ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನವದೆಹಲಿ: ನಮ್ಮ ಪ್ರೀತಿಯ ಪ್ರವಾದಿ ಮಹಮ್ಮದ್ ಅವರನ್ನು ಅವಮಾನಿಸಿದವರ ಹತ್ಯೆ ಮಾಡಿ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಯಾವುದೇ ಶಾಂತಿ ಮತ್ತು ಭದ್ರತೆ ಅವರನ್ನು ಉಳಿಸುವುದಿಲ್ಲ. ಮನೆ ಅಥವಾ ಸೈನ್ಯದ ಕೋಟೆಯಲ್ಲಿಯೇ ಅಡಗಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉಗ್ರ ಸಂಘಟನೆ ಅಲ್ಖೈದಾ Alkaida ತಿಳಿಸಿದೆ.
ಈ ಕುರಿತು ಟೆಲಿಗ್ರಾಮ್ ಆಪ್ನಲ್ಲಿ ಮುಜಾಹಿದೀನ್ ಫಜ್ವಾತುಲ್ ಹಿಂದ ಉಗ್ರ ಸಂಘಟನೆ ಹೇಳಿಕೆ ಬಿಡುಗಡೆ ಮಾಡಿದ್ದು, ಮಾನವೀಯತೆಯ ಹೆಮ್ಮೆ ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿದವರಿಗೆ ಕ್ಷಮೆಯಿಲ್ಲ. ಪ್ರವಾದಿಯ ಘನತೆಗಾಗಿ ಹೋರಾಡಲು ದೆಹಲಿ, ಮುಂಬೈ, ಗುಜರಾತ್ ಹಾಗೂ ಉತ್ತರಪ್ರದೇಶದಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಿದೆ.
ನಮ್ಮ ತಾಯಿಯಂದಿರು ನಮ್ಮನ್ನು ಕಳೆದುಕೊಳ್ಳಲಿ. ಪ್ರವಾದಿಗಳ ಅವಮಾನಿಸಿದವರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ನಮ್ಮ ಹಾಗೂ ನಮ್ಮ ಮಕ್ಕಳದ ದೇಹದ ಮೇಲೆ ಸ್ಫೋಟಗಳನ್ನು ಹಾಕುತ್ತೇವೆ. ಪ್ರವಾದಿ ಮಹಮ್ಮದ್ ಅವರನ್ನು ಅವಮಾನಿಸಿದವರ ಹತ್ಯೆ ಮಾಡುತ್ತೇವೆ ಎಂದು ತಿಳಿಸಿದೆ.
ನೂಪುರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು, ಇಡೀ ವಿಶ್ವದ ಮುಂದೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಪ್ರವಾದಿಗಳನ್ನು ಅವಹೇಳನ ಮಾಡಿದವರಿಗೆ ಏನು ಮಾಡಲಾಗುತ್ತದೆಯೋ ಅದನ್ನೇ ನೂಪುರ್ ಅವರಿಗೆ ಮಾಡಲಾಗುತ್ತದೆ. ಹಾಗೂ ಬಿಜೆಪಿ ನಾಯಕರು ನಿರಂತರವಾಗಿ ಮುಸ್ಲಿಂ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಆರ್ಎಸ್ಎಸ್, ರಾಮಸೇನೆ, ಬಜರಂಗದಳ, ಶಿವಸೇನೆಗಳು ಇಸ್ಲಾಂ ಹಾಗೂ ಮುಸ್ಲಿಮರ ವಿರುದ್ಧ ನಿರಂತರವಾಗಿ ದ್ವೇಷದ ಭಾಷಣ ಮಾಡುತ್ತಿದೆ ಎಂದು ಇದೇವೇಳೆ ಕಿಡಿಕಾರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post