ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಫೆ.12 ರಿಂದ 28 ರವರೆಗೆ ಪ್ರತಿದಿನ ಬೆಳಿಗ್ಗೆ 11.00 ರಿಂದ ಸಂಜೆ 6.00 ರವರೆಗೆ ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ರವರು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಸಂತೇಕಡೂರು, ಶ್ರೀರಾಮನಗರ, ರಾಮಪುರ, ಭಂಡಾರಿ ಕ್ಯಾಂಪ್, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಳ್ಳಿ, ಗಣಿದಾಳು ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮಾಜಿ ಹೊಸೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post