No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

ಸಿಬಿಆರ್ ಕಾಲೇಜು: ಗೌನ್ ಬದಲು ಶಲ್ಯ ಸಂಸ್ಕೃತಿಯ ನ್ಯಾಯಧೀಕ್ಷೆ ಪಡೆದ ಕಾನೂನು ವಿದ್ಯಾರ್ಥಿಗಳು

kalpa News by kalpa News
June 20, 2026
in ಶಿವಮೊಗ್ಗ
1
ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಕರೆ ನೀಡಿದರು.

ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶನಿವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಪದವಿ ಪ್ರಮಾಣಪತ್ರ ಪ್ರದಾನ ಕಾರ್ಯಕ್ರಮ ‘ನ್ಯಾಯದೀಕ್ಷಾ’ ಉದ್ಘಾಟಿಸಿ ಮಾತನಾಡಿದರು.
PES Public School Shivamoggaಇಂದು ಭೌತಿಕ ಗೋಡೆಗಳಿಗಿಂತ, ಕಣ್ಣಿಗೆ ಕಾಣದ ಮಾನಸಿಕ ಮತ್ತು ಸಾಮಾಜಿಕ ಗೋಡೆಗಳು ಮನುಷ್ಯರನ್ನು ಹೆಚ್ಚು ದೂರ ಮಾಡುತ್ತಿವೆ. ಧರ್ಮ ಎಂಬ ಪದವನ್ನು ಯಾವುದೇ ಸೀಮಿತ ಅರ್ಥದಲ್ಲಿ ನೋಡಬಾರದು. ಧರ್ಮ ಎಂದರೆ ವಿಭಜನೆ ಅಲ್ಲ, ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣದ ಮೌಲ್ಯವಾಗಿ ಅರ್ಥೈಸಬೇಕು ಎಂದು ಹೇಳಿದರು.

Also read: ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ವಕೀಲರಾಗಿ ಹೊರಹೊಮ್ಮುತ್ತಿರುವ ಯುವ ಸಮೂಹ ನಿಮ್ಮ ತಂದೆ ತಾಯಿಗಳ ಕನಸುಗಳನ್ನು ಸಾಕಾರ ಮಾಡುತ್ತಿದ್ದಿರ ಎನ್ನುವ ಜವಾಬ್ದಾರಿ ಇರಲಿ. ಬಡತನದಿಂದ ಉದರ ಪೋಷಣೆಯೊಂದೆ ಅನಿವಾರ್ಯವಿದ್ದ ಕಾಲದಲ್ಲಿ, ತಮಗೆ ಸಿಗದ ಅವಕಾಶವನ್ನು, ತಮ್ಮ ಮಕ್ಕಳ ಮೂಲಕ ಯಶಸ್ವಿಗೊಳಿಸುವ ಪೋಷಕರ ಆಶಯಕ್ಕೆ ಸದಾ ಬೆಂಬಲವಾಗಿರಿ. ಅವರನ್ನು ಗೌರವಿಸುವಂತಹ ಮೊದಲ ದೀಕ್ಷೆ ಪಡೆಯಿರಿ ಎಂದರು.

ಕಾನೂನಿನ ಪದವಿಯ ಜೊತೆಗೆ, ಸಮಾಜಮುಖಿಯಾಗಿ ಕಲಿತ ಜ್ಞಾನವನ್ನು ತಲುಪಿಸುವುದು ಕೂಡ ಒಂದು ದೊಡ್ಡ ಹೊಣೆಗಾರಿಕೆ. ಏನಾದರಾಗು, ಮೊದಲು ಮಾನವನಾಗು ಎಂಬುದು ಕಾನೂನು ದೀಕ್ಷೆಯ ಮೊದಲ ಪಾಠವಾಗಬೇಕು ಎಂದರು.
ಮಣ್ಣಿನಲ್ಲಿರುವ ಚಿನ್ನದ ನಿಕ್ಷೇಪ ಆಭರಣದ ರೂಪ ಪಡೆಯಲು ಸಾಕಷ್ಟು ಸಂಸ್ಕರಣಾ ಪಕ್ರಿಯೆಬೇಕು. ವಿದ್ಯಾರ್ಥಿಗಳು ಕೂಡ ಮಣ್ಣಿನಲ್ಲಿರುವ ಚಿನ್ನವಿದ್ದಂತೆ. ಅವರನ್ನು ಸಂಸ್ಕರಿಸಿ, ಪುಟವಿಟ್ಟ ಚಿನ್ನದಂತೆ ಪದವಿಧರರಾಗಿ ರೂಪಿಸಿದ ಶ್ರೇಯಸ್ಸು ವಿದ್ಯಾಸಂಸ್ಥೆಯದಾಗಿದೆ. ಇದೀಗ ಯಾವ ಆಭರಣಕಾರನ ಕೈಯಲ್ಲಿ ಸಿಕ್ಕಿ, ಜೀವನಾನುಭವದ ಹೆಚ್ಚು ಪೆಟ್ಟು ತಿನ್ನುತ್ತಿರ, ಆಗ ಹೆಚ್ಚು ಹೊಳೆಯಲು ಪ್ರಾರಂಭಿಸುತ್ತಿರಿ ಎಂಬ ವಾಸ್ತವತೆಯ ಪ್ರಜ್ಞೆ ಬೆಳೆಸಿಕೊಳ್ಳಿ. ಅದುವೆ ದೀಕ್ಷೆಯ ಮತ್ತೊಂದು ಹಂತ ಎಂದು ಹೇಳಿದರು.

