No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಎಐ ನಂತರ ಎಂತಹ ತಂತ್ರಜ್ಞಾನ ಬಂದರೂ ಶಿಕ್ಷಕರಿಗೆ ಪರ್ಯಾಯ ಇಲ್ಲ | ಎಂಪಿ ರಾಘವೇಂದ್ರ ಅಭಿಮತ

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮೂರನೇ ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 18, 2025
in ಶಿಕಾರಿಪುರ
0
ಎಐ ನಂತರ ಎಂತಹ ತಂತ್ರಜ್ಞಾನ ಬಂದರೂ ಶಿಕ್ಷಕರಿಗೆ ಪರ್ಯಾಯ ಇಲ್ಲ | ಎಂಪಿ ರಾಘವೇಂದ್ರ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಪ್ರಪಂಚದಲ್ಲಿ ಎಐ ನಂತರ ಎಂತಹುದ್ದೇ ತಂತ್ರಜ್ಞಾನ ಬಂದರೂ ಸಹ ವಿದ್ಯೆ ಕಲಿಸುವ ಶಿಕ್ಷಕರಿಗೆ ಪರ್ಯಾಯ ಎಂಬುದಿಲ್ಲ ಎಂದು ಶಿಕಾರಿಪುರ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಕಾರ್ಯದರ್ಶಿಗಳೂ ಆದ, ಸಂಸದ ಬಿ.ವೈ. ರಾಘವೇಂದ್ರ ಅಭಿಪ್ರಾಯಪಟ್ಟರು.

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಮೂರನೆಯ ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಶಿಕ್ಷಣ ಕೇವಲ ನಾಲ್ಕು ಗೋಡೆಯ ಒಳಗಡೆ ನಡೆಯುವಂತದ್ದಲ್ಲ, ಕೇವಲ ಪಾಠದ ಪುಸ್ತಕವಲ್ಲ, ಕೇವಲ ಅಂಕಗಳಿಸುವುದಕ್ಕಾಗಿ ಅಲ್ಲ. ಶಿಕ್ಷಣ ಹೇಗೆ ಯೋಚಿಸಬೇಕು, ಪ್ರಶ್ನಿಸಬೇಕು, ಕಲ್ಪನೆ ಮಾಡಿಕೊಳ್ಳಬೇಕು ಹಾಗೂ ಹೊಸ ಸನ್ನಿವೇಶಗಳನ್ನು ಹೇಗೆ ನಿಭಾಯಿಸಬೇಕು ಎಂದು ಅರ್ಥೈಸುವಂತಾಗಬೇಕು ಎಂದರು.

ಪ್ರಸ್ತುತದಲ್ಲಿ ಕೃತಕ ಬುದ್ಧಿಶಕ್ತಿಯ ತಂತ್ರಜ್ಞಾನ, ಎಐ ಇಂದ ಕೆಲಸಗಳು ಕಡಿಮೆಯಾಗುತ್ತವೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಯಾವುದೇ ತಂತ್ರಜ್ಞಾನ ಬಂದರೂ ಶಿಕ್ಷಕರ ಹೊರತು ಪಡಿಸಿ ಪರ್ಯಾಯ ಆಲೋಚನೆ ಮಾಡಲು ಸಾಧ್ಯವಿಲ್ಲ. ಶಿಕ್ಷಕ ಸಹಾನುಭೂತಿಯಿಂದ ಉದ್ಯೋಗಿಯಾಗಿ, ವ್ಯಕ್ತಿಯಾಗಿ, ಒಬ್ಬ ಆಪ್ತ ಸಮಾಲೋಚನಕರಾಗಿ ಕೆಲಸ ನಿರ್ವಹಿಸುವಂತಾಗಬೇಕು.
-ಬಿ.ವೈ. ರಾಘವೇಂದ್ರ

ತರಗತಿಯ ಒಳಗಡೆ ಮಾತ್ರ ನಡೆಯುವಂತದ್ದು ಶಿಕ್ಷಣ ಎಲ್ಲರಿಗೂ, ಎಲ್ಲರಿಗಾಗಿ ಶಿಕ್ಷಣ ಎನ್ನುವಂತಾಗಬೇಕು. ಕಳೆದ ಹತ್ತು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ಗಮನಿಸುತ್ತಿದ್ದೇವೆ. ಐಐಟಿ, ಇಂಜಿನಿಯರಿಂಗ್, ರಾಷ್ಟ್ರೀಯ ಶಿಕ್ಷಾ, ಸ್ವಯಂ, ದೀಕ್ಷಾ ವಿದ್ಯಾನಿಧಿ ಹೀಗೆ ಶಿಕ್ಷಣದಲ್ಲಿ ಡಿಜಿಟಲೀಕರಣ ಕಾರ್ಯಕ್ರಮಗಳು ಶಿಕ್ಷಣಕ್ಕೆ ಪ್ರವೇಶ ಮಾಡುತ್ತಿವೆ ಎಂದರು ತಿಳಿಸಿದರು.
ಬದಲಾದ ಸನ್ನಿವೇಶದಲ್ಲಿ ಕಲಿಕೆಗೆ ಪ್ರಾಮುಖ್ಯತೆ ದೊರೆಯುವಂತಾಗಬೇಕಾದರೆ, ಕಲಿಕೆಗೆ ಪ್ರಾಮುಖ್ಯತೆಯನ್ನು ನೀಡಬೇಕು. 21ನೇ ಶತಮಾನದ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ಬಯಸುವ ಈ ಸಂದರ್ಭದಲ್ಲಿ ನಿರಂತರವಾಗಿ ನಡೆಯುತ್ತಿರುವ ಸಂಶೋಧನೆಗಳು ಮತ್ತು ಅವುಗಳಿಂದ ಹೊರಬಂದ ಫಲಿತಾಂಶಗಳನ್ನು ಪರಿಗಣಿಸಬೇಕು ಎಂದರು.

ಶಿಕ್ಷಣ ಕೇವಲ ಗಳಿಸುವುದಕ್ಕಾಗಿ ಮಾತ್ರ ರೂಪಿತವಾದುದಲ್ಲ ಅದು ಜೀವನವನ್ನು ರೂಪಿಸುವ ಸರ್ವಾಂಗೀಣ ಅಭಿವೃದ್ಧಿಯ ಸಂಕೇತ. ಶಿಕ್ಷಣದಲ್ಲಿ ನವೀನ ಬೋಧನಾ ಪದ್ಧತಿಗಳು ಹಳ್ಳಿಯಿಂದ ಪ್ರಾರಂಭವಾಗಿ ನಗರ ಪ್ರದೇಶಗಳಿಗೂ ವ್ಯಾಪಿಸುತ್ತಿರುವುದನ್ನು ಗಮನಿಸುವುದಾದರೆ ಇಂತಹ ಸಮ್ಮೇಳನಗಳಲ್ಲಿ ಪಾಲ್ಗೊಂಡಾಗ ಮಾತ್ರ ಸಾಧ್ಯ. ಕೌಶಲ್ಯಾಧಾರಿತ ಶಿಕ್ಷಣವನ್ನು ಪ್ರತಿಯೊಬ್ಬರಿಗೂ ನೀಡಬೇಕು ಎಂಬುದು ಎಲ್ಲರ ಆಶಯವಾಗಿದೆ ಎಂದರು.

ಸಮ್ಮೇಳನದ ಕುರಿತಾದ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು

ಸಾಮಾಜಿಕ ಮತ್ತು ಭಾವನಾತ್ಮಕ ಕಲಿಕೆಗೆ ಒತ್ತನ್ನು ನೀಡುವ ಮೂಲಕ ಶಿಕ್ಷಣ ಮತ್ತು ಶಿಕ್ಷಕರ ವೃತ್ತಿಪರ ಅಭಿವೃದ್ಧಿಯಲ್ಲಿ ಭವಿಷ್ಯದ ಪ್ರವೃತ್ತಿಗಳನ್ನು ಮೇಳೈಸಿ ಪಠ್ಯಕ್ರಮದ ನಾವೀನ್ಯತೆ ಮತ್ತು ವಿನ್ಯಾಸವನ್ನು ಮರು ಹೊಂದಿಸುವ ಅನಿವಾರ್ಯತೆ ಇದೆ. ಈ ರೀತಿಯ ಸಮ್ಮೇಳನಗಳು, ಕಾರ್ಯಾಗಾರಗಳು, ವಿಚಾರ ಸಂಕಿರಣಗಳು ವೇದಿಕೆಯನ್ನು ನಿರ್ಮಿಸಿ ಕೊಡುತ್ತವೆ. ಶಿಕ್ಷಣ ತಜ್ಞರು, ಪ್ರಾಧ್ಯಾಪಕರು, ಬೋಧಕರು ಎಲ್ಲರು ಒಟ್ಟಿಗೆ ಸೇರಿ ಚರ್ಚಿಸಿ ಸೂಕ್ತವಾದುದ್ದನ್ನು ಆಯ್ದು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಹಾಯಕವಾಗುತ್ತದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಎರಡು ದಿನಗಳ ಶೈಕ್ಷಣಿಕ ಸಮ್ಮೇಳನ ಸಫಲವಾಗಲಿ ಎಂದು ಹಾರೈಸಿದರು.ಕುವೆಂಪು ವಿವಿ ಕುಲಪತಿಗಳಾ ಪ್ರೊ.ಶರತ್ ಅನಂತಮೂರ್ತಿ ಮಾತನಾಡಿ, ಶಿಕ್ಷಣ ಎಂಬುದು ಸ್ವಾಮಿ ವಿವೇಕಾನಂದರು ಹೇಳಿದಂತೆ ಈಗಾಗಲೇ ಮಗುವಿನಲ್ಲಿ ಸುಪ್ತವಾಗಿರುವ ಶಕ್ತಿ ಇದನ್ನು ಕ್ರೀಯಾತ್ಮಕವಾಗಿ ಹೊರತರುವ ಶಕ್ತಿ ಶಿಕ್ಷಕರಲ್ಲಿರುತ್ತದೆ. ಶಿಕ್ಷಣ ಎಂದರೆ ಎಲ್ಲದನೂ ಕಲಿಸುವುದಲ್ಲ, ಕಲಿಯುವಂತೆ ಮಾರ್ಗದರ್ಶನವನ್ನು ನೀಡುವಂತಾಗಬೇಕು ಎಂದರು.

ಮಗುವಿನಲ್ಲಿರುವ ಅಂತಃಸತ್ವವನ್ನು ಹೇಗೆ ಹೊಸತನದೊಂದಿಗೆ ಹೇಗೆ ಪ್ರಸ್ತುಪಡಿಸಬೇಕೆಂಬುದಾಗಿದೆ. ಮಗುವಿಗೆ ಯಾವುದೇ ನಿರ್ಬಂಧಗಳಿಲ್ಲದೇ ಮಾನವೀಯತೆ, ಕಾರಣಗಳು, ಅವಧಾನ, ವೀಕ್ಷಿಸುವಿಕೆ, ಸಾಮರ್ಥ್ಯವನ್ನು ಪತ್ತೆ ಹಚ್ಚಿ ಗುರುತಿಸುವ ಪ್ರಯತ್ನಗಳು ಶಿಕ್ಷಕರಿಂದಾಗಲಿ ಹಾಗೆಯೇ ಸಮ್ಮೇಳನವು ಅರ್ಥಪೂರ್ಣವಾಗಿ ನಡೆಯಲಿ.
-ಪ್ರೊ.ಶರತ್ ಅನಂತಮೂರ್ತಿ

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಂ.ಬಿ. ಶಿವಕುಮಾರ್, ಬೆಂಗಳೂರು ಡೀಮ್ಡ್ ವಿಶ್ವವಿದ್ಯಾಲಯದ ನಿರ್ದೇಶಕರಾದ ಡಾ.ಶ್ರೀಕಂಠಸ್ವಾಮಿ, ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಜಿ.ಆರ್. ಅಂಗಡಿ, ಕರ್ನಾಟಕ ಪ್ರಾಚಾರ್ಯರಾದ ಡಾ. ಶಿವಕುಮಾರ್‌ಜಿ. ಎಸ್ ಹಾಗೂ ಬೇರೆ ಬೇರೆ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು, ಸಂಪನ್ಮೂಲ ವ್ಯಕ್ತಿಗಳು, ಬೋಧಕರು, ಸಿಬ್ಬಂದಿಗಳು ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿಗಳಾದ ಪ್ರೇಕ್ಷಾ ಮತ್ತು ತಂಡದವರು ಪ್ರಾರ್ಥಿಸಿ, ಪ್ರಾಚಾರ್ಯರಾದ ಡಾ. ಶಿವಕುಮಾರ್ ಜಿ.ಎಸ್. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಾಧ್ಯಾಪಕರಾದ ಡಾ. ಯದುಕುಮಾರ್ ಎಂ ವಂದನಾರ್ಪಣೆ ಮಾಡಿ, ಡಾ.ಎಸ್. ನಾಗೇಂದ್ರಪ್ಪ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Academic conferenceKannada News Websitekumadvathi residential schoolLatest News KannadaShikaripuraShimogaShivamogga NewsShivmaoggaಎಐಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕೃತಕ ಬುದ್ಧಿಶಕ್ತಿದೀಕ್ಷಾ ವಿದ್ಯಾನಿಧಿಬಿ.ವೈ. ರಾಘವೇಂದ್ರಶಿಕಾರಿಪುರಶೈಕ್ಷಣಿಕ ಸಮ್ಮೇಳನ
Share209Tweet123Send
Previous Post

“Amrit Samvaad” Conducted at Sakleshpur, Haveri and Shivamogga Railway Stations

Next Post

ಹಾಸನಾಂಬೆ ದರ್ಶನಕ್ಕೆ ಜನಸ್ತೋಮ | ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೀಪಾವಳಿಗೆ ರಾಜ್ಯದ ವಿವಿಧ ನಗರಗಳಿಗೆ 2500 ಹೆಚ್ಚುವರಿ KSRTC ಬಸ್ | ನಾಳೆಯಿಂದ ಆರಂಭ

ಹಾಸನಾಂಬೆ ದರ್ಶನಕ್ಕೆ ಜನಸ್ತೋಮ | ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL