ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ತೆಲಂಗಾಣ ಪಶುವೈದ್ಯೆ ಹತ್ಯಾಚಾರಿಗಳನ್ನು ಪೊಲೀಸರು ಎನ್’ಕೌಂಟರ್ ಮಾಡಿದ ಕೆಲವೇ ದಿನಗಳಲ್ಲಿ, ನಿರ್ಭಯಾ ಹತ್ಯಾಚಾರಿಗಳಿಗೂ ಸಹ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿರುವುದಕ್ಕೆ ಆಕೆಯ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ತೀರ್ಪಿನ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ಏಳು ವರ್ಷಗಳ ನಂತರ ನಾವು ನಿರಾಳತೆಯನ್ನು ಅನುಭವಿಸುತ್ತಿದ್ದೇವೆ. ಸರ್ವೋಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ಈ ಒಂದು ತೀರ್ಪಿನಿಂದ ಒಂದು ಹಂತ ನ್ಯಾಯದ ಸಮೀಪಕ್ಕೆ ತಂದು ನಿಲ್ಲಿಸಿದ್ದು, ನಮಗೆ ಕೊನೆಗೂ ನ್ಯಾಯ ದೊರೆತಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post