ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹಿಂದುಳಿದ ಜಾತಿಗಳ ಮೀಸಲಾತಿ ಲಾಭ ಪಡೆದು ಅನುಕೂಲಗೊಂಡವರು, ಕೆಟಗರಿಯಿಂದ ಹೊರಬಂದು ತೀರಾ ಹಿಂದುಳಿದ ಜನರಿಗೆ ಮೀಸಲಾತಿಯ ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ Supreme Court ಸಲಹೆ ನೀಡಿದರು.
ಎಸ್ಸಿ, ಎಸ್ಟಿ ಸಮುದಾಯಕ್ಕೆ ರಾಜ್ಯ ಸರ್ಕಾರಗಳು ಒಳಮೀಸಲಾತಿ Internal Reservation ನೀಡುವ ವಿಷಯದ ಕುರಿತು ಪರಿಶೀಲನೆ ನಡೆಸುತ್ತಿರುವ ಸುಪ್ರೀಂನ ಸಾಂವಿಧಾನಿಕ ಪೀಠ ವಿಚಾರಣೆ ವೇಳೆ ಈ ಅಭಿಪ್ರಾಯ ತಿಳಿಸಿದೆ.
Also read: ಮುಸ್ಲೀಮರ ಪೂರ್ವಜರು ಸನಾತನಿಗಳಾಗಿದ್ದರು: ವಕೀಲ ಸುಬುಹಿ ಖಾನ್ ಹೇಳಿಗೆ ಸಿಎಂ ಯೋಗಿ ಹೇಳಿದ್ದೇನು?
ಮೀಸಲಾತಿ ಲಾಭ ಪಡೆದವರು ಮೀಸಲು ಕೆಟಗರಿಯಿಂದ ಹೊರಬಂದು ಇನ್ನಷ್ಟು ಹಿಂದುಳಿದ ಜನರಿಗೆ ಮೀಸಲಾತಿಯ ಅವಕಾಶ ಕಲ್ಪಿಸಬೇಕು. ನಿರ್ದಿಷ್ಟ ಸಮುದಾಯದಲ್ಲಿರುವ ಒಳಪಂಗಡಗಳು ಮೀಸಲಾತಿ ಲಾಭ ಪಡೆದು ಮುಂದೆ ಬಂದಿದ್ದರೆ ಅಂತಹವರು ಅದರಿಂದ ಹೊರಬಂದು ಸಾಮಾನ್ಯ ವರ್ಗದವರೊಂದಿಗೆ ಸ್ಪರ್ಧೆ ಮಾಡಬೇಕು. ಇದರಿಂದ ತಮ್ಮದೇ ವರ್ಗದ ಹಿಂದುಳಿದವರಿಗೆ ಅನುಕೂಲವಾಗಲಿದೆ ಎಂದು ನ್ಯಾಯಪೀಠ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post