ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನೇತಾಜಿ ಸುಭಾಷ್ಚಂದ್ರ ಬೋಸ್ ಅವರು ದೇಶಕ್ಕಾಗಿ ನೀಡಿರುವ ಸ್ಮರಣೀಯ ಕೊಡುಗೆ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
सभी देशवासियों को पराक्रम दिवस की ढेरों शुभकामनाएं।
नेताजी सुभाष चंद्र बोस की 125वीं जयंती पर उन्हें मेरी आदरपूर्ण श्रद्धांजलि।
I bow to Netaji Subhas Chandra Bose on his Jayanti. Every Indian is proud of his monumental contribution to our nation. pic.twitter.com/Ska0u301Nv
— Narendra Modi (@narendramodi) January 23, 2022
ಸ್ವಾತಂತ್ರ್ಯ ಹೋರಾಟಗಾರ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಎಲ್ಲಾ ಜನತೆಗೆ ಪರಾಕ್ರಮ್ ದಿನ ಹಬ್ಬದ ಶುಭಾಶಯಗಳು. ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮ ವಾರ್ಷಿಕೋತ್ಸವದಂದು ಗೌರವಾನ್ವಿತ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಅವರ ಜಯಂತಿಯಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ನಮಸ್ಕರಿಸುತ್ತೇನೆ. ಸ್ಮಾರಕದ ಮೂಲಕ ಪ್ರತೀಯೊಬ್ಬ ಭಾರತೀಯನೂ ದೇಶಕ್ಕಾಗಿ ನೇತಾಜಿ ನೀಡಿರುವ ಕೊಡುಗು ಕುರಿತು ಹೆಮ್ಮೆಪಡುತ್ತಾನೆಂದು ಹೇಳಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದಂದು ದೇಶವು ಅವರಿಗೆ ಗೌರವವನ್ನು ಸಲ್ಲಿಸುತ್ತಿದೆ. ಆಜಾದ್ ಹಿಂದ್ – ಮುಕ್ತ ಭಾರತದ ಕಲ್ಪನೆಗೆ ಬದ್ಧತೆಯನ್ನು ಪ್ರದರ್ಶಿಸಲು ಅವರು ತೆಗೆದುಕೊಂಡ ದಿಟ್ಟ ಹೆಜ್ಜೆಗಳು ಅವರು ರಾಷ್ಟ್ರೀಯ ಪ್ರಮುಖ ವ್ಯಕ್ತಿಯಾಗುವಂತೆ ಮಾಡಿತು. ಅವರ ಆದರ್ಶಗಳು ಮತ್ತು ತ್ಯಾಗಗಳು ಪ್ರತಿಯೊಬ್ಬ ಭಾರತೀಯರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತವೆ ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಸ್ವಾತಂತ್ರ್ಯದ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ನಮಸ್ಕರಿಸುತ್ತೇನೆ. ಅವರು ತಮ್ಮ ಅಸಾಧಾರಣ ದೇಶಭಕ್ತಿ, ಅದಮ್ಯ ಧೈರ್ಯ ಮತ್ತು ಅದ್ಭುತ ಭಾಷಣದಿಂದ ಯುವಕರನ್ನು ಸಂಘಟಿಸುವ ಮೂಲಕ ವಿದೇಶಿ ಆಡಳಿತದ ಬುನಾದಿಯನ್ನು ಅಲ್ಲಾಡಿಸಿದ್ದರು. ಅವರ ಅಪ್ರತಿಮ ತ್ಯಾಗ, ದೃಢತೆ ಮತ್ತು ಮಾತೃಭೂಮಿಗಾಗಿ ಹೋರಾಟ ಯಾವಾಗಲೂ ದೇಶಕ್ಕೆ ಮಾರ್ಗದರ್ಶನ ನೀಡುತ್ತದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ಸರ್ವರಿಗೂ ಪರಾಕ್ರಮ ದಿನದ ಹಾರ್ದಿಕ ಶುಭಾಶಯಗಳು. ವೀರ ಪರಾಕ್ರಮಿ, ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜಯಂತಿಯಂದು ಅವರಿಗೆ ಭಕ್ತಿ ಪೂರ್ವಕ ನಮನಗಳು. ಅವರ ದೇಶಪ್ರೇಮ, ಸಾಹಸಮಯ ಹೋರಾಟ ಇಂದಿಗೂ ಭಾರತದ ಪ್ರತಿಯೊಬ್ಬ ಪ್ರಜೆಗೂ ಸ್ಪೂರ್ತಿ ಎಂದಿದ್ದಾರೆ.
ಭಾರತದ ಸ್ವಾತಂತ್ರ್ಯಕ್ಕೆ ನೇತಾಜಿಯವರ ಅನುಪಮ ಕೊಡುಗೆಯನ್ನು ದೇಶಾದ್ಯಂತ ‘ಪರಾಕ್ರಮ್ ದಿವಸ್’ ಎಂದು ಆಚರಿಸುವ ವಿನೂತನ ಕೆಲಸವನ್ನು ಪ್ರಧಾನಿ ಮೋದಿಯವರು ಮಾಡಿದ್ದು, ಈ ಮೂಲಕ ನೇತಾಜಿಯವರ ಜನ್ಮದಿನವನ್ನು ಸ್ಮರಣೀಯಗೊಳಿಸಿದ್ದಾರೆ. ಇದು ಮುಂದಿನ ಪೀಳಿಗೆಗಳಲ್ಲಿ ನೇತಾಜಿಯವರ ಕ್ರಿಯಾತ್ಮಕ ಚಿಂತನೆಗಳು ಮತ್ತು ಆಲೋಚನೆಗಳನ್ನು ಸಕಾರಗೊಳಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post