ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಹಣಕಾಸು ಸಚಿವರ ನಿರ್ಮಲಾ ಸೀತಾರಾಮನ್ Finance Minister Nirmala Seetharaman ಇಂದು ತಮ್ಮ ಐದನೇ ಬಜೆಟ್ ಮಂಡನೆ ಮಾಡುತ್ತಿದ್ದು, 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿರುವ ಅವರು, ಭಾರತದ ಆರ್ಥಿಕತೆ ಸರಿಯಾದ ಹಾದಿಯಲ್ಲಿದ್ದು, ಉಜ್ವಲ ಭವಿಷ್ಯದತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.
ಇದು ಅಮೃತಕಾಲದ ಮೊದಲ ಬಜೆಟ್ ಎಂದು ಅನುಮೋದಿಸಿರುವ ವಿತ್ತ ಸಚಿವೆ, ಸ್ವಾತಂತ್ರ್ಯದ 75 ನೇ ವರ್ಷದಲ್ಲಿ ಜಗತ್ತು ಭಾರತವನ್ನು ಪ್ರಕಾಶಮಾನವಾದ ನಕ್ಷತ್ರವೆಂದು ಗುರುತಿಸಿದೆ. ಹಾಗೂ ಭಾರತದ ಸಾಧನೆಗೆ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ ಎಂದಿದ್ದಾರೆ.
ಹಿಂದಿನ ಬಜೆಟ್ಗಳ ದೃಢವಾದ ಅಡಿಪಾಯಗಳ ಮೇಲೆ ಪ್ರಸ್ತುತ ಬಜೆಟ್ ಸಿದ್ಧಗೊಂಡಿದ್ದು, ನಮ್ಮ ಯುವಕರು, ಮಹಿಳೆಯರು ಮತ್ತು ದಲಿತರ ಅಭಿವೃದ್ಧಿಗೆ ಬದ್ಧತೆ ತೋರುವ ಬಜೆಟ್ ಇದಾಗಿದೆ ಎಂದು ಹೇಳಿದರು.
ಜಾಗತಿಕ ಸಂಕಷ್ಟ ಪರಿಸ್ಥಿತಿಯಲ್ಲಿ ಭಾರತಕ್ಕೆ ಜಿ-20 ನಾಯಕತ್ವ ಲಭಿಸಿದೆ. ವಸುಧೈವ ಕುಟುಂಬಕಂ ಮಂತ್ರದ ಆಶಯ ಸಾಕಾರಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಭಾರತದ ಆರ್ಥಿಕತೆಯು ದೊಡ್ಡಮಟ್ಟದಲ್ಲಿ ಪ್ರಗತಿ ಕಂಡಿದೆ. ನಮ್ಮ ಸ್ಥಾನಮಾನವು ಹೆಚ್ಚಾಗಿದೆ. ಕಳೆದ 9 ವರ್ಷಗಳಲ್ಲಿ 10ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಮುಟ್ಟಿದ್ದೇವೆ. ಉತ್ತಮ ಆಡಳಿತದ ಪ್ರಗತಿಶೀಲ ದೇಶ ಎಂದು ವಿಶ್ವದಲ್ಲಿ ಭಾರತಕ್ಕೆ ಗೌರವವಿದೆ ಎಂದು ತಿಳಿಸಿದರು.
ಕೊವಿಡ್ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಭಾರತವು ಉಜ್ವಲ ಭವಿಷ್ಯದತ್ತ ಹೆಜ್ಜೆ ಹಾಕುತ್ತಿದೆ. ಇದನ್ನು ವಿಶ್ವಮಟ್ಟದ ಹಲವು ಸಂಸ್ಥೆಗಳು ಗುರುತಿಸಿವೆ. ಕೊವಿಡ್ ಸಂಕಷ್ಟ ಸಂದರ್ಭದಲ್ಲಿ ಯಾವುದೇ ಭಾರತೀಯರು ಹಸಿವಿನಿಂದ ಬಳಲಲು ಅವಕಾಶ ನೀಡಲಿಲ್ಲ. 80 ಕೋಟಿ ಜನರಿಗೆ ಆಹಾರ ಒದಗಿಸಲಾಯಿತು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post