ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ #Minister Shivaraj Singh Chouhan ಅವರನ್ನು ಕರ್ನಾಟಕದ ಸಂಸದರ ನಿಯೋಗವು ಭೇಟಿ ಮಾಡಿ ರಾಜ್ಯ ಅಡಕೆ ಬೆಳೆಗಾರರು ಸಮಸ್ಯೆಗಳ ಕುರಿತಂತೆ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ರಾಜ್ಯ ಅಡಿಕೆ ರೈತರು ಸಂಕಷ್ಟದಲ್ಲಿ ಸಿಲುಕಿರುವ ಬಗ್ಗೆ ವಿವರವಾದ ಮಾಹಿತಿಯನ್ನು ಕೃಷಿ ಸಚಿವರಿಗೆ ತಿಳಿಸಲಾಯಿತು. ಕೇಂದ್ರ ಕೃಷಿ ಸಚಿವರು, ಅಡಿಕೆ ರೈತರ ಬಗ್ಗೆ ಈ ಹಿಂದೆ ಸಲ್ಲಿಸಿರುವ ವರದಿಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿ, ವಿಜ್ಞಾನಿಗಳ ತಂಡದೊಂದಿಗೆ ತೊಂದರೆಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಈ ವೇಳೆ ಭರವಸೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post