Wednesday, August 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಬೆಂಗಳೂರಿನ ಬಿಹೆಚ್ಇಎಲ್’ಗೆ ಶ್ರೇಷ್ಠತಾ ಪುರಸ್ಕಾರ | ರಕ್ಷಣೆ, ಬಾಹ್ಯಾಕಾಶ ಕ್ಷೇತ್ರದ ಕೊಡುಗೆಗೆ ಸಂದ ಗೌರವ

January 8, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿಯ ‘ಉತ್ಕರ್ಷ ದಿವಸ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು, ಕಳೆದ ಸಾಲಿನಲ್ಲಿ ಕಂಪನಿಯ ಅಭಿವೃಧಿಗೆ ಕೊಡುಗೆ ನೀಡಿರುವ ಸಿಬ್ಬಂದಿಗೆ ‘ಉತ್ಕೃಷ್ಟತಾ ಪುರಸ್ಕಾರ’ (ಶ್ರೇಷ್ಠತಾ ಪುರಸ್ಕಾರ) #Uthkrushta Puraskara ಸೇರಿ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದರು.

ನವದೆಹಲಿಯ ನೋಯಿಡಾದಲ್ಲಿರುವ ಬಿಹೆಚ್ಇಎಲ್ ಟೌನ್ ಶಿಪ್ ನಲ್ಲಿ ನಡೆದ ಬಿಹೆಚ್ಇಎಲ್ ಡೇ ಹಾಗೂ ಉತ್ಕೃಷ್ಟತಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು; ದೇಶದ ವಿವಿಧ ನಗರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಘಟಕಗಳ ಉತ್ತಮ ಸಾಧನೆಯನ್ನು ಗುರುತಿಸಿ ಗೌರವಿಸಿದರು.

2019-20ನೇ ಸಾಲಿನ ಉತ್ಕೃಷ್ಟತಾ ಪುರಸ್ಕಾರಕ್ಕೆ ಪಾತ್ರವಾಗಿರುವ ಬೆಂಗಳೂರಿನ ಬಿಹೆಚ್ಇಎಲ್ ಎಲೆಕ್ಟ್ರಾನಿಕ್ ವಿಭಾಗದ ಮುಕೇಶ್ ಕುಮಾರ್, 2020-21ನೇ ಸಾಲಿನ ಉತ್ಕೃಷ್ಟತಾ ಪುರಸ್ಕಾರಕ್ಕೆ ಪಾತ್ರರಾಗಿರುವ ಇದೇ ಬೆಂಗಳೂರು ಘಟಕದ ತೌಸಿಫ್ ಅವರಿಗೆ ಸಚಿವರು ಪುರಸ್ಕಾರ ಪ್ರದಾನ ಮಾಡಿ ಗೌರವಿಸಿದರು.

ಅಲ್ಲದೆ; 2021-22ನೇ ಸಾಲಿನ ಪ್ರತಿಬದ್ಧತಾ ಪುರಸ್ಕಾರಕ್ಕೆ ಪಾತ್ರರಾಗಿರುವ ಬೆಂಗಳೂರಿನ ಬಿಹೆಚ್ಇಎಲ್ ಎಲೆಕ್ಟ್ರಾನಿಕ್ ವಿಭಾಗದ ರಾಖಿ ಎಲ್. ಮೋಹನ್ ಅವರಿಗೆ, 2022-23ನೇ ಸಾಲಿನ ಅನುಸಂಧಾನ ಪುರಸ್ಕಾರಕ್ಕೆ ಪಾತ್ರವಾಗಿರುವ ಬೆಂಗಳೂರಿನ ಬಿಹೆಚ್ಇಎಲ್ ಎಲೆಕ್ಟ್ರಾನಿಕ್ ವಿಭಾಗದ ಧ್ಯಾನ್ ಜ್ಯೋತಿ ಸೈಕಿಯಾ ಹಾಗೂ 2023-24ನೇ ಸಾಲಿನಲ್ಲಿ ಉತ್ಪಾದಕ ಪುರಸ್ಕಾರಕ್ಕೆ ಪಾತ್ರರಾಗಿರುವ ಇದೇ ಘಟಕದ ಆರ್.ಅನೂಪ್ ಕುಮಾರ್ ಅವರಿಗೆ ಸಚಿವರು ಪುರಸ್ಕಾರ ಪ್ರದಾನ ಮಾಡಿದರು.

