No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ನಿರ್ವಿಘ್ನಂ ಕುರುಮೇ ದೇವ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2019
in Army
0
ನಿರ್ವಿಘ್ನಂ ಕುರುಮೇ ದೇವ…
Share on FacebookShare on TwitterShare on WhatsApp

ಮಹಾಭಾರತದಲ್ಲಿ ಸ್ವರ್ಣಗೌರಿ ಮೂರ್ತಿ ಮಾಡಿ ಗಾಂಧಾರಿ ಆರಾಧನೆ ಮಾಡಿದಳು. ಎಲ್ಲವನ್ನೂ ಕಳೆದುಕೊಂಡ ಕುಂತಿಯು ದುಃಖಿಸುತ್ತಾ ಮೃಣ್ಮಯ ಮೂರ್ತಿ ಪೂಜಿಸಿದಳು. ಆದರೆ ಪಾಂಡವರು ತಾಯಿಯ ಪೂಜಾ ಕ್ರಿಯೆಗೆ ಸ್ವರ್ಗಲೋಕದಿಂದಲೇ, ಬಾಡಿ, ಕೊಳೆತು ಹೋಗದಂತಹ ಫಲ ಪುಷ್ಪಾದಿಗಳನ್ನು ತಂದರು. ಭೀಮಸೇನನು ಸ್ಥಳ ಶುದ್ಧಿಗಾಗಿ, ಜೀವದ ಹಂಗು ತೊರೆದು ಪುರುಷಾ ಮೃಗವನ್ನೇ ತಂದನು. ಇದು ಪುರಾಣ ಕಥೆ. ಅಂದರೆ ಆಗಲೂ ಮೃಣ್ಮಯ ಮೂರ್ತಿ ಆರಾಧನೆಯ ಕ್ರಮ ಇತ್ತು ಎಂದರ್ಥ. ಅದಕ್ಕಿಂತಲೂ ಪೂರ್ವದಲ್ಲಿ ಸ್ವಯಂ ಪಾರ್ವತಿ ದೇವಿಯೇ ಗಣಪತಿಯ ಮೃಣ್ಮಯ ಮೂರ್ತಿ ರಚಿಸಿ ಭಾದ್ರಪದ ಮಾಸದ ಚೌತಿಯಂದು ಗಣಾಧಿಪನಾದ ಗಣೇಶನ ಆರಾಧನೆ ಮಾಡಿದ್ದಳು. ಇದು ಕೂಡಾ ಪುರಾಣ ಕಥೆ.

ಮೃಣ್ಮಯ(ಮಣ್ಣಿನ) ಮೂರ್ತಿಯಲ್ಲಿ ಪಂಚ ತತ್ವಗಳಿವೆ. ಪೃಥ್ವಿ, ಜಲ, ಅಗ್ನಿ, ಆಕಾಶ, ವಾಯುಗಳೇ ಪಂಚತತ್ವ. (ಆದರೆ ಇದರಲ್ಲಿ ಅಗ್ನಿ ಎಲ್ಲಿದೆ ಅದರಲ್ಲಿ ಎಂದು ವಾದಿಸುವ ಮಂದಿಯೂ ಇದ್ದಾರೆ ನಮ್ಮಲ್ಲಿ. ಜಲದೊಳಗೆ ಅಗ್ನಿಯೂ ಇದೆ. ಜಲವನ್ನು ಭೇದಿಸಿದಾಗ oxygen ಮತ್ತು hydrogen ಸಿಗುತ್ತೆ. ಮಿಶ್ರಣದಲ್ಲಿ ನೀರು ಸಿಕ್ಕಿದರೆ, ವಿಭಜನೆಯಲ್ಲಿ ವಾಯು ಮತ್ತು ಅಗ್ನಿ ಸಿಗುತ್ತೆ ಅಂತ ತಿಳಿಯಬೇಕು.)

