No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಅರಣ್ಯೇತರ ಚಟುವಟಿಕೆ ವಿರುದ್ಧ ನೋಟಿಸ್: ಹೊಸಗುಂದ ಉತ್ಸವಕ್ಕೆ ಬೀಳುತ್ತಾ ಬ್ರೇಕ್?

kalpa News by kalpa News
November 13, 2019
in ಸಾಗರ
0
ಅರಣ್ಯೇತರ ಚಟುವಟಿಕೆ ವಿರುದ್ಧ ನೋಟಿಸ್: ಹೊಸಗುಂದ ಉತ್ಸವಕ್ಕೆ ಬೀಳುತ್ತಾ ಬ್ರೇಕ್?
Share on FacebookShare on TwitterShare on WhatsApp

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು:
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಚೋರಡಿ ಅರಣ್ಯ ವಲಯ ವ್ಯಾಪ್ತಿಯ ಹೊಸಗುಂದ ಅರಣ್ಯ ಪ್ರದೇಶದಲ್ಲಿ ಅರಣ್ಯೇತರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹೊಸಗುಂದ ಉತ್ಸವ ಆಯೋಜಕರಾದ ಸಿ.ಎಂ. ನಾರಾಯಣ ಶಾಸ್ತ್ರಿ ಮತ್ತು ಶೋಭಾ ಶಾಸ್ತ್ರಿಯವರಿಗೆ ಆನಂದಪುರಂ ವಲಯ ಅರಣ್ಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಹೊಸಗುಂದ ಗ್ರಾಮದ ನಂದಿತಳೆಯ ಎಚ್.ಎಸ್. ಮುರಳೀಧರ್ ಎನ್ನುವವರು ಸಲ್ಲಿಸಿದ ದೂರನ್ನು ಮಾನ್ಯ ಮಾಡಿದ ಆನಂದಪುರಂ ವಲಯ ಅರಣ್ಯಾಧಿಕಾರಿಗಳು ಉಮಾ ಮಹೇಶ್ವರ ಚಾರಿಟಬಲ್ ಟ್ರಸ್ಟ್‌ನ ನಾರಾಯಣ ಶಾಸ್ತ್ರಿ ಹಾಗೂ ಶೋಭಾ ಶಾಸ್ತ್ರಿಯವರಿಗೆ ನೋಟಿಸ್ ನೀಡಿದ್ದಾರೆ.

ಹೊಸಗುಂದ ಗ್ರಾಮದ ದಟ್ಟ ಅರಣ್ಯ ಪ್ರದೇಶದಲ್ಲಿ ಉಮಾಮಹೇಶ್ವರ ಚಾರಿಟೇಬಲ್ ಟ್ರಸ್ಟ್‌ ಮಾಡಿಕೊಂಡು ಯಾವುದೇ ಅರಣ್ಯ ಇಲಾಖೆಯ ಅನುಮತಿ ಇಲ್ಲದೇ ಸುಮಾರು 10 ಎಕರೆ ಪರಿಭಾವಿತ ಅರಣ್ಯ ಪ್ರದೇಶಗಳಲ್ಲಿ ಮರಗಳನ್ನು ನಾಶ ಮಾಡಿ ಅರಣ್ಯ ಪ್ರದೇಶ ಸಮತಟ್ಟು ಮಾಡಿ ಭೂ ಕಬಳಿಕೆ ಮಾಡಿಕೊಂಡಿದ್ದೀರಿ ಎಂದು ನೋಟಿಸ್’ನಲ್ಲಿ ಸ್ಪಷ್ಟಪಡಿಸಲಾಗಿದೆ.


