ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ RamaMandira ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, Sonia Gandhi ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಈ ನಾಯಕರಿಗೆ ಅಧಿಕೃತವಾಗಿ ಆಹ್ವಾನ ಪತ್ರಿಕೆ ಕಳುಹಿಸಲಾಗಿದ್ದು, ಇವರೊಂದಿಗೆ ಲೋಕಸಭೆಯ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೂ ಆಮಂತ್ರಿಸಲಾಗಿದೆ.
ಆಮಂತ್ರಣ ಪತ್ರಗಳನ್ನು ಟ್ರಸ್ಟ್’ಗೆ ಸಂಬAಧಿಸಿದವರ ನಿಯೋಗದಿಂದ ತಲುಪಿಸಲಾಗಿದೆ ಎನ್ನಲಾಗಿದೆ. ಇವರೊಂದಿಗೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಹಾಗೂ ಎಚ್.ಡಿ. ದೇವೇಗೌಡರಿಗೂ ಆಹ್ವಾನ ನೀಡಲಾಗಿದೆ.
Also read: ಹಿರಿಯ ನಟಿ ತಾರಾ ಅವರ ಫೇಸ್’ಬುಕ್ ಖಾತೆ ಹ್ಯಾಕ್
ಆದರೆ, ಕಾಂಗ್ರೆಸ್’ನ ಯಾವುದೇ ನಾಯಕರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post