾನದ ವಿರುದ್ಧ, ಚೀನಾ ವಿರುದ್ಧ ಮತ್ತು ಅರ್ಧದಷ್ಟು (ಆಂತರಿಕ) ದೇಶದ್ರೋಹಿಗಳ ವಿರುದ್ಧ ಹೋರಾಡುತ್ತಿದ್ದರು. ಜಿಹಾದ್ ಪ್ರತಿಪಾದಿಸುವವರ ಮನೆಗೆ ನುಗ್ಗಿ ಹತ್ಯೆ ಮಾಡಲಾಗುತ್ತಿತ್ತು. ಇದರಿಂದಾಗಿ ರಾವತ್ ಸಾವಿನಿಂದ ಜಿಹಾದಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ ದೇಶಭಕ್ತರು ಒಗ್ಗೂಡಿ ಅವರಿಗೆ ಉತ್ತರ ನೀಡಬೇಕು ಎಂದರು.

ಭಾರತ ರಕ್ಷಾ ಮಂಚ್’ನ ರಾಷ್ಟ್ರೀಯ ಕಾರ್ಯದರ್ಶಿ ಅನಿಲ್ ಧೀರ್ ಅವರು ಮಾತನಾಡಿ, ಸಿಡಿಎಸ್ ಬಿಪಿನ್ ರಾವತ್ ಇವರ ನಿಧನದಿಂದ ಸಂತಸಗೊಂಡಿರುವವರು ಜಿಹಾದಿ ಮಾನಸಿಕತೆಯವರು. ಈ ಮೊದಲು ಅತ್ಯಾಚಾರವೆಸಗುತ್ತಾರೆ, ಕಾಶ್ಮೀರದಲ್ಲಿ ದಾರಿತಪ್ಪಿದ ಯುವಕರನ್ನು ಕೊಲ್ಲುತ್ತಿದ್ದಾರೆ ಎಂದು ಸೈನ್ಯದ ಮೇಲೆ ಆರೋಪ ಹೊರಿಸಿ ಅವರನ್ನು ದುರ್ಬಲಗೊಳಿಸುತ್ತಿದ್ದರು. ಜೊತೆಗೆ ಕಮ್ಯುನಿಸ್ಟರು, ಚೀನಾ-ಪರ ಹಿತಶತ್ರುಗಳು, ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳು ವಿವಿಧ ವಾರ್ತಾವಾಹಿನಿಗಳಲ್ಲಿ ಚರ್ಚಿಸುವ ಮೂಲಕ ಮಿಲಿಟರಿಯ ಧೈರ್ಯವನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದರು. ತನ್ನ ಪ್ರಾಣವನ್ನೇ ಪಣಕ್ಕಿಟ್ಟು ದೇಶ ರಕ್ಷಣೆ ಮಾಡುತ್ತಿರುವ ಸೈನಿಕನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ತಪ್ಪಾಗಿದೆ ಎಂದು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ ಮಧ್ಯಪ್ರದೇಶ ಮತ್ತು ರಾಜಸ್ಥಾನ ಸಮನ್ವಯಕ ಆನಂದ ಜಾಖೋಟಿಯಾ ಮಾತನಾಡಿ, ಈಗ ಯುದ್ಧದಲ್ಲಿ ಬದಲಾವಣೆಯಾಗಿದೆ ಆದ್ದರಿಂದ ಗಡಿಯಲ್ಲಿನ ಶತ್ರುಗಳ ಸಹಿತ ಆಂತರಿಕ ದೇಶದ್ರೋಹಿಗಳ ವಿರುದ್ಧ ಸೇನೆ ಹೋರಾಡಬೇಕಿದೆ. ತ್ರಿಪುರಾದ ಘಟನೆಗಳಿಂದಾಗಿ ಮಹಾರಾಷ್ಟ್ರದ ೬ ಸ್ಥಳಗಳಲ್ಲಿ ಮತಾಂಧರು ಗಲಭೆ ನಡೆಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಅರಾಜಕತೆ ಹೆಚ್ಚಾಗುವುದರ ಜೊತೆಗೆ ನಾಗರಿಕರು ಮಹಾ ಸಂಘವನ್ನೇ ಎದುರಿಸಬೇಕಾಗಬಹುದು. ದೇಶದ ವಿರುದ್ಧ ಹೋರಾಡುತ್ತಿರುವ ಮತ್ತು ಸೇನೆಗೆ ಅವಮಾನ ಮಾಡುತ್ತಿರುವ ಆಂತರಿಕ ಶತ್ರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಹೊಸ ಕಾನೂನನ್ನು ಜಾರಿಗೊಳಿಸಬೇಕು. ಅಲ್ಲದೆ ದೇಶಭಕ್ತರೆಲ್ಲರೂ ಒಗ್ಗೂಡಿ ಈ ದೇಶದ್ರೋಹಿಗಳಿಗೆ ದಿಟ್ಟ ಉತ್ತರ ನೀಡಬೇಕು ಎಂದರು.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Army Helicopter CrashCDS Bipin RawatKannada NewsKannada News LiveKannada News OnlineKannada News WebsiteKannada WebsiteLatest News KannadaNational NewsNewDelhiNews in KannadaNews Kannadaನವದೆಹಲಿಸಿಡಿಎಸ್ ಜನರಲ್ ಬಿಪಿನ್ ರಾವತ್ಹೆಲಿಕಾಪ್ಟರ್ ದುರಂತ
Previous Post

ಸೇನಾ ಹೆಲಿಕಾಪ್ಟರ್ ಅಪಘಾತ: ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

Next Post

ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

October 5, 2025

ನಿಮ್ಮ ಮನೆಯಲ್ಲಿ ಗೋವಿಲ್ಲವೆಂಬ ನೋವು ಬಿಟ್ಟು ಗೋವರ್ಧನ ಟ್ರಸ್ಟ್’ನ ಜೊತೆಗೂಡಿ

October 5, 2025

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಮರೆತ ಮಹಿಳೆ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

October 5, 2025

ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಯಾವತ್ತು? ಇಲ್ಲಿದೆ ಡೀಟೇಲ್ಸ್

October 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

October 5, 2025

ನಿಮ್ಮ ಮನೆಯಲ್ಲಿ ಗೋವಿಲ್ಲವೆಂಬ ನೋವು ಬಿಟ್ಟು ಗೋವರ್ಧನ ಟ್ರಸ್ಟ್’ನ ಜೊತೆಗೂಡಿ

October 5, 2025

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಮರೆತ ಮಹಿಳೆ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

October 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!