ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಜ್ಯದಲ್ಲಿ ತೀವ್ರ ಬರ ಆವರಿಸಿರುವ ಬೆನ್ನಲ್ಲೇ ತಮಿಳುನಾಡಿಗೆ ಪ್ರತಿನಿತ್ಯ 3128 ಕ್ಯೂಸೆಕ್ಸ್ ನೀರು ಹರಿಸುವಂತೆ ಕಾವೇರಿ Cauveri ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.
ಈ ಕುರಿತಂತೆ ಆದೇಶ ನೀಡಿರುವ ಸಮಿತಿ, ಡಿಸೆಂಬರ್ ಅಂತ್ಯದವರೆಗೆ ಪ್ರತಿನಿತ್ಯ 3128 ಕ್ಯೂಸೆಕ್ ನೀರು ಹರಿಸುವಂತೆ ಮತ್ತು ಮುಂದಿನ ವರ್ಷ ಜನವರಿಯಲ್ಲಿ ನಿತ್ಯ 1030 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.
ಮೈಸೂರು ಭಾಗದಲ್ಲಿ ಈಗಾಗಲೇ ನೀರಿನ ಅಭಾವ ಕಾಣಿಸಿಕೊಂಡಿರುವ ಬೆನ್ನಲ್ಲೇ ಮತ್ತೆ ನೀರು ಹರಿಸುವಂತೆ ಆದೇಶಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
Also read: Modi govt is determined to implement UCC: Shah
ಈ ವೇಳೆ ಸಮಿತಿ ಮುಂದೆ ವಾದ ಮಂಡಿಸಿದ ಕರ್ನಾಟಕ, 2023ರ ಡಿಸೆಂಬರ್ 18ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಳಹರಿವಿನ ಕೊರತೆ ಶೇ.52.84ರಷ್ಟು ಇದೆ. ತಮಿಳುನಾಡಿನ ಕಾವೇರಿ ಜಲಾಯನ ಪ್ರದೇಶದಲ್ಲಿ ಈಶಾನ್ಯ ಮಾನ್ಯೂನ್ ಖುತುವಿನಲ್ಲಿ ಸಮತೋಲನ ಮಳೆಯನ್ನು ನಿರೀಕ್ಷಿಸಬಹುದು. ಆದ್ದರಿಂದ ಬೆಳೆದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ಸಾಕಷ್ಟು ಮಣ್ಣಿನ ತೇವಾಂಶವನ್ನು ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶವು ಹೊಂದಿದೆ ಎಂದಿದೆ.
ತಮಿಳುನಾಡಿನ Tamilnadu ಕುರುವಾಯಿ ಬೆಳೆ ಡಿಸೆಂಬರ್ ಮೊದಲ ವಾರದ ಅಂತ್ಯದ ವೇಳೆಗೆ ಕಟಾವಾಗಿರುವುದರಿಂದ ಈ ಬೆಳೆಗಳಿಗೆ ನೀರಿನ ಅಗತ್ಯವಿಲ್ಲ. ಮಟ್ಟೂರು ಮತ್ತು ಭವಾನಿ ಸಾಗರ ಜಲಾಶಯಗಳು 50.367 ಟಿಎಂಸಿ ಗಮನಾರ್ಹ ಸಂಗ್ರಹವನ್ನು ಹೊಂದಿದೆ. ಇದು ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post