ಅರಣ್ಯ ಪ್ರದೇಶದ ವಿಸ್ತೀರ್ಣವು ಗ್ರಾಮ ನಕ್ಷೆಯನ್ನು ಖಾನು ಎಂದು ನಿರೂಪಿತವಾಗಿರುವರಿಂದ ಸದರಿ ಖಾನು ಅರಣ್ಯದಲ್ಲಿ ಐಆವುದೇ ಖಾಸಗಿ ವ್ಯಕ್ತಿಗಳು ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇರುವುದಿಲ್ಲ ಹಾಗೂ ಇದು ಅರಣ್ಯ ಕಾಯ್ದೆ-1980ರ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ನವೆಂಬರ್ 16 ರಿಂದ 19ರವರೆಗೆ ನಾಲ್ಕು ದಿನಗಳ ಕಾಲ ಪೂರ್ವ ನಿಯೋಜಿತ ಅರಣ್ಯೇತರ ಚಟುವಟಿಕೆ ನಡೆಸಲು ಸಿದ್ಧತೆ ನಡೆದಿರುವ ಬಗ್ಗೆ ದೂರು ಬಂದಿದೆ. ಈ ಅರಣ್ಯ ಪ್ರದೇಶದಲ್ಲಿ ಪೂರ್ವನಿಯೋಜಿತ ಅರಣ್ಯೇತರ ಚಟುವಟಿಕೆ ಕೈಗೊಳ್ಳಬೇಕಾದರೆ, 1980ರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ನಿಯಮಾನುಸಾರ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ಇಂಥ ಕಾರ್ಯಕ್ರಮ ನಡೆಸಿದರೆ ಮುಂದಿನ ಆಗುಹೋಗುಗಳಿಗೆ ನೀವೇ ಜವಾಬ್ದಾರರಾಗಬೇಕಾಗುತ್ತದೆ ಎಂದು ನೋಟಿಸ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

ವಿವಾದ ಏನು?
ಚೋರಡಿ ಅರಣ್ಯ ಪ್ರದೇಶದ ಹೊಸಗುಂದ ಗ್ರಾಮದ ಸರ್ವೆನಂಬರ್ 55ರಲ್ಲಿ ಸುಮಾರು 400 ಎಕರೆ ಪ್ರದೇಶ ನಕ್ಷೆಯಲ್ಲಿ ಕಾನು ಎಂದು ನಮೂದಿಸಲಾಗಿದೆ. ಇದು ಶಾಸನಬದ್ಧ ಅರಣ್ಯವಾಗಿದ್ದು, ಇದು ನೈಸರ್ಗಿಕ ಜೀವಸಂಕುಲಕ್ಕೆ ಮೀಸಲು ಅರಣ್ಯವಾಗಿದ್ದು, ಕಸ್ತೂರಿ ರಂಗನ್ ವರದಿಯ ಪ್ರಕಾರ, ಪಶ್ಚಿಮಘಟ್ಟ ಪರಿಭಾವಿತ ಅರಣ್ಯ ಪ್ರದೇಶಕ್ಕೆ ಇದು ಸೇರಿದೆ. ಇಲ್ಲಿ 800 ವರ್ಷಗಳಷ್ಟು ಪುರಾತನ ಶಿಲಾಮಯ ಕಲ್ಲೇಶ್ವರ ದೇವಸ್ಥಾನ ಇದ್ದು, ಸುತ್ತಲೂ ನೈಸರ್ಗಿಕ ಅರಣ್ಯ ಇದೆ. ಈ ದೇವಾಲಯಕ್ಕೆ ಯಾವುದೇ ಅರಣ್ಯ ಪ್ರದೇಶವನ್ನು ಮುಪತ್ತಾಗಿ ಇಟ್ಟಿರುವುದಿಲ್ಲ ಎಂದು ದೂರುದಾರರು ವಿವರಿಸಿದ್ದರು.