ಇದಲ್ಲದೆ; ವಿವಿಧ ರಾಜ್ಯಗಳ ಕಂಪನಿಗಳ ಘಟಕಗಳ ಮುಖ್ಯಸ್ಥರು, ಸಿಬ್ಬಂದಿ ಸೇರಿ ಅನೇಕರು ಹಲವಾರು ಪುರಸ್ಕಾರಗಳಿಗೆ ಪಾತ್ರರಾದರು.

Also read: ಶಿಕ್ಷಣಕ್ಕೆ ಪೂರಕವಾದ ವಾತಾವರಣ ಲಭಿಸಿದಾಗ ಸುಶಿಕ್ಷಿತರಾಗಲು ಸಾಧ್ಯ

ಬಿಹೆಚ್ಇಎಲ್’ಗೆ ಎಲ್ಲಾ ಸಹಕಾರ:

ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಕಂಪನಿಯ ಅಭಿವೃದ್ಧಿಗೆ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡುತ್ತಿದೆ. ಎಲೆಕ್ಟ್ರಿಕಲ್ ಕ್ಷೇತ್ರದಲ್ಲಿ ದೇಶೀಯ, ವಿದೇಶಿ ಮಟ್ಟದಲ್ಲಿ ಅಪಾರ ಮಟ್ಟದ ಬೇಡಿಕೆಗಳನ್ನು ಗಳಿಸುತ್ತಿರುವ ಕಂಪನಿ ದಕ್ಷತೆ, ಕ್ಷಮತೆಗೆ ಹೆಸರಾಗಿದೆ. ಈ ಹಿನ್ನೆಲೆಯಲ್ಲಿ ಸಚಿವಾಲಯದ ವತಿಯಿಂದ ಕಂಪನಿಗೆ ಸರ್ವ ಸಹಕಾರ ಕೊಡಲಾಗುವುದು ಎಂದು ಸಚಿವ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು 2047ಕ್ಕೆ ವಿಕಸಿತ ಭಾರತ ಕನಸು ಹೊಂದಿದ್ದು, ಅದರ ಸಾಕಾರಕ್ಕಾಗಿ ನಾವು ಹಗಲಿರುಳು ಕ್ಕೆಲಸ ಮಾಡುತ್ತಿದ್ದೇವೆ. ನಮ್ಮ ಪ್ರಯತ್ನದಲ್ಲಿ ಬಿಹೆಚ್ಇಎಲ್ ಪಾತ್ರ ದೊಡ್ಡದು ಎಂದು ಸಚಿವರು ಹೇಳಿದರು.

