ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮುಂಬರುವ 25 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಪಡಿಸುವುದು, ಬಡತನದಿಂದ ಮುಕ್ತಗೊಳಿಸುವುದು ಮತ್ತು ಯುವಕರ ಸಾಮರ್ಥ್ಯವನ್ನು ಮುಂಚೂಣಿಯಲ್ಲಿರಿಸುವುದು ಬಿಜೆಪಿಯ ಉದ್ದೇಶ ಮತ್ತು ಅಜೆಂಡಾವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿ ಅವರು ಮಾತನಾಡಿದ್ದಾರೆ.
ಕರ್ನಾಟಕದ ಜನತೆಯ ಆಶೀರ್ವಾದ ಪಡೆಯಲು ಇನ್ನೆರಡು ದಿನಗಳಲ್ಲಿ ಭೇಟಿ ನೀಡುತ್ತೇನೆ. ರಾಜ್ಯದಲ್ಲಿ ಪ್ರಚಾರ ನಡೆಸಿರುವ ಬಿಜೆಪಿ ನಾಯಕರು ಅಲ್ಲಿನ ಜನರಿಂದ ಅಪಾರ ಪ್ರೀತಿ, ವಿಶ್ವಾಸ ಪಡೆದಿದ್ದಾರೆ. ಇದು ಬಿಜೆಪಿ ಮೇಲಿನ ಜನರ ವಿಶ್ವಾಸವನ್ನು ತೋರಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪು ನಾವೆಲ್ಲರೂ ಸ್ವಾಗತಿಸಬೇಕು. ಆದರೆ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರದ ಅಗತ್ಯವಿದೆ ಎಂದು ಸಂವಾದದಲ್ಲಿ ಪ್ರಧಾನಿಗಳು ಒತ್ತಿ ಹೇಳಿದರು.
2 ದಿನಗಳ ನಂತರ ನಾನೂ ಕಾರ್ಯಕರ್ತರ ನಡುವೆ ರಾಜ್ಯದ ಜನರ ದರ್ಶನಕ್ಕೆ, ಆಶೀರ್ವಾದಕ್ಕೆ ಬರುತ್ತಿದ್ದೇನೆ. ರಾಜ್ಯದಲ್ಲಿ ಎಲ್ಲಾ ಹೋದರೂ ಅಲ್ಲಿನ ಜನ ಹೃದಯ ಪೂರ್ವಕ ಆಶೀರ್ವಾದ ಮಾಡಿದ್ದಾರೆ ಎಂದಿದ್ದಾರೆ.
Also read: ಬಿಜೆಪಿ, ಕಾಂಗ್ರೆಸ್ ಪಕ್ಷಗಳ ವಿರುದ್ಧ ಸಿಡಿದೆದ್ದ ಶಾಸಕ ಬಂಡೆಪ್ಪ ಖಾಶೆಂಪುರ್
ಶಿವಮೊಗ್ಗದ ವಿರೂಪಾಕ್ಷಪ್ಪ ಎನ್ನುವವರು ಕಾರ್ಯಕರ್ತರಿಗೆ ನಿಮ್ಮ ಸಲಹೆಗಳೇನು ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿಯವರು, ತಲಾ 10 ಮಹಿಳೆಯರು, 20 ಪುರುಷರ ತಂಡ ರಚಿಸಿ ಬೂತ್ ಮಟ್ಟದಲ್ಲಿ ಡಬಲ್ ಎಂಜಿನ್ ಸರ್ಕಾರದ ಸಾಧನೆ ತಿಳಿಸಿ. ಜನರ ಜೊತೆ ಒಡನಾಡಿಯಾಗಿ, ಕಷ್ಟ ಸುಖ ಕೇಳಿ, ಆತ್ಮೀಯವಾಗಿ ಮಾತನಾಡಿಸಿ. ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ತಿಳಿಸಿ. ಅದರ ಫಲ ಸಿಕ್ಕಿದೆಯಾ ಅಂತ ಅಭಿಪ್ರಾಯ ಕೇಳಿ. ಬಿಜೆಪಿಗೆ ಮತ ಹಾಕುವಂತೆ ಪ್ರೇರೇಪಿಸಿ. ವಿರೋಧ ಪಕ್ಷದವರ ಅಜೆಂಡಾ ಅರ್ಥ ಮಾಡಿಕೊಂಡು ಕೆಲಸ ಮಾಡಿ. ಪೂರ್ಣಬಹುಮತ ಬಗ್ಗೆ ಜನರನ್ನು ಮನವರಿಕೆ ಮಾಡಿಸಿ. ಒಂದೇ ಸರ್ಕಾರದ ಮಹತ್ವ ಬಗ್ಗೆ ಅರ್ಥ ಮಾಡಿಸಿ ಎಂದು ಹೇಳಿದರು.
ಮೊಳಕಾಲ್ಮೂರು ಕಾರ್ಯಕರ್ತ ಫಕೀರಪ್ಪ ಅವರ ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳೇನು? ಎಂಬ ಪ್ರಶ್ನೆಗೆ ಉತ್ತರಿಸಿದ ಮೋದಿ, ಎರಡೂ ಕಡೆ ಒಂದೇ ಪಕ್ಷದ ಸರ್ಕಾರ ಇದ್ದರೆ ಅಭಿವೃದ್ಧಿಗೆ ಪೂರಕವಾಗುತ್ತದೆ. ಕಿಸಾನ್ ಸಮ್ಮಾನ್ ನಿಧಿಯಡಿ ಡಬಲ್ ಎಂಜಿನ್ ಸರ್ಕಾರಗಳಿಂದ ನೆರವು ಸಿಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಆರ್ಥಿಕ ನೆರವು ಕೊಡುತ್ತಿವೆ. ಒಂದು ವೇಳೆ ಇಲ್ಲಿ ಪಕ್ಷದ ಬೇರೆ ಸರ್ಕಾರ ಬಂದರೆ ಸದಾ ಜಗಳ ಆಡುತ್ತದೆ. ಇದರಿಂದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post