ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ #Karur stampede case ಸಂಬಂಧಿಸಿದಂತೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ #Actor Vijay ಅವರನ್ನು ಸಿಬಿಐ ಪ್ರಧಾನ ಕಚೇರಿಯಲ್ಲಿ ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಲಾಗಿದೆ.
ನವದೆಹಲಿಯ ಲೋಧಿ ರಸ್ತೆಯಲ್ಲಿರುವ ಸಿಬಿಐ ಪ್ರಧಾನ ಕಚೇರಿಯಲ್ಲಿರ ವಿಜಯ್ ಅವರನ್ನು ಇಂದು ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಲಾಗಿದೆ.
ವಿಚಾರಣೆಗಾಗಿ ಸಿಬಿಐ #CBI ಪ್ರಧಾನ ಕಚೇರಿಗೆ ವಿಜಯ್ ಅವರು ಐಷಾರಾಮಿ ಎಸ್’ಯುವಿ ಕಾರುಗಳಲ್ಲಿ ಹಲವರೊಟ್ಟಿಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.
ಸಿಬಿಐ ಭ್ರಷ್ಟಾಚಾರ ನಿಗ್ರಹ ಘಟಕದಿಂದ ಆಯ್ಕೆಯಾದ ಉಪ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದ ಅಧಿಕಾರಿಗಳ ತಂಡವು ಅವರನ್ನು ಇಂದು ವಿಚಾರಣೆ ನಡೆಸುತ್ತಿದೆ.
ಜನವರಿ 12 ರಂದು ನವದೆಹಲಿಯ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಜಯ್ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಕಳೆದ ಮಂಗಳವಾರ ಮತ್ತೆ ಬರಲು ಅವರನ್ನು ಸೂಚಿಸಲಾಗಿತ್ತು. ಆದರೆ ಪೊಂಗಲ್ ಹಬ್ಬದ ಕಾರಣ ನಟ ಮತ್ತೊಂದು ದಿನಾಂಕವನ್ನು ಕೋರಿದ್ದರು. ಅದರಂತೆ ಇಂದು ವಿಚಾರಣೆ ನಡೆದಿದೆ.
ಸುಪ್ರೀಂ ಕೋರ್ಟ್ ಆದೇಶದ ನಂತರ ಫೆಡರಲ್ ಏಜೆನ್ಸಿ ಈ ಪ್ರಕರಣವನ್ನು ಎಸ್ಟಿಯಿಂದ ವಹಿಸಿಕೊಂಡಿದೆ.
2025ರ ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ವಿಜಯ್ ಬೃಹತ್ ರ್ಯಾಲಿ ನಡೆಸಿದ್ದರು. ಆ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಬಲಿಯಾಗಿದ್ದರು. ಘಟನೆಯಲ್ಲಿ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇನ್ನೂ ಸಹ ಸಾಕ್ಷಿಗಳನ್ನು ಸಂಗ್ರಹಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















