No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹೊಸ ವರ್ಷಕ್ಕೆ ಗುಡ್‌ನ್ಯೂಸ್ | ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಪ್ರಯತ್ನ ಫಲಕಾರಿ

ಪ್ರಧಾನಿ ಕಾರ್ಯಾಲಯದ ಜತೆ ಕೇಂದ್ರದ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ

kalpa News by kalpa News
January 1, 2025
in ರಾಷ್ಟ್ರೀಯ
0
ಹೊಸ ವರ್ಷಕ್ಕೆ ಗುಡ್‌ನ್ಯೂಸ್ | ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಪ್ರಯತ್ನ ಫಲಕಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಬಹುತೇಕ ಖಾಸಗೀಕರಣದ ಹೊಸ್ತಿಲಲ್ಲಿದ್ದ ಭಾರತೀಯ ರಾಷ್ಟ್ರೀಯ ಉಕ್ಕು ನಿಗಮ (RINL) ಅಥವಾ ವೈಜಾಗ್ ಸ್ಟೀಲ್ ಕಾರ್ಖಾನೆಯನ್ನು #Vizag Steel Plant ಹೊಸ ವರ್ಷದಲ್ಲಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ #Minister H D Kumaraswamy ಅವರ ಅವಿರತ ಪ್ರಯತ್ನ ಫಲಕಾರಿಯಾಗಿದೆ.

ಹೊಸ ವರ್ಷದ ಆರಂಭದಲ್ಲಿಯೇ ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಯೋಜನೆ ಘೋಷಣೆ ಆಗುವ ಸಾಧ್ಯತೆ ಇದೆ.

2030ಕ್ಕೆ ದೇಶದ ಉಕ್ಕು ಉತ್ಪಾದನೆ ಪ್ರಮಾಣವನ್ನು 300 ದಶಲಕ್ಷ ಟನ್ ಗಳಿಗೆ ಹೆಚ್ಚಿಬೇಕು ಎಂದು ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ನಿಗದಿ ಮಾಡಿರುವ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಕೇಂದ್ರ ಉಕ್ಕು ಸಚಿವರು ಈ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದ್ದಾರೆ.

ನಮ್ಮ ಪ್ರಯತ್ನ ಉಕ್ಕಿನ ಸ್ಥಾವರವನ್ನು ಪುನರುಜ್ಜೀವನಗೊಳಿಸುವುದಷ್ಟೇ ಅಲ್ಲ, ಸಾವಿರಾರು ಕಾರ್ಮಿಕರ ಕುಟುಂಬಗಳ ಜೀವನೋಪಾಯ ಕಾಪಾಡುವುದೇ ಆಗಿದೆ. ದೇಶೀಯ ಉಕ್ಕು ಉತ್ಪಾದನೆಯನ್ನು ಹೆಚ್ಚಿಸುವುದು, ಆಮದು ಮೇಲಿನ ಅವಲಂಬನೆ ಕಡಿಮೆ ಮಾಡುವುದು ನಮ್ಮ ಗುರಿ. ವೈಜಾಗ್ ಸ್ಟೀಲ್ ಭಾರತದ ಕೈಗಾರಿಕೆ ಕ್ಷೇತ್ರದ ಶಕ್ತಿ ಮತ್ತು ಹೆಮ್ಮೆಯ ಸಂಕೇತ, ಮತ್ತು ಅದರ ಯಶಸ್ಸು ಯಾವುದೇ ಸವಾಲನ್ನು ಜಯಿಸುವ ಭಾರತದ ಸಾಮರ್ಥ್ಯದ ಬಗ್ಗೆ ವಿಶ್ವಾಸವನ್ನು ನೀಡುತ್ತದೆ.

