ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಯೋಧ್ಯೆಯಲ್ಲಿ ರಾಮಮಂದಿರ Ayodhya Ramamandira ಪ್ರತಿಷ್ಠಾಪನಾ ಸಮಾರಂಭದ ಹಿನ್ನಲೆಯಲ್ಲಿ ಜನವರಿ 22ರಂದು ಸಾರ್ವಜನಿಕ ವಲಯದ ಬ್ಯಾಂಕುಗಳು, ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ಮಧ್ಯಾಹ್ನ 2.30ರವರೆಗೆ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಹಣಕಾಸು ಸಚಿವಾಲಯ ಪ್ರಕಟನೆ ಹೊರಡಿಸಿದ್ದು, ಎಲ್ಲಾ ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಗಳು, ಜೀವವಿಮಾ ನಿಗಮ ಕಂಪನಿಗಳು, ಪಬ್ಲಿಕ್ ಸೆಕ್ಟರ್ ಹಣಕಾಸು ಸಂಸ್ಥೆಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ.
Also read: ಹಸನ್ಮುಖಿ ಬಾಲರಾಮನ ಪೂರ್ಣ ಫೋಟೋ ಬಹಿರಂಗ: ಹೇಗಿದ್ದಾನೆ ನೋಡಿ ಹಿಂದೂ ಹೃದಯ ಸಾಮ್ರಾಟ
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ವೀಕ್ಷಣೆಗಾಗಿ ಕೇಂದ್ರ ಸರ್ಕಾರದ ನೌಕರರಿಗೆ ಜನವರಿ 22ರಂದು ಮಧ್ಯಾಹ್ನ 2.30ರವರೆಗೆ ರಜೆ ಘೋಷಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post