ನಿರ್ಜನ ಪ್ರದೇಶದಲ್ಲಿರುವ ಈ ದೇವಸ್ಥಾನವನ್ನು ಉಮಾಮಹೇಶ್ವರ ದೇವಸ್ಥಾನವೆಂದು ಮರುನಾಮಕರಣ ಮಾಡಿ ಸಿ.ಎಂ.ನಾರಾಯಣ ಶಾಸ್ತ್ರಿ ಮತ್ತು ಶೋಭಾ ಶಾಸ್ತ್ರಿ ಕುಟುಂಬದ ಚಾರಿಟಬಲ್ ಟ್ರಸ್ಟ್‌ ಮಾಡಿಕೊಂಡಿದ್ದಾರೆ. ಸರ್ಕಾರದ ಅನುಮತಿ ಇಲ್ಲದೇ ಜೀರ್ಣೋದ್ಧಾರ ಹೆಸರಿನಲ್ಲಿ ನಿಧಿಶೋಧನೆ ಮಾಡಿದ್ದಾರೆ ಎನ್ನುವುದು ದೂರುದಾರರ ವಾದ.

ಈ ವಿವಾದಿತ ಸ್ಥಳದಲ್ಲಿ ಈ ತಿಂಗಳ 16ರಿಂದ 18ರವರೆಗೆ ಹೊಸಗುಂದ ಉತ್ಸವ ಹೆಸರಿನಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆದರೆ ಮೀಸಲು ಅರಣ್ಯದಲ್ಲಿ ಅನುಮತಿ ಪಡೆಯದೇ ಇಂಥ ಕಾರ್ಯಕ್ರಮ ಆಯೋಜಿಸಿರುವುದು ಸಹಜ ಪರಿಸರಕ್ಕೆ ಧಕ್ಕೆ ತರುತ್ತದೆ ಎನ್ನುವುದು ಪರಿಸರವಾದಿಗಳ ಅನಿಸಿಕೆ. ಇಂಥ ಅಕ್ರಮ ಉತ್ಸವ ನಡೆಯಲು ಸರ್ಕಾರ ಅವಕಾಶ ನೀಡಬಾರದು ಎಂದು ಅರ್ಜಿದಾರರು ವಾದಿಸಿದ್ದರು.

ಇನ್ನು, ಇದರೊಂದಿಗೆ ಈಗಾಗಲೇ ಆಯೋಜನೆಗೊಂಡು ಕಾರ್ಯಕ್ರಮದ ಹೊಸ್ತಿಲಲ್ಲಿರುವ ಹೊಸಗುಂದ ಉತ್ಸವವನ್ನು ರದ್ದು ಮಾಡುವುದು ಬೇಡ ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ. ಪ್ರಕರಣದ ಹಿನ್ನೆಲೆಯಲ್ಲಿ ಹೊಸಗುಂದ ಉತ್ಸವಕ್ಕೆ ಬ್ರೇಕ್ ಬೀಳಲಿದೆಯಾ ಅಥವಾ ಆಯೋಜನೆಯೆಂತೆಯೇ ನಡೆಯಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

Get In Touch With Us info@kalpa.news Whatsapp: 9481252093

Tags: Forest AreaHosgunda UtsavaHosgunda villageKannada NewsMalnad NewsNoticeShivamoggaಅರಣ್ಯ ಪ್ರದೇಶಶಿವಮೊಗ್ಗಹೊಸಗುಂದ ಉತ್ಸವಹೊಸಗುಂದ ಗ್ರಾಮ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಪ್ರೀಂ ಕೋರ್ಟ್‌ನಿಂದ ಮತ್ತೊಂದು ಐತಿಹಾಸಿಕ ತೀರ್ಪು: ಆರ್’ಟಿಐ ವ್ಯಾಪ್ತಿಗೆ ಸಿಜೆಐ ಹುದ್ಧೆ

Next Post

ಭದ್ರಾವತಿ: ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಮಹಿಳೆ ಹತ್ಯೆ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿ

kalpa News

kalpa News

Next Post

ಭದ್ರಾವತಿ: ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಮಹಿಳೆ ಹತ್ಯೆ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL