ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಶಿವಮೊಗ್ಗ -ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ 34(47/400-500) ರಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದರಿಂದ ಜೂನ್-19 ಬೆಳಗ್ಗೆ 10.00 ರಿಂದ ಜೂನ್-20ರ ರಾತ್ರಿ 8.00 ಗಂಟೆಯವರೆಗೆ ಗೇಟ್ ಮೂಲಕ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚನೆ ನೀಡಿದ್ದಾರೆ.
ಶಿವಮೊಗ್ಗದಿಂದ ಭದ್ರಾವತಿಗೆ ಬರುವ ವಾಹನಗಳು ಬಿಳಕಿ ಕ್ರಾಸ್ ಮಾರ್ಗವಾಗಿ ಕೃಷ್ಣಪ್ಪ ವೃತ್ತ ತಲುಪಿ ಭದ್ರಾವತಿಗೆ ತಲುಪುವುದು ಹಾಗೂ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಹೋಗುವ ವಾಹನಗಳು ಅಂಡರ್ ಬ್ರಿಡ್ಜ್-ಉಂಬ್ಳೇಬೈಲು ರಸ್ತೆ ಮಾರ್ಗವಾಗಿ ಕೃಷ್ಣಪ್ಪ ವೃತ್ತ ತಲುಪಿ ರಾಷ್ಟ್ರೀಯ ಹೆದ್ದಾರಿ 206ರ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿರುತ್ತಾರೆ.
Get In Touch With Us info@kalpa.news Whatsapp: 9481252093
Discussion about this post