ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಶಿವಮೊಗ್ಗ |
ನಿನ್ನೆ ಇಹಲೋಕ ತ್ಯಜಿಸಿದ ಹೊಸಹಳ್ಳಿ ಕೇಶವಮೂರ್ತಿಗಳ Hosahalli Keshavamurthy ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಸಂತಾಪ ಸೂಚಿಸಿದ್ದಾರೆ.
ಗಮಕವನ್ನು ಜನಪ್ರಿಯಗೊಳಿಸಲು ಮತ್ತು ಕರ್ನಾಟಕದ ವಿಶಿಷ್ಟ ಸಂಸ್ಕೃತಿ ಆಚರಣೆಗಾಗಿ ಶ್ರೀ ಎಚ್.ಆರ್.ಕೇಶವ ಮೂರ್ತಿ ಅವರ ಪ್ರಯತ್ನವನ್ನು ನಾವು ಸದಾ ಸ್ಮರಿಸುತ್ತೇವೆ. ಹಲವು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾರ್ಗದರ್ಶನಕ್ಕಾಗಿ ಅವರು ನೆನಪಾಗುತ್ತಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ಸಂತಾಪಗಳು. ಓಂ ಶಾಂತಿ. pic.twitter.com/1DagcbFrw1
— Narendra Modi (@narendramodi) December 21, 2022
ಈ ಕುರಿತಂತೆ ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ಗಮಕವನ್ನು ಜನಪ್ರಿಯಗೊಳಿಸಲು ಮತ್ತು ಕರ್ನಾಟಕದ ವಿಶಿಷ್ಟ ಸಂಸ್ಕೃತಿ ಆಚರಣೆಗಾಗಿ ಶ್ರೀ ಎಚ್.ಆರ್. ಕೇಶವ ಮೂರ್ತಿ ಅವರ ಪ್ರಯತ್ನವನ್ನು ನಾವು ಸದಾ ಸ್ಮರಿಸುತ್ತೇವೆ. ಹಲವು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾರ್ಗದರ್ಶನಕ್ಕಾಗಿ ಅವರು ನೆನಪಾಗುತ್ತಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಕಂಬನಿ ಮಿಡಿದಿದ್ದಾರೆ.ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿಯವರು ಹಾಗೂ ಕೇಶವಮೂರ್ತಿ ಅವರುಗಳು ಪರಸ್ಪರ ಗೌರವ ಸಲ್ಲಿಕೆ ಮಾಡಿಕೊಂಡ ಫೋಟೋವನ್ನು ಪ್ರಧಾನಿಯವರು ಹಂಚಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post