No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಧಾನಿಯವರಿಗೆ ಬಹಿರಂಗ ಚರ್ಚೆಗೆ ಸಿದ್ದರಾಮಯ್ಯ ಆಹ್ವಾನ ಉದ್ಧಟತನದ ಪರಮಾವಧಿ: ಎಚ್’ಡಿಕೆ ವಾಗ್ದಾಳಿ

ರಾಜಕೀಯಕ್ಕಾಗಿ ಪ್ರಧಾನಿ ಮತ್ತು ಕೇಂದ್ರದ ಮೇಲೆ ಸಿಎಂ ಗೂಬೆ ಕೂರಿಸುತ್ತಿದ್ದಾರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 18, 2024
in ರಾಷ್ಟ್ರೀಯ
0
ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಮಂತ್ರಿಗಳನ್ನು ಬಹಿರಂಗ ಚರ್ಚೆಗೆ ಕರೆದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರ ಉದ್ಧಟತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HD Kumaraswamy ಕಿಡಿಕಾರಿದರು.

ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ಕೇಂದ್ರ ಸರಕಾರದ ನಡುವೆ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ರಾಜ್ಯ ಸರಕಾರ ಪ್ರತಿಯೊಂದಕ್ಕೂ ಕೇಂದ್ರವ ಮತ್ತು ಪ್ರಧಾನಮಂತ್ರಿಗಳನ್ನು ದೂರುವ ಪರಿಪಾಠ ಬೆಳೆಸಿಕೊಂಡಿದೆ. ಇದು ಸರಿಯಲ್ಲ. ಕಾಂಗ್ರೆಸ್ ಸರಕಾರವು ತನ್ನ ಆಡಳಿತ ವೈಫಲ್ಯ, ಗ್ಯಾರಂಟಿಗಳ ವಿಫಲತೆ, ಬರಗಾಲ, ರೈತರ ಸಂಕಷ್ಟದ ಬಗ್ಗೆ ಜನರ ಗಮನವನ್ನು ಬೇರೆಡೆಗೆ ಹೊರಳಿಸುವ ಉದ್ದೇಶದಿಂದ ನಿರಂತರವಾಗಿ ಮೋದಿ ಅವರ ಮೇಲೆ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ ಎಂದು ಹೇಳಿದರು.
ರಾಜ್ಯ ಸರಕಾರದ ಈ ನಡವಳಿಕೆಯ ಬಗ್ಗೆ ಕನ್ನಡಿಗರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದ ಅವರು; ಜನರ ಸಮಸ್ಯೆಗಳಿಗೆ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸರಕಾರವೇ ಆಲೋಚನೆ ಮಾಡಬೇಕು. ಅದು ಬಿಟ್ಟು ಸುಖಾಸುಮ್ಮನೆ ಕೇಂದ್ರದ ಮೇಲೆ ಗೂಬೆ ಕುರಿಸುವುದು ಸರಿ ಅಲ್ಲ ಎಂದು ನೇರ ಮಾತುಗಳಲ್ಲಿ ಹೇಳಿದರು.

