No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮತಾಂತರ ನಿಷೇಧ ಕಾಯ್ದೆಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 16, 2021
in ಬೆಂಗಳೂರು ನಗರ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ರಾಜ್ಯದ ಬಿಜೆಪಿ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಪಕ್ಷ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಇದು ಅಗತ್ಯವಿಲ್ಲದ ವಿಷಯ ಎಂದು ಪಕ್ಷದ ಶಾಸಕಾಂಗ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದರು.

ಈ ಕಾಯ್ದೆಯನ್ನು ನಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ ಹಾಗೂ ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ಖಡಾತುಂಡವಾಗಿ ವಿರೋಧ ಮಾಡುತ್ತಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಎಲ್ಲರೂ ಗಾಜಿನ ಮನೆಯಲ್ಲಿ ಇದ್ದಾರೆ:
ಬಿಟ್ ಕಾಯಿನ್ ಹಗರಣ ಹಾಗೂ ಗುತ್ತಿಗೆದಾರರಿಂದ ಶೇ.೪೦ರಷ್ಟು ಕಮಿಷನ್ ವಸೂಲಿ ಮಾಡುವ ಬಗ್ಗೆ ಜೆಡಿಎಸ್ ಮಾತನಾಡುತ್ತಿಲ್ಲ ಎನ್ನುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅವರು, ಗುತ್ತಿಗೆದಾರ ಸಂಘದ ಒಬ್ಬರು ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಶೇ.೪೦ರಷ್ಟು ಕಮಿಷನ್ ಅಂತ ಮಾತನಾಡುತ್ತಿದ್ದಾರೆ. ಈ ಪರ್ಸಂಟೇಜ್ ವ್ಯವಹಾರ ಬರಲು ಯಾರು ಕಾರಣ? 10%, 20%, 30%, 40% ಕಮಿಷನ್ ಅಂತ ಹೇಳುವವರಿಗೆ ಆ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಲ್ಲರೂ ಗಾಜಿನ ಮನೆಯಲ್ಲಿ ಇರುವವರೇ. ಗಾಜಿನ ಮನೆಯಲ್ಲಿ ಕೂತು ಕಲ್ಲು ಯಾಕೆ ಹೊಡೆಯುತ್ತಾರೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.

ಯಾರು ಇವತ್ತು ಕಮಿಷನ್ ಬಗ್ಗೆ ಮಾತನಾಡುತ್ತಿದ್ದಾರೆ, ಅದೇ ಕಾಂಗ್ರೆಸ್ ಪಕ್ಷದ ನಾಯಕರು ಐದು ವರ್ಷ ಆಡಳಿತ ನಡೆಸಿದರಲ್ಲ, ಅವರ ಕಾಲದಲ್ಲಿ ಏನೇನಾಯ್ತು ಎಂದು ಹೇಳಬೇಕಲ್ಲ. ಅವರ ಕಾಲದಲ್ಲಿ ಎಷ್ಟು ಪರ್ಸಂಟೇಜ್ ಇತ್ತು ಎನ್ನುವುದು ಅವರಿಗೂ ಗೊತ್ತು. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಖಂಡಿತಾ ಇಲ್ಲ ಎಂದು ಅವರು ಟೀಕಾಪ್ರಹಾರ ನಡೆಸಿದರು.

ನಿಮ್ಮ ಸರಕಾರ ಇದ್ದಾಗ ಈ ಪರ್ಸಂಟೇಜ್ ವ್ಯವಹಾರದ ವಿರುದ್ಧ ಯಾಕೆ ಕ್ರಮ ಜರುಗಿಸಲು ಆಗಲಿಲ್ಲ ಎಂದು ಕೆಲವರು ಕೇಳುತ್ತಿದ್ದಾರೆ. ಸ್ವತಂತ್ರ ಸರಕಾರ ನನಗೆಂದೂ ಬರಲಿಲ್ಲ. ಆದರೆ ಯಾವುದೇ ಕಾರಣಕ್ಕೂ ಪರ್ಸಂಟೇಜ್ ವ್ಯವಸ್ಥೆಯನ್ನು ನನ್ನ ಕಚೇರಿಯಲ್ಲಿ ಇಟ್ಟಿರಲಿಲ್ಲ. ನನ್ನ ಕಾಲದಲ್ಲೂ ಎಲ್ಲೆಲ್ಲಿ ಪರ್ಸಂಟೇಜ್ ಹೋಗ್ತಾ ಇತ್ತು ಎನ್ನುವ ಮಾಹಿತಿ ನನಗೆ ಇತ್ತು. ಮುಂದೆ ನಮ್ಮ ಪಕ್ಷಕ್ಕೆ ಜನರು ಸ್ವತಂತ್ರ ಸರಕಾರ ಕೊಟ್ಟರೆ ಆಗ ಈ ಬಗ್ಗೆ ಚರ್ಚೆ ಮಾಡಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಬಿಜೆಪಿ, ಕಾಂಗ್ರೆಸ್ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಲಿ:
ಪರ್ಸಂಟೇಜ್ ಬಗ್ಗೆ ಮಾತನಾಡುವ ನೈತಿಕತೆ ರಾಜ್ಯದ ಎರಡೂ ಪಕ್ಷಗಳಿಗೆ ಇಲ್ಲ ಎಂದು ಅವರು ಹೇಳಿದರಲ್ಲದೆ, ಪ್ರತಿ ಯೋಜನೆಗೆ ಹಣಕಾಸು ಇಲಾಖೆ ಹೊಂದಿದ್ದ ನನ್ನ ಕಚೇರಿಯಿಂದ ಎಂದೂ ಪರ್ಸಂಟೇಜ್ ವ್ಯವಸ್ಥೆ ಇರಲಿಲ್ಲ. ಅಂತದ್ದಕ್ಕೆ ಪ್ರೋತ್ಸಾಹ ಕೊಟ್ಟಿಲ್ಲ. ಆಗ ನಡೆದಿರುವ ಪರ್ಸಂಟೇಜ್ ವ್ಯವಹಾರದಲ್ಲಿ ನನ್ನ ಪಾತ್ರ ಇಲ್ಲ. ಆದರೆ ಇವತ್ತು ಪರ್ಸಂಟೇಜ್ ಬಗ್ಗೆ ಯಾರು ಯಾರು ಮಾತನಾಡುತ್ತಿದ್ದಾರೆ ಅವರು ತಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಂಡರೆ ಉತ್ತರ ಸಿಗುತ್ತದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಎಲ್ಲರೂ ಗಾಜಿನ ಮನೆಯಲ್ಲಿ ಇದ್ದೇ ಮಾತನಾಡುತ್ತಿದ್ದಾರೆ. ಇವರಿಗೆ ಹಾಗೆ ಮಾತನಾಡಲು ಯಾವ ನೈತಿಕತೆ ಇದೆ. ದೇವರಾಜ ಅರಸು ಅವರ ನಂತರ ಐದು ವರ್ಷ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರ ಸರಕಾರದಲ್ಲಿ ಪರ್ಸಂಟೇಜ್ ವ್ಯವಹಾರ ಇರಲಿಲ್ಲವಾ? ಅವರು ಆತ್ಮ ಮುಟ್ಟಿಕೊಂಡು ಹೇಳ್ತಾರಾ? ಇಂತದ್ದನ್ನು ತಡೆಯಲು ಎಲ್ಲ ಪಕ್ಷಗಳು ಮಾತ್ರ ಅಲ್ಲ, ಜನಪ್ರತಿನಿಧಿಗಳ ಪಾತ್ರ ತುಂಬಾ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಮೆಟ್ರೋ ಉದಾಹರಣೆ ಕೊಟ್ಟ ಹೆಚ್ ಡಿಕೆ:
ನಾನು ಮುಖ್ಯಮಂತ್ರಿ ಆಗಿದ್ದಾಗ ಯಾವುದೇ ಕಡತ ವಿಲೇವಾರಿ ಮಾಡಬೇಕಾದ ಸಂದರ್ಭದಲ್ಲಿ ನಾನು ಪರ್ಸಂಟೇಜ್ ಇಟ್ಟಿರಲಿಲ್ಲ. ಉದಾಹರಣೆಗೆ, ನಮ್ಮ ಮೆಟ್ರೋ ಯೋಜನೆಗೆ, ರಾಜ್ಯದಲ್ಲಿ ಮೊದಲ ಬಾರಿಗೆ 19 ಕಿ.ಮೀ. ದೂರದ ಪ್ರಥಮ ಹಂತಕ್ಕೆ ಚಾಲನೆ ನೀಡಿದ್ದು 2006ರ ನಾನು ಮುಖ್ಯಮಂತ್ರಿ ಆಗಿದ್ದಾಗ. ಆಗ ಟೆಂಡರ್ ಗೆ ಒಪ್ಪಿಗೆ ಕೊಟ್ಟೆ. ಒಂದು ಕ್ಷಣವೂ ತಡ ಮಾಡದೇ ಫೈಲ್ ಕ್ಲಿಯರ್ ಮಾಡಿದೆ. ಆ ಗುತ್ತಿಗೆದಾರ ಯಾರೂ ಅನ್ನೋದು ನನಗೆ ಗೊತ್ತಿರಲಿಲ್ಲ. ನಾನು ಇಟ್ಟ ಷರತ್ತು ಏನೆಂದರೆ, ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಬೇಕು ಎಂತಾ ಹೇಳಿದ್ದು ಮಾತ್ರ. 2018ರಲ್ಲಿ ಕೂಡ ನಾನು ಸಿಎಂ ಆಗಿದ್ದಾಗ ಗುತ್ತಿಗೆದಾರರನ್ನು ಕರೆದು ನಿಮ್ಮ ಕಡತಕ್ಕೆ ಸಹಿ ಹಾಕುತ್ತಿದ್ದೇನೆ, ಇಷ್ಟು ಹಣ ಕೊಡಬೇಕು ಎಂದು ಕೇಳಿದವನಲ್ಲ. ಹೀಗಾಗಿ ಎಲ್ಲರೂ ಗಾಜಿನ ಮನೆಯಲ್ಲಿ ಇದ್ದಿರಪ್ಪ, ಇದರ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿ ಉಳಿಸಿಕೊಂಡಿದ್ದಿರಿ ಎನ್ನುವುದೇ ನನ್ನ ಪ್ರಶ್ನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಅದಕ್ಕೆ ಜನತೆಗೆ ನಾನು ಕೇಳುತ್ತಿದ್ದೇನೆ, ಒಮ್ಮೆ ನನಗೆ ಸ್ವತಂತ್ರ ಸರಕಾರ ನೀಡಲಿ, ಅದರಲ್ಲಿ ನಾನು ವಿಫಲ ಆದರೆ ಅವತ್ತು ನಂಗೇನೂ ಶಿಕ್ಷೆ ಕೊಡಬೇಕೋ ಕೋಡಿ. ಅದು ಬಿಟ್ಟು ಪರ್ಸಂಟೇಜ್ ಹೊಡೆಯುವ ಇಂಥ ಕೆಲಸ ಮಾಡುವವರಿಗೆ ಮತ್ತೆ ಮತ್ತೆ ಅವಕಾಶ ಕೊಟ್ಟರೆ ನಾವು ಹೋರಾಟ ಮಾಡುವುದು ಹೇಗೆ? ಎಂದು ಪ್ರಶ್ನೆ ಮಾಡಿದರು.