ಯಾರೋ ಈ ಆಚರಣೆಯನ್ನು ವಿರೋಧಿಸಿದವರು ಏನೇನೋ ಅಪಸ್ವರದ ಕಥೆ ಕಟ್ಟಿದರು. ಪಾರ್ವತಿ ಮಣ್ಣಿನಿಂದ ರಚಿಸಿದ ತನ್ನ ಮಗನೆಂದು ಮುದ್ದಾಡುತ್ತಾ, ಸ್ನಾನಗೃಹದ ಮುಂದೆ ರಕ್ಷಣೆಗಾಗಿ ಇಟ್ಟಳು. ಶಿವನು ಅಲ್ಲಿಗೆ ಬಂದು ಸ್ನಾನ ಗೃಹದ ಬಾಗಿಲು ತೆರೆಯಲೆತ್ನಿಸಿದಾಗ ಈ ಬಾಲಕ ತಡೆದ. ಕುಪಿತನಾದ ಶಿವನು ಬಾಲಕನ ತಲೆ ಕಡಿದ. ಕೊನೆಗೆ ಪಾರ್ವತಿ ಹೊರ ಬಂದು ಈ ದೃಶ್ಯ ನೋಡಿ ದುಃಖಿಸಿದಾಗ ಶಿವನು ಆ ಮುಂಡಕ್ಕೆ ಉತ್ತರಕ್ಕೆ ತಲೆ ಇಟ್ಟು ಮಲಗಿದಂತಹ ಆನೆಯ ತಲೆಯನ್ನು ಇಟ್ಟು ಬದುಕಿಸಿದ ಎಂದು ಕಥೆ ಕಟ್ಟಿದರು. ಇದುವೇ ಮಹಾ ಪುರಾಣ ಎಂದು, ತಿಳಿಯದವರು ಕಥೆ ಹೇಳುತ್ತಾ, ಹಾಡು ಹಾಡುತ್ತಾ ಭಾವ ಪರವಶರಾಗುತ್ತಾರೆ.

ನಂತರದ ಅಂದರೆ ಈಗಿನ ಕೆಲ ಮೂರ್ಖ ಸಾಹಿತಿಗಳು ಪಾರ್ವತಿ ವ್ಯಭಿಚಾರಿ, ಗಣಪತಿ ಅವಳ ಮಗ ಎಂದು ಪುಸ್ತಕವನ್ನೇ ಬರೆದು ಈಚೆಗೆ ಧನ ಸಂಪಾದನೆಯನ್ನೂ, ಆಕಡೆ ಮೂರ್ಖರಿಂದ ಸನ್ಮಾನವನ್ನೂ ಪಡೆದು ತೃಪ್ತರಾದರು. ನೀವೇ ಯೋಚಿಸಿ ನೋಡಿ. ಬಾಲಕನ ತಲೆ ಕಡಿದ ಶಿವನು ದೇವರಾದಾನೇ? ಅಥವಾ ದೇವರಾಗಿದ್ದರೆ ಆನೆಯ ತಲೆಯ ಬದಲು, ಅದೇ ಬಾಲಕನ ತಲೆಯನ್ನೇ ಯಾಕೆ ಕಸಿ ಮಾಡಲಿಲ್ಲ. ಪುರಾಣ ನಿಂದನೆ ಆಗಲೂ ಇತ್ತು, ಈಗಲೂ ಇದೆ. ಮುಂದೆಯೂ ಇರುತ್ತೆ. ಆದರೆ ಆರಾಧನೆ ಮಾಡುವವರು ಜ್ಞಾನವಂತರಾಗಬೇಕಾಗಿದೆ.

ಪಂಚತತ್ವದ ಮೃಣ್ಮಯ ಮೂರ್ತಿಯಲ್ಲಿ ಕುಜಾದಿ ಪಂಚ ಗ್ರಹರ ತತ್ವವೂ, ರವಿ ಚಂದ್ರರ ಅನುಗ್ರಹವೂ, ರಾಹು ಕೇತುಗಳ ಮೋಹವೂ ಇರುತ್ತದೆ. ದೇಹದ ಒಳಗಿರುವ 72 ಸಾವಿರ ನಾಡಿಗಳಲ್ಲಿ 36 ಸಾವಿರ ನಾಡಿಗಳು ಕ್ರಿಯೆಗೂ, ಮತ್ತೆ ಉಳಿದ 36 ಸಾವಿರ ನಾಡಿಗಳು ಕ್ರಿಯಾ ನಾಡಿಗಳ ರಕ್ಷಣೆಗೂ ಇರುತ್ತದೆ. ಆ ಎಲ್ಲಾ ನಾಡಿಗಳೊಳಗೆ ಅನೇಕ ಗುಂಪುಗಳು ಇರುತ್ತದೆ. ಪ್ರತಿಯೊಂದು ಗುಂಪಿನ ನಿಯಂತ್ರಣಕ್ಕೂ ಒಂದೊಂದು ಗಣಪತಿ ಇರುತ್ತದೆ. ಈ ಗಣಪತಿಯ ರಕ್ಷಣಾ ಕವಚದಿಂದಲೇ ವಿಘ್ನಗಳ ನಿವಾರಣೆಯಾಗಿ ಪರಿಶುದ್ಧತೆ ಲಭಿಸುತ್ತದೆ. ಇದಕ್ಕಾಗಿಯೇ ಗಣಪತಿಯು ವಿಘ್ನ ನಿವಾರಕ ವಿಘ್ನೇಶನಾದ.