ಲೋಪ ಆಗಿರುವ ಕಡೆ ಗಮನ ಹರಿಸಿ ಸರಿ ಮಾಡಿಕೊಳ್ಳಬೇಕು. ದೆಹಲಿಗೆ ಹೋಗಿ ಚರ್ಚೆ ಮಾಡಬೇಕು. ಆದರೆ; ಮುಖ್ಯಮಂತ್ರಿಯೊಬ್ಬರು ಪ್ರಧಾನಮಂತ್ರಿಗಳನ್ನು ಬಹಿರಂಗ ಚರ್ಚೆಗೆ ಕರೆಯುವುದು ಉದ್ಧಟತನದ ಪರಮಾವಧಿ. ಇದು ಸರಿಯಾದ ನಡವಳಿಕೆ ಅಲ್ಲ. ಪ್ರಧಾನಿಗಳನ್ನು ಚರ್ಚೆಗೆ ಕರೆಯುವ ಮುನ್ನ ತಮ್ಮಿಂದ ಆಗಿರುವ ಲೋಪಗಳನ್ನು ಸರಿ ಪಡಿಸಿಕೊಳ್ಳಬೇಕಿದೆ. ಆ ಸೌಜನ್ಯವನ್ನು ಮುಖ್ಯಮಂತ್ರಿಗಳು ತೋರಿಸಬೇಕಿದೆ. ನಲವತ್ತು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಸರಕಾರ ರಾಜ್ಯದ ನೀರಾವರಿಗೆ ಏನಾದರೂ ಕೊಡುಗೆ ನೀಡಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಅವರ ಹೆಸರು ಹೇಳದೆಯೇ ಟಾಂಗ್‌ ನೀಡಿದರು ಮಾಜಿ ಮುಖ್ಯಮಂತ್ರಿಗಳು.
Kalahamsa Infotech private limitedಬೀದಿಯಲ್ಲಿ ಚರ್ಚೆ ಮಾಡಬಾರದು:
ಪದೇ ಪದೇ ಕೇಂದ್ರದ ಜತೆ ಸಂಘರ್ಷ ಸರಿ ಅಲ್ಲ. ಇಂತಹ ಸಂಘರ್ಷದಿಂದ ಉಪಯೋಗವೂ ಇಲ್ಲ. ಕೇಂದ್ರದ ನೆರವು ಕಡಿತ ಬಗ್ಗೆ ಬೀದಿಯಲ್ಲಿ ಚರ್ಚೆ ಮಾಡಬಾರದು. ದೋಷಾರೋಪದಿಂದ ಏನಾದರೂ ಲಾಭ ಸಿಗುತ್ತದೆಯೇ? ಸಿಗುವುದಿಲ್ಲ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಬೇಡ ಎಂದು ಅವರು ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಅವರು ಸಲಹೆ ಮಾಡಿದರು.

Also read: ಹೀರೋ ಆಗಿ ಮೊಟ್ಟ ಮೊದಲ ಬಾರಿಗೆ ಹಾಸ್ಯನಟ ಚಿಕ್ಕಣ್ಣ ಎಂಟ್ರಿ: ನಿರ್ದೇಶಕರು ಹೇಳಿದ್ದೇನು?

ಕೆಲ ರಾಜ್ಯಗಳಿಂದ ಇವರು ಪಾಠ ಕಲಿಯಬೇಕಿದೆ. ಒಡಿಶಾ ರಾಜ್ಯದಲ್ಲಿ ನವೀನ್‌ ಪಟ್ನಾಯಕ್‌ ಅವರು ಐದು ಅವಧಿಗಳಿಂದ ಸರಕಾರ ನಡೆಸುತ್ತಿದ್ದಾರೆ. ಆ ರಾಜ್ಯದಲ್ಲಿ ನಮ್ಮ ರಾಜ್ಯಕ್ಕಿಂತ ಹೆಚ್ಚು ಬಡತನ ಇದೆ. ಕೇಂದರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿ ಇರಲಿ ಅಥವಾ ಬಿಜೆಪಿ ಇರಲಿ.. ಅವರೆಂದೂ ಕೇಂದ್ರದ ಜತೆ ಸಂಘರ್ಷಕ್ಕೆ ಇಳಿದಿಲ್ಲ. ಸೌಹಾರ್ದತೆಯಿಂದ ಕೇಂದ್ರದಿಂದ ಸವಲತ್ತುಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇವರು ಕೇವಲ ರಾಜಕೀಯಕ್ಕಾಗಿ ಇದನ್ನೆಲ್ಲಾ ಮಾಡುತ್ತಿದ್ದಾರೆ ಎಂದು ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.
ನಾನೂ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದೆ. ಬಿಜೆಪಿ ಜತೆ ಸರಕಾರ ಮಾಡಿದ್ದಾಗ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿ ಇತ್ತು. ಕಾಂಗ್ರೆಸ್‌ ಜತೆ ಸರಕಾರ ಮಾಡಿದ್ದಾಗ ಬಿಜೆಪಿ ಅಧಿಕಾರದಲ್ಲಿ ಇತ್ತು. 2018ರಲ್ಲಿ ನರೇಂದ್ರ ಮೋದಿ ಅವರೇ ಪ್ರಧಾನಿಗಳಾಗಿದ್ದರು. ಅವರ ಜತೆ ನಾನೆಂದೂ ಸಂಘರ್ಷಕ್ಕೆ ಹೋಗಲಿಲ್ಲ. ರಾಜ್ಯಕ್ಕೆ ಆಗಬೇಕಾದ ಎಲ್ಲಾ ಕೆಲಸಗಳು ಆದವು. ನಾನು ಕೇಳಿದಾಕ್ಷಣ ಪ್ರಧಾನಿಗಳ ಕಚೇರಿಯಿಂದ ಭೇಟಿಗೆ ಅವಕಾಶ ದೊರೆಯುತ್ತಿತ್ತು. ಇಲ್ಲಿ ನಾವು ಹೇಗೆ ನಡೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯವಾಗುತ್ತದೆ ಎಂದು ಅವರು ಸಿದ್ದರಾಮಯ್ಯ ಅವರ ವಿರುದ್ಧ ಪ್ರಹಾರ ನಡೆಸಿದರು.

