ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬಜೆಟ್ ಮಂಡನೆಗೆ #Union Budget ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Seetharaman ಅವರಿಗೆ ಸ್ಪೀಕರ್ ಓಂ ಬಿರ್ಲಾ ಅವರು ಅನುಮತಿ ನೀಡಿದಾಕ್ಷಣ ಗದ್ದಲ ಎಬ್ಬಿಸಿದ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರದ ವಿರುದ್ದ ಘೋಷಣೆ ಕೂಗಿದರು.
ಬಜೆಟ್ ಮಂಡನೆ ವೇಳೆ ಈ ರೀತಿ ಗದ್ದಲ, ಘೋಷಣೆ ಕೂಗುವುದು ಸರಿಯಲ್ಲ. ಸಂವಿಧಾನಾತ್ಮಕವಾಗಿರುವ ಈ ಪ್ರತಿಕ್ರಿಯೆಗೆ ಸಂಸತ್’ನಲ್ಲಿರುವ ಗೌರವಕ್ಕೆ ಧಕ್ಕೆ ತರಬೇಡಿ ಎಂದು ಸ್ಪೀಕರ್ ಎಚ್ಚರಿಕೆ ನೀಡಿದರೂ ಸಹ ಪ್ರತಿಪಕ್ಷಗಳು ತಲೆಕೆಡಿಸಿಕೊಳ್ಳದೇ ಗದ್ದಲು ಮುಂದುವರೆಸಿದರು.
ರಾಷ್ಟ್ರಪತಿಗಳ #President ಭಾಷಣೆ ಮೇಲಿನ ಚರ್ಚೆಗೆ ಪಟ್ಟು ಹಿಡಿದ ಪ್ರತಿಪಿಕ್ಷಗಳು ಸದನದಲ್ಲೇ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್ ಮಂಡನೆ ನಂತರ ಚರ್ಚೆಗೆ ಅವಕಾಶ ನೀಡುವುದಾಗಿ ಸ್ಪೀಕರ್ ಹೇಳಿದರೂ ಪ್ರತಿಪಕ್ಷಗಳ ತಾತ್ಸಾರ ಮುಂದುವರೆದಿತ್ತು.
ಆದರೆ, ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದರೂ ಸಹ ತಲೆ ಕೆಡಿಸಿಕೊಳ್ಳದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಮಂಡನೆ ಆರಂಭಿಸಿದರು. ಇದರಿಂದಾಗಿ ಇನ್ನಷ್ಟು ಆಕ್ರೋಶಗೊಂಡ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿರುವ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post