ಎಲ್ಲಾ ಗಣಪತಿಗಳಿಗೂ ಮತ್ತೊಬ್ಬ ಪ್ರಧಾನ ಅಧಿಪತಿ ಇರುತ್ತಾನೆ. ಅವನೇ ವಿಶ್ವಂಭರ ರೂಪಿ ಭಗವಂತ. ಅವನನ್ನೇ ನಾವು ಗಣಪತಿ, ಗಣಾಧ್ಯಕ್ಷ, ಗಣೇಶ ಎಂಬಿತ್ಯಾದಿ ನಾಮಗಳಿಂದ ಕರೆಯುತ್ತೇವೆ. ಹೇಗೆ ದೇಶದ ಪ್ರಜಾ ಪ್ರಭುತ್ವದೊಳಗೆ, ಗ್ರಾಮ ಪಂಚಾಯತ್ ಅಧ್ಯಕ್ಷ, ತಾಲೂಕು ಪಂಚಾಯತ್ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಅಧ್ಯಕ್ಷ, ಶಾಸಕರು, ಮುಖ್ಯಮಂತ್ರಿ, ಪ್ರಧಾನಮಂತ್ರಿ, ರಾಷ್ಟ್ರಾಧ್ಯಕ್ಷರ ಪದವಿಗಳಿರುತ್ತೋ ಹಾಗೆಯೇ ದೇಹದ ಒಳಗೂ ಒಂದು ಆಡಳಿತ ವ್ಯವಸ್ಥೆ ಇರುತ್ತದೆ. ಯಾವಾಗ ಈ ವ್ಯವಸ್ಥೆಯಲ್ಲಿ ಅನೇಕಾನೇಕ ಲೋಪಗಳನ್ನು ಹೊಂದಿದ ಮನುಷ್ಯರು ಇರುತ್ತಾರೋ ಅವರೇ ಈಗಿನ ಕೆಲ ಮೂರ್ಖ ಪ್ರಗತಿಪರ ವಿಚಾರವಾದಿ ಸಾಹಿತಿಗಳು.

ಹಾಗಾಗಿ ಯಾವುದೇ ಪೂಜೆ ಮಾಡಬೇಕಾದರೆ ನಾವು ಗಣಪತಿಯ ಸ್ಮರಣೆ ಮೊದಲಾಗಿ ಮಾಡುವುದು. ಇಂತಹ ಗಣಪತಿಯ ಆರಾಧನೆಯಿಂದ ದೇಹದೊಳಗಿನ ವಿವಿಧ ಕ್ರಿಯೆಗಳನ್ನು ಮಾಡುವ ನಾಡಿಗಳ ಅಭಿಮಾನಿ ದೇವತೆಗಳ ಅನುಗ್ರಹ ಸಿಗುತ್ತದೆ. ಇದು ಕೇವಲ ನಂಬಿಕೆಯಲ್ಲ. ಪುರಾಣ ಸತ್ಯಗಳು. ನಾವುಣ್ಣುವ ಪ್ರತೀ ಆಹಾರ ಖಾಧ್ಯಗಳಿಗೂ ಅಭಿಮಾನಿ ದೇವತೆಗಳಿದ್ದಾರೆ. ಅವುಗಳಿಂದ ಬರುವ ರಸಾನಿಲಗಳೊಳಗೆ ಅಭಿಮಾನಿ ದೇವರುಗಳಿರುತ್ತಾರೆ. ಇವರೆಲ್ಲರೂ ಅಗ್ನಿ-ಆಕಾಶ-ವಾಯುತತ್ವಗಳಲ್ಲಿದ್ದು ಕಣ್ಣಿಗೆ ಕಾಣಿಸೋದಿಲ್ಲ. ಕೇವಲ ಸ್ಪರ್ಷಾನುಭವದಿಂದ ತಿಳಿಯಬಹುದು. ಯಾರಿಗೆ ನಾಡಿ ಶುದ್ಧ ಇಲ್ಲವೋ ಅವರಿಗೆ ದೇವಾನುಭವ ಸಿಗಲಾರದು. ನೊಣ, ಕೀಟಗಳಿಗೆ ಹೇಗೆ ಅನುಭವ ಸಿಗುವುದಿಲ್ಲವೋ ಹಾಗೆಯೇ ಸ್ಪರ್ಷಾನುಭವ ಇಲ್ಲದವರಿಗೂ ಆಗುತ್ತದೆ.