ಹೆಚ್.ಡಿ.ಕುಮಾರಸ್ವಾಮಿ, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರು

ಶೇ.100ರಷ್ಟು ಬಂಡವಾಳ ವಾಪಸಾತಿ ನಿರ್ಧಾರದಿಂದ ಪೂರ್ಣ ಪ್ರಮಾಣದಲ್ಲಿ ಖಾಸಗೀಕರಣ ಆಗುವ ಹಂತದಲ್ಲಿದ್ದ ವೈಜಾಗ್ ಸ್ಟೀಲ್ ಗೆ ಕೊನೆಗೂ ಜೀವದಾನವಾಗುತ್ತಿದೆ. ಈ ಬಗ್ಗೆ ಕಾರ್ಖಾನೆಗೆ ಮರುಜೀವ ಕೊಡುವ ಪುನಶ್ಚೇತನ ಯೋಜನೆಯ ಬಗ್ಗೆ ಪ್ರಧಾನಮಂತ್ರಿಗಳ ಕಾರ್ಯಾಲಯದ ಜತೆ ಕೇಂದ್ರ ಸಚಿವರು ವಿಸ್ತೃತ ಸಮಾಲೋಚನೆ ನಡೆಸಿದ್ದಾರೆ.

Also read: ಶಿವಮೊಗ್ಗ | ತಡರಾತ್ರಿ ನಗರದಲ್ಲಿ ಭೀಕರ ಅಪಘಾತ | ಓರ್ವ ಬಲಿ | ಘಟನೆ ಹೇಗಾಯ್ತು?

ಪ್ರಧಾನಿಗಳ ಕನಸಿನ ‘ವಿಕಸಿತ ಭಾರತ 2047’ ಗುರಿ ತಲುಪಲು ಭಾರತೀಯ ಉಕ್ಕು ಕ್ಷೇತ್ರದ ಕೊಡುಗೆ ಮಹತ್ವವಾದದ್ದು. ಈ ದಿಸೆಯಲ್ಲಿ ಪ್ರಧಾನಿಗಳ ಆತ್ಮನಿರ್ಭರ ಭಾರತ ಮತ್ತು ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕೇಂದ್ರ ಸರಕಾರ ಕಾಯಕಲ್ಪ ನೀಡುತ್ತಿದೆ ಎಂದು ಹೇಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ತಾವು ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ 2024 ಜುಲೈ 10-11ರಂದು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಭೇಟಿ ನೀಡಿದ್ದರು.

ನಿರ್ಮಲಾ ಸೀತಾರಾಮನ್ #Nirmala Seetharaman ಅವರ ನೇತೃತ್ವದ ಹಣಕಾಸು ಸಚಿವಾಲಯವು ವೈಜಾಗ್ ಸ್ಟೀಲ್ ಕಾರ್ಖಾನೆ ಪುನಚ್ಚೇತನ ಯೋಜನೆ ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಮುಖ್ಯವಾಗಿ ವಿಶೇಷವಾಗಿ ಕಾರ್ಖಾನೆಯ ಸಾಲಗಳ ಪುನಾರಚನೆ ಮತ್ತು ಹಣಕಾಸಿನ ಬೆಂಬಲದ ಅಗತ್ಯಗಳನ್ನು ಪರಿಹರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೂಡ ಕೇಂದ್ರ ಉಕ್ಕು ಸಚಿವರು ನಿರ್ಮಲಾ ಸೀತಾರಾಮನ್ ಅವರೊಂದಿಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಿದ್ದಾರೆ.

