ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿಯು ಫೆ.9 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹ್ಮುಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಕಾಪಾ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ರವರು ತಿಳಿಸಿದ್ದಾರೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ತ್ರಿಮೂರ್ತಿನಗರ, ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆಷನಲ್ ಹಾಲ್, ಎಲ್.ಬಿ.ಎಸ್.ನಗರ, ಅಶ್ವತ್ನಗರ, ಕಈರ್ತಿನಗರ, ದೇವಂಗಿ 01ನೆಯ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೋನಿ, ಪನವ ಶ್ರೀ ಬಡಾವಣೆ, ಕೃಷಿ ನಗರ 01ನೆಯ ಮತ್ತು 2ನೆಯ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















