ಕಲ್ಪ ಮೀಡಿಯಾ ಹೌಸ್ | ಎನ್.ಆರ್. ಪುರ |
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್’ಆರ್’ಟಿಸಿ ಬಸ್’ವೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸೀಕೆ ಗ್ರಾಮದ ಬಳಿಯಲ್ಲಿ ಘಟನೆ ನಡೆದಿದ್ದು, ಈ ಬಸ್ ಎನ್.ಆರ್. ಪುರದಿಂದ ಮೈಸೂರಿಗೆ ಹೊರಟಿತ್ತು ಎಂದು ಹೇಳಲಾಗಿದೆ. ಎನ್.ಆರ್. ಪುರದಿಂದ ಹೊರಟ ಬಸ್ ಸೀಕೆ ಗ್ರಾಮದ ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ವಲ್ಪದಲ್ಲಿ ಅಪಾಯ ತಪ್ಪಿದೆ.
ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.
Also read: ಕಣ್ಣ ಮುಂದೆಯೇ ಜಲಪಾತಕ್ಕೆ ಬಿದ್ದ ಕಾರು: ಜನರ ಸಮಯಪ್ರಜ್ಞೆಯಿಂದ ಉಳಿಯಿತು ಇಬ್ಬರ ಪ್ರಾಣ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post