RINL ಭಾರತದ ಉಕ್ಕು ಉದ್ಯಮದ ಆಧಾರ ಸ್ತಂಭ

ವೈಜಾಗ್ ಸ್ಟೀಲ್ ಎಂದೇ ಹೆಸರಾಗಿರುವ RINL, ಪ್ರಾರಂಭದಿಂದಲೂ ಭಾರತದ ಉಕ್ಕು ಕ್ಷೇತ್ರದಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿದೆ. ಅನೇಕ ವರ್ಷಗಳ ಕಾಲ ವೈಭವದಿಂದ ಕಾರ್ಯ ನಿರ್ವಹಿಸಿದ್ದ ಕಾರ್ಖಾನೆಯು, ಇತ್ತೀಚಿನ ವರ್ಷಗಳಲ್ಲಿ ಅತಿಯಾದ ಸಾಲ, ಕಾರ್ಯಾಚರಣೆಯ ಅಸಮರ್ಥತೆ ಮತ್ತು ಜಾಗತಿಕ ಮಾರುಕಟ್ಟೆ ಒತ್ತಡಗಳಿಂದಾಗಿ ತೀವ್ರ ಹಣಕಾಸು ಬಿಕ್ಕಟ್ಟಿಗೆ ಸಿಕ್ಕಿತ್ತು. ಕಾರ್ಖಾನೆಯನ್ನು ಪುನಚ್ಚೇತನಗೊಳಿಸುವುದು ಎಂದರೆ ಕೇವಲ ಕಾರ್ಖಾನೆಯ ರಕ್ಷಣೆ ಮಾತ್ರವಲ್ಲ, ಸಾವಿರಾರು ಕಾರ್ಮಿಕರ ಜೀವನೋಪಾಯವನ್ನು ರಕ್ಷಣೆ ಮಾಡುವುದು ಹಾಗೂ ದೇಶದ ಉಕ್ಕು ಅಗತ್ಯಗಳಿಗಳಿಗೆ ಇದೇ ಕಾರ್ಖಾನೆಯಿಂದ ದೊಡ್ಡ ಕೊಡುಗೆ ನೀಡುವುದೇ ಆಗಿದೆ ಎಂದು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈಗಾಗಲೇ ವೈಜಾಗ್ ಸ್ಟೀಲ್ ಕಾರ್ಖಾನೆಯ ಪುನಚ್ಚೇತನಕ್ಕಾಗಿ ಸರಣಿ ಸಭೆಗಳನ್ನು ನಡೆಸಿರುವ ಸಚಿವರು; ಪ್ರಧಾನಿಗಳ ಕಾರ್ಯಾಲಯ, ಹಣಕಾಸು ಸಚಿವಾಲಯ, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು, ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಕಾರ್ಮಿಕ ಸಂಘಟನೆಗಳ ಜತೆಯೂ ನಿರಂತರ ಮಾತುಕತೆ ನಡೆಸಿದ್ದರು.

ಕಾರ್ಖಾನೆ ಪುನಚ್ಚೇತನ ಎಂದರೆ ಕಾರ್ಖಾನೆ ಹೊಂದಿರುವ ಸಾಲ ಪುನಾರಚನೆ, ಸೌಲಭ್ಯಗಳ ಆಧುನೀಕರಣ, ತಾಂತ್ರಿಕ ಉನ್ನತೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತಿರುವ ಸಚಿವರು; ಜಾಗತಿಕ ಮಾರುಕಟ್ಟೆಯ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಕಾರ್ಖಾನೆಯನ್ನು ಸಜ್ಜುಗೊಳಿಸಲು ಸಚಿವರು ಊದೇಶಿಸಿದ್ದಾರೆ. ಪುನಚ್ಚೇತನ ಯೋಜನೆಯಲ್ಲಿ ಇವೆಲ್ಲಾ ಅಂಶಗಳು ಸೇರಿವೆ.

RINL ಪುನಶ್ಚೇತನ ರಾಷ್ಟ್ರೀಯ ಆದ್ಯತೆ

RINL ಕಾರ್ಖಾನೆಗೆ ಮರುಜೀವ ನೀಡುವ ಯೋಜನೆ ರಾಷ್ಟ್ರೀಯ ಆದ್ಯತೆ ಎಂದು ಬಣ್ಣಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಭಾರತದ ಕೈಗಾರಿಕಾ ಪರಂಪರೆಯನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರ ಸರಕಾರ ಇಟ್ಟಿರುವ ದಿಟ್ಟ ಹೆಜ್ಜೆ ಇದಾಗಿದೆ ಇಂದು ಹೇಳಿದ್ದಾರೆ.

