ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ Supreme Court ಶುಕ್ರವಾರ ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ಪಿಎಸ್ ನರಸಿಂಹ ಅವರ ಪೀಠವು ಅರ್ಜಿದಾರರ ವೈಯಕ್ತಿಕ ವಕೀಲ ಜಯ ಸುಕಿನ್ ಅವರಿಗೆ ಈ ಅರ್ಜಿಯನ್ನು ಏಕೆ ಮತ್ತು ಹೇಗೆ ಸಲ್ಲಿಸಲಾಗಿದೆ ಎಂಬುದನ್ನು ನ್ಯಾಯಾಲಯವು ಅರ್ಥಮಾಡಿಕೊಂಡಿದೆ. ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಈ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸುಕಿನ್ ಅವರು ಆರ್ಟಿಕಲ್ 79 ರ ಅಡಿಯಲ್ಲಿ, ರಾಷ್ಟ್ರಪತಿಗಳು ದೇಶದ ಕಾರ್ಯನಿರ್ವಾಹಕ ಮುಖ್ಯಸ್ಥರಾಗಿದ್ದಾರೆ. ಅವರನ್ನು ಆಹ್ವಾನಿಸಬೇಕಿತ್ತು. ಉದ್ಘಾಟನೆಗೆ ಆಹ್ವಾನಿಸದೆ ಅವರನ್ನು “ಅವಮಾನಗೊಳಿಸುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಆದಾಗ್ಯೂ, ನ್ಯಾಯಾಲಯವು ಅರ್ಜಿಯನ್ನು ಪರಿಗಣಿಸಲು ಬಯಸದಿದ್ದರೆ, ಅದನ್ನು ಹಿಂಪಡೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post