ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸಾಕೇತ್ನಲ್ಲಿ ನಡೆದ ಭೀಕರ ಕಟ್ಟಡ ಕುಸಿತ Saketh building collapse ಘಟನೆಗೆ ಕೆಲವೇ ದಿನಗಳ ಬಳಿಕ, ದೆಹಲಿ ಲೆಫ್ಟಿನೆಂಟ್ ಗವರ್ನರ್ ತರಣಜಿತ್ ಸಿಂಗ್ ಸಂಧು ಅವರು ನಗರದಲ್ಲಿ ಅನಧಿಕೃತ ಕಟ್ಟಡ ವಿಸ್ತರಣೆಗಳನ್ನು ತಡೆಯಲು ಕಟ್ಟಡ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಮಹಾನಗರ ಪಾಲಿಕೆ (MCD)ಗೆ Mahanagara Palike ನಿರ್ದೇಶನ ನೀಡಿದ್ದಾರೆ.
ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಎಂಸಿಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಎಲ್ಜಿ, ನಗರಾಡಳಿತವನ್ನು ಬಲಪಡಿಸುವುದು, ನಾಗರಿಕ ಮೂಲಸೌಕರ್ಯವನ್ನು ಸುಧಾರಿಸುವುದು ಹಾಗೂ ಕಟ್ಟಡಗಳ ಸುರಕ್ಷತೆಯನ್ನು ಖಚಿತಪಡಿಸುವುದಕ್ಕಾಗಿ ಸಮಗ್ರ ಕಾರ್ಯಯೋಜನೆ ರೂಪಿಸಲು ಸೂಚಿಸಿದರು. ಈ ಕುರಿತು ಅವರು ಬುಧವಾರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶನಿವಾರ ಸಾಕೇತ್ನಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು. ಘಟನೆಯ ಬಳಿಕ ಕಟ್ಟಡ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಹಲವು ದೋಷಗಳು ಬಹಿರಂಗಗೊಂಡಿವೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಂಸಿಡಿ ಈಗಾಗಲೇ ಇಬ್ಬರು ಇಂಜಿನಿಯರ್ಗಳನ್ನು ಅಮಾನತು ಮಾಡಿದೆ.
Also read: ಹಾಂಗ್ ಕಾಂಗ್ ಓಪನ್ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ
ಅನಧಿಕೃತ ಕಟ್ಟಡ ನಿರ್ಮಾಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಕಾಲಮಿತಿಯೊಳಗಿನ ಯೋಜನೆ ರೂಪಿಸಿ ಜಾರಿಗೆ ತರಲು ಎಲ್ಜಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಭೆಯಲ್ಲಿ ಮಳೆಗಾಲದ ಮುನ್ನ ಮಳೆಯ ನೀರಿನ ಕಾಲುವೆಗಳನ್ನು ಸ್ವಚ್ಛಗೊಳಿಸುವುದು, ಧೂಳು ನಿಯಂತ್ರಣಕ್ಕಾಗಿ ರಸ್ತೆ ಮತ್ತು ಪಾದಚಾರಿ ಮಾರ್ಗಗಳ ದುರಸ್ತಿ, ತ್ಯಾಜ್ಯ ವಿಲೇವಾರಿಯನ್ನು ಗಟ್ಟಿಗೊಳಿಸುವುದು ಸೇರಿದಂತೆ ಪ್ರಮುಖ ನಾಗರಿಕ ವಿಷಯಗಳನ್ನೂ ಪರಿಶೀಲಿಸಲಾಯಿತು.
ಇದಲ್ಲದೆ, ಅನಧಿಕೃತ ಕಾಲೊನಿಗಳ ನಿವಾಸಿಗಳಿಗೆ ನೆರವಾಗುವ ಪಿಎಂ-ಉಡೆಯ್ ಯೋಜನೆಯನ್ನು ವೇಗಗೊಳಿಸುವುದು ಹಾಗೂ ಸಾರ್ವಜನಿಕ ಉದ್ಯಾನವನಗಳ ಪುನರುಜ್ಜೀವನಕ್ಕಾಗಿ ಪಾಲುದಾರಿಕ ಸಿಎಸ್ಆರ್ ಚಟುವಟಿಕೆ ರೂಪಿಸುವುದರ ಬಗ್ಗೆ ಚರ್ಚಿಸಲಾಯಿತು.
ನಗರದಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















