ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಎಂಬುದನ್ನು ಮತ್ತೊಮ್ಮೆ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ ಮತ್ತು ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ. ಸಚಿವರು ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಪೋಲ ಕಲ್ಪಿತ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಸರ್ಕಾರ ತಾನಾಗಿಯೇ ಯಾವುದೇ ನಿರ್ಣಯ ಅಧಿಕೃತವಾಗಿ ಪ್ರಕಟಿಸುವ ಮುನ್ನ ಮಾಧ್ಯಮದಲ್ಲಿ ಪ್ರಸಾರವಾಗುವ ಅಥವಾ ಪ್ರಕಟವಾಗುವ ಯಾವುದೇ ಸುದ್ದಿಯನ್ನು ನಿಜ ಎಂದು ನಂಬಬೇಡಿ ಎಂದೂ ಅವರು ಕೋರಿದ್ದಾರೆ.
ತಜ್ಞರ ಸಮಿತಿ ವರದಿ ಅಥವಾ ಬೇರೆ ಬೇರೆ ಆಯಾಮಗಳಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ಚರ್ಚೆಗಳು ಎಂದಿಗೂ ಅಂತಿಮ ನಿರ್ಣಯವಾಗಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.
Get In Touch With Us info@kalpa.news Whatsapp: 9481252093
