ಲೋಕಸಭೆಗೆ ಸ್ಪರ್ಧೆಗೆ ಒತ್ತಡ ಇದೆ:
ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ. ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರ ಒತ್ತಡವಿದೆ. ನನ್ನ ಸ್ಪರ್ಧೆಯ ಬಗ್ಗೆ ಸೂಕ್ತ ನಿರ್ಣಯವನ್ನು ಎರಡು ಪಕ್ಷದ ನಾಯಕರು ಕೂತು ತೀರ್ಮಾನ ಮಾಡುತ್ತಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಅಯೋಧ್ಯೆಗೆ ಹೋಗುತ್ತೇನೆ:
ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾನು ಕುಟುಂಬ ಸಮೇತ ಅಯೋಧ್ಯಗೆ ಹೋಗುತ್ತೇನೆ ಎಂದು ಎಂದು ಹೇಳಿದ ಕುಮಾರಸ್ವಾಮಿ ಅವರು; ಇಡೀ ದೇಶವೇ ಹಬ್ಬದ ಸಂಭ್ರಮದಲ್ಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಾತುರನಾಗಿದ್ದೇನೆ. ದೇವೇಗೌಡರು ಕೂಡ ಭಾಗಿಯಾಗುತ್ತಾರೆ. ನಮಗೆಲ್ಲರಿಗೂ ಆಹ್ವಾನ ಬಂದಿದೆ ಎಂದರು.

ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ ಇತರರು ಹಾಜರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: CM SiddaramaiahHD KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNewDelhiNews in KannadaNews Kannadaನವದೆಹಲಿಮುಖ್ಯಮಂತ್ರಿ ಸಿದ್ದರಾಮಯ್ಯಹೆಚ್.ಡಿ. ಕುಮಾರಸ್ವಾಮಿ
Share197Tweet123Send
Previous Post

ಹೀರೋ ಆಗಿ ಮೊಟ್ಟ ಮೊದಲ ಬಾರಿಗೆ ಹಾಸ್ಯನಟ ಚಿಕ್ಕಣ್ಣ ಎಂಟ್ರಿ: ನಿರ್ದೇಶಕರು ಹೇಳಿದ್ದೇನು?

Next Post

ಅಯೋಧ್ಯೆಗೆ ಉಗ್ರರ ಕರಿನೆರಳು? ಮೂವರು ಅನುಮಾನಾಸ್ಪದರ ಬಂಧನ | ಹೈ ಅಲರ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಯೋಧ್ಯೆಗೆ ಉಗ್ರರ ಕರಿನೆರಳು? ಮೂವರು ಅನುಮಾನಾಸ್ಪದರ ಬಂಧನ | ಹೈ ಅಲರ್ಟ್

ಅಯೋಧ್ಯೆಗೆ ಉಗ್ರರ ಕರಿನೆರಳು? ಮೂವರು ಅನುಮಾನಾಸ್ಪದರ ಬಂಧನ | ಹೈ ಅಲರ್ಟ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL