Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮೈಸೂರು ಜಿಲ್ಲೆಗೆ ಸಾಲು ಸಾಲು ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಸಾಂಸ್ಕೃತಿಕ ನಗರಿ ಹಾಗೂ ಜಿಲ್ಲೆಗೆ ಕೇಂದ್ರ ಸರ್ಕಾರ ಏನೆಲ್ಲಾ ಅನುಮತಿ ನೀಡಿದೆ?

January 8, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ #Ashwin Vaishnav ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರಿಗೆ ಭರವಸೆ ನೀಡಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು; ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ತೆರೆಯುವಂತೆ ರೇಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು ಕುಮಾರಸ್ವಾಮಿ ಅವರು. ರೇಲ್ವೆ ಸುರಕ್ಷತೆಗೆ ಮೈಸೂರು ಭಾಗದಲ್ಲಿ ಹೆಚ್ಚು ಆದ್ಯತೆ ಕೊಡಬೇಕಿದೆ ಹಾಗೂ ಈ ಭಾಗದಲ್ಲಿ ಪ್ರಯಾಣಿಕರ ದಟ್ಟಿಣಿಯು ಹೆಚ್ಚಾಗಿದ್ದು, ಒಟ್ಟಾರೆ ರೇಲ್ವೆ ಸುರಕ್ಷತೆಯು ಮಹತ್ವದ ಅಂಶವಾಗಿದೆ ಎಂದು ಕುಮಾರಸ್ವಾಮಿ ಅವರು ರೇಲ್ವೆ ಸಚಿವರಿಗೆ ಮನವಿ ಮಾಡಿಕೊಟ್ಟರು. ಈ ಬಗ್ಗೆ ತಕ್ಷಣವೇ ಗಮನ ಹರಿಸುವುದಾಗಿ ರೇಲ್ವೆ ಸಚಿವರು ಭರವಸೆ ನೀಡಿದರು.
ದೇವೇಗೌಡರು #Devegowda ಪ್ರಧಾನಿಯಾಗಿದ್ದಾಗ ಕೆ.ಆರ್.ನಗರದಲ್ಲಿದ್ದ ಹಳೆಯ ರೈಲು ನಿಲ್ದಾಣವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಹಳೆಯ ನಿಲ್ದಾಣದ ಜಾಗ ಹಾಗೆಯೇ ಖಾಲಿ ಉಳಿದಿದ್ದು, ಭೂಸ್ವಾಧೀನದ ಸಮಸ್ಯೆ ಇಲ್ಲ ಎಂದು ಅಶ್ವಿನಿ ವೈಷ್ಣವ ಅವರಿಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ಬಂದರೆ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಸ್ಥಳೀಯ ಯುವಕರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ದುಡಿಮೆಗೆ ಅವಕಾಶ ಲಭ್ಯವಾಗುತ್ತದೆ. ಮೈಸೂರು ಭಾಗದ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಸಚಿವರು ಹೇಳಿದರು.

ಇದಲ್ಲದೆ; ರಾಜ್ಯದಲ್ಲಿ ಬಾಕಿ ಇರುವ ವಿವಿಧ ರೇಲ್ವೆ ಯೋಜನೆಗಳನ್ನು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಕುಮಾರಸ್ವಾಮಿ ಅವರು ರೇಲ್ವೆ ಸಚಿವರ ಜತೆ ಚರ್ಚಿಸಿದರು.

ರಾಮನಗರ – ಚನ್ನಪಟ್ಟಣ ನಡುವೆ ರೇಲ್ವೆ ಲೆವೆಲ್ ಕ್ರಾಸಿಂಗ್ -44/100-200 ಬಳಿ ರೇಲ್ವೆ ಮೇಲು ಸೇತುವೆ (ಫ್ಲೈ ಓವರ್) ನಿರ್ಮಾಣದ ಬಗ್ಗೆಯೂ ಕುಮಾರಸ್ವಾಮಿ ಅವರು ಸಲ್ಲಿಸಿದ ಮನವಿಗೆ ರೇಲ್ವೆ ಸಚಿವರು ಒಪ್ಪಿಗೆ ನೀಡಿದರು. ಈ ಬಗ್ಗೆಯೂ ಕೂಡಲೇ ಕ್ರಮ ವಹಿಸುವುದಾಗಿ ಅವರು ಭರವಸೆ ನೀಡಿದರು.

ಬೆಂಗಳೂರು – ಮಂಗಳೂರು ನಡುವಿನ ರೇಲ್ವೆ ಮಾರ್ಗದಲ್ಲಿ ಪ್ರಮುಖದ್ದಾಗಿರುವ ಸಕಲೇಶಪುರ ರೇಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಮನವಿಗೂ ಸ್ಪಂದಿಸಿದ ಸಚಿವರು, ಈ ಕಾರ್ಯವನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ ಅತ್ಯಾಧುನಿಕ ರೇಲ್ವೆ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅಶ್ವಿನಿ ವೈಷ್ಣವ ಅವರು ಸಚಿವರಿಗೆ ತಿಳಿಸಿದರು.
ರೇಲ್ವೆ ಸಚಿವರಿಗೆ ಹೆಚ್ ಡಿ ಮಾಡಿದ ಮನವಿಗಳು:

  • ಚನ್ನಪಟ್ಟಣ – ಬೆಂಗಳೂರು – ಮೈಸೂರು ವಿಭಾಗದಲ್ಲಿ ಪ್ರಮುಖವಾದ ಎಲ್ಲಾ ರೇಲುಗಳ ನಿಲುಗಡೆ.
  • ಹಾಸನ, ಮಂಗಳೂರು ಒಳಗೊಂಡ ಮುಂಬಯಿ – ಬೆಂಗಳೂರು – ಮುಂಬಯಿ  ಮಾರ್ಗದಲ್ಲಿ ಹೊಸ ರೈಲಿಗೆ ಮಂಜೂರು.
  • ಮದ್ದೂರು ಮತ್ತು ಮಂಡ್ಯದಲ್ಲಿ ಬೆಂಗಳೂರು – ಮಂಗಳೂರು – ಮುರುಡೇಶ್ವರ ನಡುವೆ ಸಂಚರಿಸುವ 16585 ರೇಲಿನ ನಿಲುಗಡೆ.
  • ಕೊಪ್ಪಳ ಜಿಲ್ಲೆಯಲ್ಲಿ ಹೊಸ ಬ್ರಾಡ್ ಗೇಜ್ ರೇಲ್ವೆ ಮಾರ್ಗಗಳ ಮಂಜೂರಾತಿ.
  • ಹೆಜ್ಜಾಲ- ಕನಕಪುರ – ಮಳವಳ್ಳಿ – ಕೊಳ್ಳೇಗಾಲ – ಯಳಂದೂರು – ಚಾಮರಾಜನಗರ ರೈಲು ಮಾರ್ಗಕ್ಕೆ ಶೀಘ್ರ ಅನುಮತಿ.

ರಾಜ್ಯಕ್ಕೆ ಸಂಬಂಧಪಟ್ಟ ಇಷ್ಟೂ ಮನವಿಗಳಿಗೆ ರೇಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ರೇಲ್ವೆ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲಾಗುವುದು ಹಾಗೂ ಹೊಸ ಯೋಜನೆಗಳ ಬಗ್ಗೆಯೂ ಅಗತ್ಯ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಇಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Also read: ಗಮನಿಸಿ! ರೈಲ್ವೆ ಇಲಾಖೆಯಲ್ಲಿ 1000 ಹುದ್ದೆ ನೇಮಕಾತಿ | ಯಾರೆಲ್ಲಾ ಅರ್ಹರು? ಅರ್ಜಿ ಹಾಕುವುದು ಹೇಗೆ?

ಉಕ್ಕು ಮತ್ತು ಅದಿರು ಸಾಗಣಿಕೆಗೆ ರೇಲ್ವೆ ಸಹಕಾರ:

ದೇಶಾದ್ಯಂತ ಉಕ್ಕು ಮತ್ತು ಅದಿರು ಸಾಗಾಣಿಕೆಗೆ ರೇಲ್ವೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಉಕ್ಕು ಸಚಿವರಿಗೆ ರೇಲ್ವೆ ಸಚಿವರು ಭರವಸೆ ಕೊಟ್ಟರು.

ರೇಲ್ವೆ ವಶದಲ್ಲಿರುವ ಖಾಲಿ ಜಾಗದಲ್ಲಿ ಅದಿರು ಸಾಗಾಣಿಕೆಗೆ ಪೈಪ್ ಲೈನ್ ನಿರ್ಮಾಣಕ್ಕೆ ಅವಕಾಶ, ಅದಿರು ಮತ್ತು ಉಕ್ಕು ಸಾಗಾಣಿಕೆಗೆ ಹೆಚ್ಚುವರಿ ರಾಕ್ ಗಳನ್ನು ಒದಗಿಸಬೇಕು ಎಂಬ ಮಾನವಿಗೂ ರೇಲ್ವೆ ಸಚಿವರು ಸ್ಪಂದಿಸಿದರು. ಜತೆಗೆ, ಇಬ್ಬರು ಸಚಿವರೂ ರಾಷ್ಟ್ರದ ಅಭಿವೃದ್ಧಿ ಬಗ್ಗೆ ಹಲವಾರು ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು.

ಇದೇ ವೇಳೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರ ಜತೆ ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಕಾಶೆಂಪೂರ್ ಹಾಗೂ ಸಾ.ರಾ.ಮಹೇಶ್ ಅವರು ಇದ್ದರು.

₹150ರಿಂದ 200 ಕೋಟಿ ಹೂಡಿಕೆ; ಪ್ರತೀ ವರ್ಷ 600 ಮಂದಿಗೆ ತರಬೇತಿ

ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ ಸ್ಥಾಪನೆ  ಬಗ್ಗೆ ಕೇಂದ್ರ ಸಚಿವರ ಜತೆಯಲ್ಲಿದ್ದು ರೇಲ್ವೆ ಸಚಿವರಿಗೆ ಮನವಿ ಸಲ್ಲಿಸಿದ ವೇಳೆ ಉಪಸ್ಥಿತರಿದ್ದ ಸಾ.ರಾ.ಮಹೇಶ್ ಅವರು ಮತ್ತಷ್ಟು ಮಾಹಿತಿ ಹಂಚಿಕೊಂಡರು.

ತರಬೇತಿ ಕೇಂದ್ರಕ್ಕೆ ಕೇಂದ್ರ ಸರ್ಕಾರ ₹150ರಿಂದ 200 ಕೋಟಿ ಹೂಡಿಕೆ ಮಾಡಲಿದೆ. ಪ್ರತೀ ವರ್ಷ 600 ಮಂದಿಗೆ ತರಬೇತಿ ದೊರೆಯಲಿದೆ. ಮೈಸೂರು ಅದರಲ್ಲಿಯೂ ಕೆ ಆರ್ ನಗರ ತಾಲೂಕು ಅಭಿವೃದ್ಧಿಗೆ ದೊಡ್ಡ ಕೊಡುಗೆ ಸಿಕ್ಕಿದಂತೆ ಆಗುತ್ತದೆ. ಸ್ಥಳೀಯರಿಗೆ ಹೆಚ್ಚೆಚ್ಚು ಉದ್ಯೋಗ ಲಭ್ಯವಾಗಲಿದೆ. ಈ ಸಂಬಂಧ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಹಾಗೂ ಮಂಡ್ಯ ಸಂಸದರು, ಕೇಂದ್ರದ ಬೃಹತ್ ಕೈಗಾರಿಕೆ – ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Ashwin VaishnavDevegowdaH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_Kannadaಅಶ್ವಿನಿ ವೈಷ್ಣವದೇವೇಗೌಡನವದೆಹಲಿಹೆಚ್.ಡಿ. ಕುಮಾರಸ್ವಾಮಿ
Previous Post

ಗಮನಿಸಿ! ರೈಲ್ವೆ ಇಲಾಖೆಯಲ್ಲಿ 1000 ಹುದ್ದೆ ನೇಮಕಾತಿ | ಯಾರೆಲ್ಲಾ ಅರ್ಹರು? ಅರ್ಜಿ ಹಾಕುವುದು ಹೇಗೆ?

Next Post

ರಾಜ್ಯದ 14 ಜಿಲ್ಲೆ, 41 ತಾಲ್ಲೂಕು, 1199 ಗ್ರಾಪಂಗಳಲ್ಲಿ ಅಟಲ್ ಭೂಜಲ ರಥಕ್ಕೆ ಚಾಲನೆ | ಏನಿದರ ವಿಶೇಷ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯದ 14 ಜಿಲ್ಲೆ, 41 ತಾಲ್ಲೂಕು, 1199 ಗ್ರಾಪಂಗಳಲ್ಲಿ ಅಟಲ್ ಭೂಜಲ ರಥಕ್ಕೆ ಚಾಲನೆ | ಏನಿದರ ವಿಶೇಷ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!