ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ರಾಜ್ಯಸಭೆ ಪ್ರವೇಶಿಸುವುದು ಖಚಿತಗೊಂಡಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅವರು, 20 ವರ್ಷಕ್ಕಿಂತ ಹೆಚ್ಚು ಕಾಲ ವಹಿಸಿಕೊಂಡಿದ್ದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಸೇರುವುದಾಗಿ ದೃಢಪಡಿಸಿದ್ದಾರೆ.
ನನ್ನ ರಾಜಕೀಯ ಜೀವನದ ಆರಂಭದಿಂದಲೇ ಬಿಹಾರ ವಿಧಾನಮಂಡಲದ ಎರಡೂ ಸದನಗಳಲ್ಲೂ ಹಾಗೂ ಭಾರತದ ಸಂಸತ್ತಿನ ಎರಡೂ ಸದನಗಳಲ್ಲೂ ಸದಸ್ಯನಾಗಬೇಕೆಂಬ ಆಸೆ ನನ್ನ ಮನಸ್ಸಿನಲ್ಲಿ ಇತ್ತು. ನನ್ನ ಆಸೆಯಂತೆ ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಸಭೆ ಸದಸ್ಯನಾಗಲು ಬಯಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷದ ನವೆಂಬರ್’ನಲ್ಲಿ ದಾಖಲೆ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ರಾಜ್ಯದ ಜನರು ನಿರಂತರವಾಗಿ ತಮಗೆ ವಿಶ್ವಾಸ ತೋರಿಸಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಎರಡು ದಶಕಕ್ಕೂ ಹೆಚ್ಚು ಕಾಲ ನೀವು ನನ್ನ ಮೇಲೆ ನಿರಂತರವಾಗಿ ವಿಶ್ವಾಸ ಮತ್ತು ಬೆಂಬಲವನ್ನು ತೋರಿದ್ದೀರಿ. ಆ ವಿಶ್ವಾಸದ ಶಕ್ತಿಯಿಂದಲೇ ನಾವು ಬಿಹಾರ ಜನರಿಗೆ ಸಂಪೂರ್ಣ ಸಮರ್ಪಣೆಯೊಂದಿಗೆ ಸೇವೆ ಸಲ್ಲಿಸಿದ್ದೇವೆ. ನಿಮ್ಮ ವಿಶ್ವಾಸ ಮತ್ತು ಬೆಂಬಲದ ಕಾರಣದಿಂದಲೇ ಇಂದು ಬಿಹಾರ ಅಭಿವೃದ್ಧಿ ಮತ್ತು ಗೌರವದ ಹೊಸ ದಿಕ್ಕನ್ನು ಕಾಣುತ್ತಿದೆ ಎಂದು ಅವರು ಬರೆದಿದ್ದಾರೆ.
ಜೆಡಿಯು ಮುಖ್ಯಸ್ಥರೂ ಆಗಿರುವ ನಿತೀಶ್ ಕುರ್ಮಾ ಅವರು, ಮುಂದೆಯೂ ರಾಜ್ಯದ ಜನರೊಂದಿಗೆ ತಮ್ಮ ಸಂಬAಧ ಮುಂದುವರೆಯಲಿದೆ ಹಾಗೂ ಹೊಸ ಸರ್ಕಾರಕ್ಕೆ ಮಾರ್ಗದರ್ಶನ ನೀಡುವುದಾಗಿ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