ಇಂಧನ ಕ್ಷೇತ್ರದ ಜತೆಗೆ ರಕ್ಷಣೆ, ಬಾಹ್ಯಾಕಾಶ ಕ್ಷೇತ್ರಗಳಿಗೆ ಬಿಹೆಚ್ಇಎಲ್ ನಿರ್ಣಾಯಕ ಕೊಡುಗೆ ಕೊಟ್ಟಿದೆ. ದೇಶೀಯ ಆರ್ಥಿಕವಾಗಿ ರಾಷ್ಟ್ರಕ್ಕೆ ಅತಿಹೆಚ್ಚು ಕೊಡುಗೆ ನೀಡುತ್ತಿದೆ ಎನ್ನುವುದು ಹೆಮ್ಮೆಯ ವಿಷಯ. ಮೆಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ ಪರಿಕಲ್ಪನೆಗಳ ಅಡಿಯಲ್ಲಿ ಸಮರ್ಥವಾಗಿ ಬಿಹೆಚ್ಇಎಲ್ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.
ಕಳೆದ ವರ್ಷ ನಾನು ಬೆಂಗಳೂರಿನ ಬಿಹೆಚ್ಇಎಲ್ ಘಟಕದ ವಿದ್ಯುನ್ಮಾನ ಘಟಕಕ್ಕೆ ಭೇಟಿ ನೀಡಿದ್ದೆ. ಅಲ್ಲಿನ ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಕಣ್ಣಾರೆ ಕಂಡಿದ್ದೇನೆ. ಈ ದಿನ ಎರಡು ವರ್ಷಗಳ ಉತ್ಕೃಷ್ಟತಾ ಪುರಸ್ಕಾರ ಸೇರಿ ಇತರೆ ಪುರಸ್ಕಾರಗಳನ್ನು ಆ ಘಟಕ ಪಡೆದುಕೊಂಡಿದೆ. ಇತರೆ ಭಾಗಗಳ ಘಟಕಗಳೂ ಸಾಧನೆಯಲ್ಲಿ ಹಿಂದೆ ಬಿದ್ದಿಲ್ಲ. ಕಂಪನಿಯ ಭವಿಷ್ಯ ಉಜ್ವಲವಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬೃಹತ್ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವಿ, ಬಿಹೆಚ್ಇಎಲ್ ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕ ಕೆ.ಸದಾಶಿವ ಮೂರ್ತಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು, ಕಂಪನಿಯ ನಿರ್ದೇಶಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: 'ಉತ್ಕೃಷ್ಟತಾ ಪುರಸ್ಕಾರ'BHELH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaUthkrushta Puraskaraನವದೆಹಲಿಹೆಚ್.ಡಿ. ಕುಮಾರಸ್ವಾಮಿ
Previous Post

ಶಿಕ್ಷಣಕ್ಕೆ ಪೂರಕವಾದ ವಾತಾವರಣ ಲಭಿಸಿದಾಗ ಸುಶಿಕ್ಷಿತರಾಗಲು ಸಾಧ್ಯ

Next Post

Minister George Instructs CESC to Submit Proposal for Additional 2 Hrs of Power for Mandya Sugarcane Farmers

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Minister George Instructs CESC to Submit Proposal for Additional 2 Hrs of Power for Mandya Sugarcane Farmers

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಗ್ನಿಶಾಮಕ ಠಾಣೆಗೆ ಜಾಗ ನೀಡದ ಜಿಲ್ಲಾಡಳಿತ, ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬೆಲ್ದಾಳೆ, ಗೃಹ ಮಂತ್ರಿ ಅಸಹಾಯಕ ನುಡಿ

August 13, 2025
Internet Image

ಗಮನಿಸಿ! ಆ.14ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

August 13, 2025

ಪೆಹಲ್ಗಾಮ್‌ ಘಟನೆಗೆ ಅಪರೇಶನ್ ಸಿಂಧೂರ ತಕ್ಕ ಉತ್ತರ: ಬಿಜೆಪಿ ಮುಖಂಡ ಜ್ಞಾನೇಶ್

August 13, 2025

ಹೊಸ ಮನೆ ನಿರ್ಮಾಣಕ್ಕೆ ವಿದ್ಯುತ್ ಸಂಪರ್ಕದ ಒಸಿ ಬಿಸಿ!

August 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಗ್ನಿಶಾಮಕ ಠಾಣೆಗೆ ಜಾಗ ನೀಡದ ಜಿಲ್ಲಾಡಳಿತ, ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬೆಲ್ದಾಳೆ, ಗೃಹ ಮಂತ್ರಿ ಅಸಹಾಯಕ ನುಡಿ

August 13, 2025
Internet Image

ಗಮನಿಸಿ! ಆ.14ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

August 13, 2025

ಪೆಹಲ್ಗಾಮ್‌ ಘಟನೆಗೆ ಅಪರೇಶನ್ ಸಿಂಧೂರ ತಕ್ಕ ಉತ್ತರ: ಬಿಜೆಪಿ ಮುಖಂಡ ಜ್ಞಾನೇಶ್

August 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!