ಸಾವಿಲ್ಲದ ಮನೆಯಲ್ಲಿ ಸಾಸಿವೆ ತನ್ನಿ ಎಂದು ಗೌತಮ ಬುದ್ಧ ಹೇಳಿದ ಮಾತನ್ನು ಉಲ್ಲೇಖಿಸಿದ ಅವರು, ಅದೇ ಪರಿಸ್ಥಿತಿ ಈಗ ಎಲ್ಲ ಕಡೆ ಇದೆ. ಇಂಥ ಪರಿಸ್ಥಿಯಲ್ಲಿ ಯಾರ ಬಗ್ಗೆ ಚರ್ಚೆ ಮಾಡ್ತಾರೆ ಕಾಂಗ್ರೆಸ್ ನಾಯಕರು? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Conversion Prohibition ActH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaState Newsನವದೆಹಲಿಮತಾಂತರ ನಿಷೇಧ ಕಾಯ್ದೆಮಾಜಿ ಸಿಎಂ ಕುಮಾರಸ್ವಾಮಿ
Share197Tweet123Send
Previous Post

ನೂತನ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಗೆ ಅಭಿನಂದನೆ

Next Post

ಉತ್ತಮ ಮಾರುಕಟ್ಟೆ ಮೂಲಕ ಗೃಹ ಹಾಗೂ ಗುಡಿ ಕೈಗಾರಿಕೆಗಳ ಆರ್ಥಿಕ ಅಭಿವೃದ್ಧಿ ಸಾಧ್ಯ : ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಜ್ಞರ ಜೊತೆ ಚರ್ಚಿಸಿ ನೈಟ್ ಕರ್ಫ್ಯೂ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ಉತ್ತಮ ಮಾರುಕಟ್ಟೆ ಮೂಲಕ ಗೃಹ ಹಾಗೂ ಗುಡಿ ಕೈಗಾರಿಕೆಗಳ ಆರ್ಥಿಕ ಅಭಿವೃದ್ಧಿ ಸಾಧ್ಯ : ಸಿಎಂ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL