ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ರಿಲೀಫ್ ದೊರೆತಿದ್ದು, ಸುಪ್ರೀಂ ಕೋರ್ಟ್ #Supreme Court ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಕೇಜ್ರಿವಾಲ್ #Arvind Kejriwal ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದ್ದು, ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಇದರಿಂದ ಕೇಜ್ರಿವಾಲ್ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗಿದೆ.
ಜೂನ್ 1ರಂದು ಲೋಕಸಭೆ ಚುನಾವಣೆಯ ಕೊನೆಯ ಹಾಗೂ ಏಳನೇ ಹಂತದ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಕೇಜ್ರಿವಾಲ್ ಅವರು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು. ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ. ಜೂನ್ 2ರಂದು ಅವರು ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.
Also read: ಅಕ್ಷಯ ತೃತೀಯ ಹಿನ್ನೆಲೆ | ಚಿನ್ನ ಖರೀದಿಗೆ ಮುಗಿಬಿದ್ದ ಜನತೆ
ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿಂದ ಆಮ್ ಆದ್ಮಿ ಪಕ್ಷ ಹಾಗೂ ದಿಲ್ಲಿ ಸರ್ಕಾರ ಸ್ವಲ್ಪ ನಿರಾಳವಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























