ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದಕ್ಷಿಣ ಸುಡಾನ್ನ ಪಶ್ಚಿಮ ಕೊರ್ಡೋಫಾನ್ ರಾಜ್ಯದಲ್ಲಿ ಚಿನ್ನದ ಗಣಿಯಲ್ಲಿ ಕುಸಿತ ಸಂಭವಿಸಿದ ಪರಿಣಾಮ ಕನಿಷ್ಠ 38 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ‘ಉಮ್ ಡ್ರೈಸಾಯಾ ಗಣಿಯಲ್ಲಿ ಕುಸಿತದ ಪರಿಣಾಮವಾಗಿ ಸಾವಿಗೀಡಾದ 38 ಗಣಿ ಕಾರ್ಮಿಕರಿಗೆ ಸುಡಾನ್ನ ಮಿನರಲ್ ರಿಸೋರ್ಸಸ್ ಕಂಪನಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೆಶಕ ಸಂತಾಪ ವ್ಯಕ್ತಪಡಿಸಿದ್ದಾರೆ’ ಎಂದು ಮಂಗಳವಾರ ಹೇಳಿಕೆಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.
ಸುಡಾನ್ ನಲ್ಲಿ ಭೀಕರ ಗಣಿ ದುರಂತ ಸಂಭವಿಸಿದ್ದು, ಭೂಕುಸಿತ ಉಂಟಾಗಿ ಕನಿಷ್ಠ 38 ಮಂದಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಕಂಪನಿಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.
ಕುಸಿದಿರುವ ಚಿನ್ನದ ಗಣಿಯು ಪಶ್ಚಿಮ ಕೊರ್ಡೋಫಾನ್ ರಾಜ್ಯದ ಎಲ್ ನುಹುದ್ ಪಟ್ಟಣದ ಸಮೀಪದಲ್ಲಿದ್ದು, ಸುಡಾನ್ನ ರಾಜಧಾನಿ ಖಾರ್ಟೂಮ್ನ ಪಶ್ಚಿಮಕ್ಕೆ ಸುಮಾರು 500 ಕಿಮೀ ದೂರದಲ್ಲಿದೆ.
ಈ ಪ್ರದೇಶವು ಗಣಿಗಾರಿಕೆಗೆ ಸೂಕ್ತವಲ್ಲ ಎಂದು ಕೊರ್ಡೋಫಾನ್ ರಾಜ್ಯ ಸರ್ಕಾರ ಮತ್ತು ರಾಜ್ಯದ ಭದ್ರತಾ ಸಮಿತಿಯು ನಿರ್ಧಾರಕ್ಕೆ ಬಂದಿದ್ದು, ಗಣಿಗಾರಿಕೆಯನ್ನು ಮುಚ್ಚಲು ನಿರ್ಧರಿಸಲಾಗಿತ್ತು.
ಸರ್ಕಾರದ ನಿರ್ಧಾರದ ಹೊರತಾಗಿಯೂ ಗಣಿಗಾರರು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು ಎಂದು ಸರ್ಕಾರ ಆರೋಪಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post