ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2020-21ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿಕಾಂ, ಎಂಎ/ಎಂಸಿಜೆ/ಎಂಕಾಂ, ಎಂಬಿಎ, ಬಿಎಲ್’ಐಎಸ್ಸಿ, ಎಂಎಲ್’ಐಎಸ್ಸಿ, ಎಂಎಸ್ಸಿ, ಪಿಜಿ ಡಿಪ್ಲೋಮಾ ಪ್ರೋಗ್ರಾಂ, ಡಿಪ್ಲೋಮಾ ಪ್ರೋಗ್ರಾಂ, ಸರ್ಟಿಫಿಕೇಟ್ ಪ್ರೋಗ್ರಾಂಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ.31ರವರೆಗೆ ವಿಸ್ತರಿಸಲಾಗಿದೆ.ಈ ಕೋರ್ಸ್ಗಳ ಪ್ರಥಮ ವರ್ಷದ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ದಂಡ ಶುಲ್ಕವಿಲ್ಲದೆ ಡಿ.31ರವರೆಗೆ ವಿಸ್ತರಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 25ರಷ್ಟು ವಿನಾಯ್ತಿ ನೀಡಲಾಗುವುದು. ಎಸ್’ಸಿ/ಎಸ್’ಟಿ ವಿದ್ಯಾರ್ಥಿಗಳಿಗೆ ಸೂಕ್ತ ದಾಖಾಲಾತಿಯೊಂದಿಗೆ ಶುಲ್ಕ ವಿನಾಯ್ತಿಯಡಿಯಲ್ಲಿ ಪ್ರವೇಶಾತಿ ನೀಡಲಾಗುವುದು ಹಾಗೂ ಎಲ್ಲ ಸರ್ಕಾರಿ ರಜೆಗಳಲ್ಲೂ ಪ್ರವೇಶಾತಿಗೆ ಅವಕಾಶವಿರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕ ಡಾ.ಮೋಹನ್ ರಾಜ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.08182-250367 ಅಥವಾ ವೆಬ್ಸೈಟ್ www.ksoumysuru.ac.in ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post