ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲ್ಲೂಕಿನ ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆ, ಜೂನ್ 23 ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ:
ಗಾಜನೂರು, ಕ್ಯಾಂಪ್ ಹಾಗೂ ಡ್ಯಾಂ ಪ್ರದೇಶ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೇಕಲ್, ಯರಗನಾಳ್, ಕುಸ್ಕೂರು, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















