ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ಹರಡುವ ಭೀತಿ ಈಗ ತ್ಯಾವರೆಕೊಪ್ಪದ ಹುಲಿ ಸಿಂಹ ಧಾಮಕ್ಕೂ ಸಹ ತಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ ಬಂದ್ ಮಾಡಲಾಗಿದೆ.
ಕೊರೋನಾ ವೈರಸ್ ಹರಡುವ ಭೀತಿಯಿಂದ ರಾಜ್ಯದಾದ್ಯಂತ ಒಂದು ವಾರಗಳ ಕಾಲ ಥಿಯೇಟರ್, ಮಾಲ್, ಉದ್ಯಾನವನ, ಝೂ ಸೇರಿದಂತೆ ಸಾರ್ವಜನಿಕರು ಹೆಚ್ಚು ಸೇರುವಂತಹ ಹಲವು ಸ್ಥಳಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ,
ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಹುಲಿ-ಸಿಂಹ ಧಾಮವನ್ನೂ ಸಹ ಮುಚ್ಚಲಾಗಿದೆ.
ಪ್ರತಿದಿನ ಸಾವಿರಾರು ಮಂದಿ, ಇದರಲ್ಲಿ ಹಲವರು ವಿದೇಶಿ ಪ್ರವಾಸಿಗರೂ ಸಹ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಕೊರೋನಾ ಭೀತಿ ಹರಡುವ ಸಾಧ್ಯತೆಯೂ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಮುಂದಿನ ನಿರ್ಧಾರದವರೆಗೂ ಲಯನ್ ಸಫಾರಿಯನ್ನು ಬಂದ್ ಮಾಡಲಾಗಿದೆ.
Get in Touch With Us info@kalpa.news Whatsapp: 9481252093







Discussion about this post