ಇಂದು ಆಡಂಬರ, ಅಲಂಕಾರ, ಪ್ರತಿಷ್ಠೆಗಳೇ ದೇವತಾರಾಧನೆಗೆ ಮಾರಕವಾಗಿದೆ. ಇಲ್ಲಿ ಸಿಗುವುದು ಕೇವಲ ಮಜಾ(enjoyment) ಮಾತ್ರ. ಬಹುಷಃ ಅದುವೇ ಬೇಕಾಗಿರಲೂಬಹುದು. ಈ ಸಲದ ಗಣೇಶ ಹಬ್ಬದಲ್ಲಿ ಮೃಣ್ಮಯ ಗಣಪತಿ ರಚಿಸಿ, ನೈಸರ್ಗಿಕ ಬಣ್ಣ, ಪುಷ್ಪಾಲಂಕಾರ ಮಾಡಿ. ಇದರಿಂದ ಪರಿಸರಕ್ಕೂ ಹಾನಿಯಾಗದು. ದೇವತಾ ಅನುಗ್ರಹವೂ ಸಿಗುತ್ತದೆ. ಆಡಂಬರದ ಶಬ್ದ ಮಾಲಿನ್ಯ ನಿಲ್ಲಿಸಿ, ಭಜನೆ, ಪೂಜೆಗಳ ಮೂಲಕ ಆ ವಿಶ್ವಂಭರ ಸ್ವರೂಪಿ ಗಣಪನ ಆರಾಧನೆಯನ್ನು ಮಾಡೋಣ. ಇತರ ಸಮುದಾಯದವರಿಗೆ ತೊಂದರೆಯಾಗದೆ ಆರಾಧನೆ ಮಾಡಿದಾಗ, ಒಂದು ದಿನ ಅವರೂ ನಮ್ಮ ಜತೆ ಸೇರಿ ಇನ್ನಷ್ಟು ಭ್ರಾತೃತ್ವ ಹೆಚ್ಚಾಗುತ್ತದೆ. ಸರ್ವ ವಿಘ್ನಗಳೂ ದೂರವಾಗಲಿ ಎಂದು ಪ್ರಾರ್ಥಿಸೋಣ.

Tags: Ganesha ChaturthiKannada ArticleMrunmaya GaneshaPrakash AmmannayaSpecial ArticleSwarna GowriTheologyಕ್ರಿಯಾ ನಾಡಿಜ್ಯೋರ್ತಿವಿಜ್ಞಾನಂದೇವತಾನುಗ್ರಹಪ್ರಕಾಶ್ ಅಮ್ಮಣ್ಣಾಯಮೃಣ್ಮಯ ಗಣಪತಿಸ್ವರ್ಣಗೌರಿ
Share224Tweet123Send
Previous Post

ರೈತರಿಗೆ ಯೋಜನೆಯ ಜಾರಿಯಲ್ಲಿ ಶಿವಮೊಗ್ಗ ನಂಬರ್ ಒನ್ ಆಗಬೇಕು: ರಾಜೇಂದ್ರ ಕುಮಾರ್ ಕಟಾರಿಯಾ

Next Post

ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ರಜನಿಕಾಂತ್ ಭೇಟಿ: ಮುಗಿಬಿದ್ದ ಅಭಿಮಾನಿಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ರಜನಿಕಾಂತ್ ಭೇಟಿ: ಮುಗಿಬಿದ್ದ ಅಭಿಮಾನಿಗಳು

ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ರಜನಿಕಾಂತ್ ಭೇಟಿ: ಮುಗಿಬಿದ್ದ ಅಭಿಮಾನಿಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL