ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಸಂದರ್ಭದಲ್ಲಿ, ಮಾತುಕತೆ ಅತ್ಯಂತ ಸೌಹಾರ್ದಯುತವಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ,
ಇಂದು ಬೆಳಿಗ್ಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,100 ದಿನಗಳಲ್ಲಿ ನಮ್ಮ ಸರ್ಕಾರ ನಡೆಸಿರುವ ಜನಸ್ನೇಹಿ ಆಡಳಿತ, ಮತ್ತು ಅನೇಕ ಸುಧಾರಣಾ ಕ್ರಮಗಳು, ಕೈಗೊಂಡಿರುವ ಜನಪರ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಸಂದರ್ಭದಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ ಎಂದರು,
ಡಿಸೆಂಬರ್ ತಿಂಗಳಲ್ಲಿ 4 ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ನರೇಂದ್ರ ಮೋದಿಯವರಿಗೆ ಈ ಸಂದರ್ಭದಲ್ಲಿ ಆಹ್ವಾನಿಸಿದ್ದು ಇದಕ್ಕೆ ಅವರು ಬೆಂಗಳೂರಿಗೆ ಆಗಮಿಸುತ್ತೇನೆ ಎಂದಿದ್ದಾರೆ, ನಾಲ್ಕು ಕಾರ್ಯಕ್ರಮಗಳನ್ನು ಒಟ್ಟಿಗೆ ಇಟ್ಟುಕೊಳ್ಳುವ ಬದಲು ನಿಗದಿ ಮಾಡಿಕೊಂಡು ಎರಡು ಬಾರಿ ಬರುತ್ತೇನೆ, ಅದಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸಿ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ನಾವು ಮುಂದಿನ ಕಾರ್ಯಕ್ರಮ ಜೋಡಣೆ ಮಾಡುತ್ತೇವೆ ಎಂದರು,
ಈ ಸಂದರ್ಭದಲ್ಲಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ತಂದಿದ್ದು,ಈ ವಿಷಯ ಬಗ್ಗೆ ಪ್ರಧಾನಿಯವರು ಹಾನಗಲ್ ನಲ್ಲಿ ಅಲ್ಪ ಪ್ರಮಾಣದಲ್ಲಿ ಸೋತಿದ್ದೇವೆ ಎಂದಾಗ ಚುನಾವಣೆಯಲ್ಲಿ ಸೋಲು-ಗೆಲುವು ಇದ್ದಿದ್ದೇ, ಇದಕ್ಕೆ ಯಾವುದೇ ಯೋಚನೆ ಮಾಡದೆ ಮುಂದಿನ ದಿನಗಳಲ್ಲಿ ಜನ ಸ್ನೇಹಿ ಆಡಳಿತದೊಂದಿಗೆ, ಇನ್ನಷ್ಟು ಜನಪರ ಕೆಲಸಗಳನ್ನು ಮಾಡಿ ಜನರ ವಿಶ್ವಾಸ ಗಳಿಸಲು ಪ್ರಯತ್ನಿಸಿ ಎಂದು ಹೇಳಿದ್ದಾರೆ. ಅವರ ಈ ಸಲಹೆಯನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯವಾಗಿದ್ದು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವುದೇ ನಮ್ಮ ಏಕೈಕ ಗುರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post