ಕಲ್ಪ ಮೀಡಿಯಾ ಹೌಸ್ | ನವದೆಹಲಿ |
2016ರಲ್ಲಿ ಪ್ರಧಾನಿ ನರೇಂದ್ರ ಮೋದಿ PM Narendra Modi ನೇತೃತ್ವ ಕೇಂದ್ರ ಸರ್ಕಾರ ನೋಟ್ ಬ್ಯಾನ್ Note Ban ಮಾಡಿದ್ದ ಕ್ರಮವನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.
ನೋಟ್ ಬ್ಯಾನ್ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸುಮಾರು 58 ಅರ್ಜಿಗಳ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಇಂದು ಪಂಚ ಸದಸ್ಯ ನ್ಯಾಯ ಪೀಠ ಪ್ರಕಟಿಸಿದೆ.
ಕೇಂದ್ರ ಸರ್ಕಾರದ ನಿರ್ಣಯದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಆರ್’ಬಿಐ ಜೊತೆಯಲ್ಲಿ ಚರ್ಚಿಸಿಯೇ ಕೇಂದ್ರ ಈ ಕ್ರಮವನ್ನು ಕೈಗೊಂಡಿದೆ. ಅಲ್ಲದೇ, ನೋಟು ಬದಲಾವಣೆ ಮಾಡಿಕೊಳ್ಳಲು ನೀಡಿದ ಸಮಯವೂ ಸಹ ಸರಿಯಾಗಿದೆ. ಆರ್’ಬಿಐ ಸಲಹೆಯಂತೆ ಕೇಂದ್ರ ಸರ್ಕಾರ ಇಂತಹ ಕ್ರಮವನ್ನು ಕೈಗೊಳ್ಳಲು ಅವಕಾಶವಿದೆ. ಹೀಗಾಗಿ, ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ.
ಪಂಚ ಸದಸ್ಯ ಸುಪ್ರೀಂ ಪೀಠದಲ್ಲಿ ನಾಲ್ವರು ನ್ಯಾಯಾಧೀಶರು ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿಹಿಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post