ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಿಶ್ವದ ಮುಂದೆ ಭಾರತದ ಈ ಐತಿಹಾಸಿಕ ಕ್ಷಣ ಚಿರಂಜೀವಿ ಚೇತನವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಸಂತಸ ವ್ಯಕ್ತಪಡಿಸಿದ್ದಾರೆ.
ಚಂದ್ರಯಾನ-3ರ Chandrayaana-3 ವಿಕ್ರಂ ಲ್ಯಾಂಡರ್ Vikram Lander ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಆಗುವ ಮೂಲಕ ವಿಶ್ವದ ಭೂಪಟದಲ್ಲಿ ಐತಿಹಾಸಿಕ ಸಾಧನೆ ಮಾಡಿರುವ ದೇಶವನ್ನು ಉದ್ದೇಶಿಸಿ ಅವರು ದಕ್ಷಿಣ ಆಫ್ರಿಕಾದಿಂದ ನೇರ ಪ್ರಸಾರದಲ್ಲಿ ಮಾತನಾಡಿದರು.
ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆಗುವ ಮೂಲಕ ದೇಶದ ಅಭಿವೃದ್ಧಿಯ ಸಂಕೇತವಾಗಿದೆ. ಈ ಐತಿಹಾಸಿಕ ಕ್ಷಣ ಚಿರಂಜೀವಿ ಚೇತನವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇಸ್ರೋ ISRO ವಿಜ್ಞಾನಿಗಳು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚಂದ್ರನ ದಕ್ಷಿಣ ದೃವದಲ್ಲಿ ಲ್ಯಾಂಡರ್ ಇಳಿಸುವ ಮೂಲಕ ನಮ್ಮ ದೇಶದ ಅಂತಃಸತ್ವವನ್ನು ಪ್ರಪಂಚಕ್ಕೆ ಪರಿಚಯಿಸಿದ್ದಾರೆ. ದೇಶದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಿಕ್ಕಿರುವ ಈ ಯಶಸ್ಸು ಪ್ರಪಂಚದ ಭೂಪಟದಲ್ಲಿ ಭಾರತವನ್ನು ಎತ್ತರದಲ್ಲಿ ನಿಲ್ಲಿಸಿದೆ ಎಂದರು.
ಈಗ ಭಾರತ ಚಂದ್ರನ ಮೇಲಿದೆ. 140 ಕೋಟಿ ಭಾರತೀಯ ಕನಸು ಇಂದು ನನಸಾಗಿದೆ. ಇಂತಹ ಇತಿಹಾಸ ಸೃಷ್ಠಿಸಿರುವ ಇಸ್ರೋ ವಿಜ್ಞಾನಿಗಳನ್ನು ಮನದುಂಬಿ ಅಭಿನಂದಿಸುತ್ತೇನೆ ಎಂದರು.
Also read: ಫಲಿಸಿದ ತಿರುಪತಿ ತಿಮ್ಮಪ್ಪನ ಅನುಗ್ರಹ: ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post