ಪ್ರಧಾನಿಗಳ ಕಾರ್ಯಾಲಯದ ಸ್ಪಷ್ಟ ಭರವಸೆ ಹಾಗೂ ಹಣಕಾಸು ಸಚಿವಾಲಯದ ಸಹಕಾರ ಕಾರ್ಖಾನೆಯನ್ನು ಉಳಿಸುವ ಪಯತ್ನಕ್ಕೆ ಕಾರಣವಾಗಿದೆ. ಇದು ಕೇವಲ ಉಕ್ಕಿನ ಸ್ಥಾವರವನ್ನು ಪುನರುಜ್ಜೀವನಗೊಳಿಸುವುದಷ್ಟೇ ಅಲ್ಲ, ಸಾವಿರಾರು ಕಾರ್ಮಿಕರ ಕುಟುಂಬಗಳ ಜೀವನೋಪಾಯ ಕಾಪಾಡುವುದೇ ಆಗಿದೆ. ಅಲ್ಲದೆ; ದೇಶೀಯ ಉಕ್ಕು ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಆಮದು ಮೇಲಿನ ನಮ್ಮ ಅವಲಂಬನೆಯನ್ನು ಕಡಿಮೆ ಮಾಡುವುದು ನಮ್ಮ ಉದ್ದೇಶವಾಗಿದೆ. ವೈಜಾಗ್ ಸ್ಟೀಲ್ ಭಾರತದ ಕೈಗಾರಿಕೆ ಕ್ಷೇತ್ರದ ಶಕ್ತಿ ಮತ್ತು ಹೆಮ್ಮೆಯ ಸಂಕೇತ, ಮತ್ತು ಅದರ ಯಶಸ್ಸು ಯಾವುದೇ ಸವಾಲನ್ನು ಜಯಿಸುವ ಭಾರತದ ಸಾಮರ್ಥ್ಯದ ಬಗ್ಗೆ ವಿಶ್ವಾಸವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತದ ಭವಿಷ್ಯದ ಅಗತ್ಯಗಳಿಗೆ, ಬೇಡಿಕೆಗಳಿಗೆ ಈ ಕಾರ್ಖಾನೆ ಬಹುದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ಅವರ ಗುರಿಯಾದ ‘ವಿಕಸಿತ ಭಾರತ 2047’ ಗುರಿ ಸಾಧಿಸಲು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ ಕೊಡುವ ಯೋಜನೆ ಮಹತ್ವದ ಉಪಕ್ರಮವಾಗಿದೆ. ರಾಷ್ಟ್ರದ ಹಿತಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಭಾರತದ ಗುರಿಗೆ ಈ ಕಾರ್ಖಾನೆ ಗಣನೀಯ ಕೊಡುಗೆ ನೀಡುತ್ತದೆ ಎನ್ನುವ ವಿಶ್ವಾಸ ಸರ್ಕಾರಕ್ಕೆ ಇದೆ ಎಂದು ಅವರು ಸಚಿವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister H D KumaraswamyNew DelhiNews_in_KannadaNews_KannadaNirmala SeetharamanPM Narendra ModiRINLVizag Steel Plantನವದೆಹಲಿನಿರ್ಮಲಾ ಸೀತಾರಾಮನ್ಪ್ರಧಾನಿ ನರೇಂದ್ರ ಮೋದಿವೈಜಾಗ್ ಸ್ಟೀಲ್ ಕಾರ್ಖಾನೆಸಚಿವ ಹೆಚ್.ಡಿ. ಕುಮಾರಸ್ವಾಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ತಡರಾತ್ರಿ ನಗರದಲ್ಲಿ ಭೀಕರ ಅಪಘಾತ | ಓರ್ವ ಬಲಿ | ಘಟನೆ ಹೇಗಾಯ್ತು?

Next Post

Union Minister H.D. Kumaraswamy Holds Talks with PMO on RINL Revival

kalpa News

kalpa News

Next Post
Union Minister H.D. Kumaraswamy Holds Talks with PMO on RINL Revival

Union Minister H.D. Kumaraswamy Holds Talks with PMO on RINL Revival

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL