ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ಇತಿಹಾಸದಲ್ಲೇ ಅತ್ಯಂತ ದೊಡ್ಡ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳ ಕಾರ್ಯಾಚರಣೆ ಬೆನ್ನಲ್ಲೇ ಕೇಂದ್ರ ಸರ್ಕಾರ ಉನ್ನತ ಮಟ್ಟದ ತುರ್ತು ಸಭೆ ನಡೆಸಿದೆ.
ಗೃಹ ಸಚಿವ ಅಮಿತ್ ಶಾ Home Minister Amith Shah ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ Ajith Doval ಅವರ ನೇತೃತದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುತ್ತಿದ್ದು, ದೇಶದಾದ್ಯಂತ ಇಂದು ನಡೆದ ಎನ್’ಐಎ ದಾಳಿಯ ಕುರಿತಾಗಿ ಮಾಹಿತಿ ಪಡೆದಿದ್ದಾರೆ.
ದಾಳಿ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತಿರುವ ಅಮಿತ್ ಶಾ ಹಾಗೂ ಧೋವಲ್, ಮುಂದಿನ ಕ್ರಮಗಳ ಕುರಿತಾಗಿ ಚರ್ಚೆ ನಡೆಸುತ್ತಿದ್ದಾರೆ.
ಪ್ರಮುಖವಾಗಿ ಕರ್ನಾಟಕ ಹಾಗೂ ಕೇರಳದಲ್ಲಿ ನಡೆದ ಹತ್ಯೆಗಳಿಗೆ ಪಿಎಫ್’ಐ ಹಾಗೂ ಉಗ್ರಗಾಮಿ ಸಂಘಟನೆಗಳ ಸಂಪರ್ಕ ಇರುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ವರದಿಯಾಗಿದೆ.
ಅಲ್ಲದೇ, ಪಿಎಫ್`ಐ ಸಂಘಟನೆಯನ್ನು ಬ್ಯಾನ್ ಮಾಡುವ ಕುರಿತಾಗಿ ಚರ್ಚೆ ನಡೆದಿದ್ದು, ಇದರ ಸಾಧಕ ಬಾಧಕಗಳ ಕುರಿತಾಗಿ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post