ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನಿರ್ಭಯ ಪ್ರಕರಣದ ರೀತಿಯೇ ಮತ್ತೊಂದು ಘಟನೆ ನಡೆದಿದ್ದು, 38 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಆಕೆಯ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ತುರುಕಿ ವಿಕೃತಿ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಕುರಿತಂತೆ ದೆಹಲಿ ಮಹಿಳಾ ಆಯೋಗ ಗಾಜಿಯಾಬಾದ್ ಪೊಲೀಸರಿಗೆ ನೋಟಿಸ್ ನೀಡಿದ್ದು, ಘಟನೆಯ ಸಂಪೂರ್ಣ ವರದಿ ಕೇಳಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

Also read: ಶಿವಮೊಗ್ಗ ಕಾರಾಗೃಹದ ಮೇಲೆ ಎಸ್ಪಿ ದಾಳಿ: ದೊರೆತ ವಸ್ತುಗಳ ಕಂಡು ಅಧಿಕಾರಿಗಳು ಶಾಕ್!
ಘಟನೆಯ ಹಿನ್ನೆಲೆ:
ದೆಹಲಿ ನಿವಾಸಿಯಾದ ಮಹಿಳೆ ಅ.16ರಂದು ತನ್ನ ಮಗನ ಬರ್ತ್ಡೇ ಪಾರ್ಟಿಯಲ್ಲಿ ಭಾಗವಹಿಸಲು ಗಾಜೀಯಾಬಾದ್ನಲ್ಲಿ ಆಟೋಗಾಗಿ ಕಾಯುತ್ತಾ ನಿಂತಿದ್ದು, ಈ ವೇಳೆ ನಾಲ್ವರು ದುಷ್ಕರ್ಮಿಗಳು ಎಸ್ಯುವಿ ಕಾರಿನಲ್ಲಿ ಆಕೆಯನ್ನು ಕಿಡ್ನಾಪ್ ಮಾಡಿದ್ದರು. ಈ ನಾಲ್ವರೊಂದಿಗೆ ಇನ್ನು ಹಲವರು ಸೇರಿ ಎರಡು ದಿನಗಳ ಕಾಲ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಇನ್ನಿಲ್ಲದಂತೆ ಕಿರುಕುಳ ನೀಡಿದ್ದಾರೆ. ಅನಂತರ ಆಕೆಯ ಕೈಕಾಲು ಕಟ್ಟಿ ಸೆಣಬಿನ ಚೀಲದಲ್ಲಿ ಸುತ್ತಿ ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿದ್ದಾರೆ.

ಮಹಿಳೆಗೆ ದೆಹಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವರದಿಯಾಗಿದೆ.
ಪ್ರಕರಣ ಕುರಿತಂತೆ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.











Discussion about this post