ವಿವಿಧ ಪವಿತ್ರ ಗ್ರಂಥಗಳು ನಮ್ಮ ಮನೆಯ ದೇವರ ಮನೆಯಲ್ಲಿರಲಿ, ಅದರೇ ಮನೆಯ ಹೊಸಲು ದಾಟಿದ ಕೂಡಲೆ ಎಲ್ಲರನ್ನೂ ಒಟ್ಟುಗೂಡಿಸುವ ಪವಿತ್ರ ಗ್ರಂಥವಾಗುವುದು ಭಾರತದ ಸಂವಿಧಾನ ಮಾತ್ರ. ಸಮಾಜದ ಪ್ರತಿಯೊಬ್ಬ ಪ್ರಜೆಯು ಭಾರತದ ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಅದು ನಮ್ಮೆಲ್ಲರನ್ನು ಭದ್ರಪಡಿಸಿದೆ‌. ಎಲ್ಲರೂ ಸಂವಿಧಾನವನ್ನು ಎತ್ತಿ ಹಿಡಿಯುವ, ಅದರ ಅಡಿಯಲ್ಲಿ ರೂಪಿತವಾದ ಕಾನೂನಿನ ಮೂಲಕ ಜವಾಬ್ದಾರಿಯುತವಾಗಿ ಸಾಗುವ ಪ್ರಜ್ಞೆ ಬೇಕು ಎಂದರು.

ರಾಜ ವಿಕ್ರಮಾದಿತ್ಯನ ಆಳ್ವಿಕೆಯಲ್ಲಿ ಪ್ರಜೆಗಳಿಗೆ ತ್ವರಿತ ಮತ್ತು ನಿಷ್ಪಕ್ಷಪಾತ ನ್ಯಾಯವನ್ನು ಒದಗಿಸಲು ನ್ಯಾಯದ ಗಂಟೆಯ ವ್ಯವಸ್ಥೆ ಇತ್ತು. ಕಾಲ ಬದಲಾದಂತೆ ಹಣಕಾಸು, ಆಧುನಿಕತೆ ಹಾಗೂ ವಿವಿಧ ಸಾಮಾಜಿಕ ಬದಲಾವಣೆಗಳ ಪರಿಣಾಮವಾಗಿ, ಮೌಲ್ಯಾಧಾರಿತ ನ್ಯಾಯ ವ್ಯವಸ್ಥೆಯ ಬಗ್ಗೆ ಜನರ ದೃಷ್ಟಿಕೋನ ಬದಲಾಗುತ್ತಿರುವುದು ಕಳವಳಕಾರಿಯಾಗಿದೆ ಎಂದರು.

ಸಮಾಜದಲ್ಲಿ ಈಗಾಗಲೇ ಅನೇಕರು ತಿಪ್ಪೆ ಹಾಕಿದ್ದಾರೆ. ಸಾಧ್ಯವಾದರೆ ತಿಪ್ಪೆಯನ್ನು ಶುದ್ದಿಕರಿಸಲು ಪ್ರಯತ್ನಿಸಿ, ಮತ್ತಷ್ಟು ನಿಮ್ಮ ಮನೆಯ ಕಸವನ್ನು ಹಾಕಬೇಡಿ. ಹಾಗಾಗಿಯೇ ಎಲ್.ಎಲ್.ಬಿ ಎಂಬ ಪದವಿ ಹಿಡಿದು, ಸಮಾಜದ ಶಿಕ್ಷಕರಾಗುವ ಮೂಲಕ, ಬಡವರಿಗೆ, ದೀನ ದಲಿತರಿಗೆ ಮೇಲೆತ್ತುವ ಸೇನಾನಿಗಳು ನೀವಾಗಿ. ಕಲಿತ ಪ್ರತಿ ಅಕ್ಷರವನ್ನು ದೀಕ್ಷಾ ಪೂರ್ವಕವಾಗಿ ಮುನ್ನಡೆಸುವ ದೂರದೃಷ್ಟಿ ಪಡೆಯಿರಿ ಎಂದು ಕಿವಿಮಾತು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ಪಂಚೆ ಉಡುವ ನ್ಯಾಕ್ ಕಲಿಯಿರಿ

ಪುರುಷರು ಪಂಚೆ ಉಡುವ ನ್ಯಾಕ್ ಕಲಿತುಕೊಳ್ಳಿ. ನಾನು ಎಷ್ಟು ಹೊತ್ತಾದರು ಪಂಚೆಯಲ್ಲಿ ಇರಬಲ್ಲೆ, ಫುಟ್ ಬಾಲ್ ಕೂಡ ಆಡಬಲ್ಲೆ ಎಂದು ನ್ಯಾಯಮೂರ್ತಿಗಳು ನಗೆ ಚಟಾಕಿ ಹಾರಿಸಿದರು.

ಗೌನ್ ಬದಲು ಶಲ್ಯ: ಸಂಸ್ಕೃತಿಯ ನ್ಯಾಯಧೀಕ್ಷೆ

ಸಾಮಾನ್ಯವಾಗಿ ಪದವಿ ಪ್ರಮಾಣಪತ್ರ ಪ್ರದಾನ ಸಮಾರಂಭದಲ್ಲಿದ್ದ ಗೌನ್ ಸಂಸ್ಕೃತಿಗೆ ತೆರೆ ಎಳೆದ ವಿದ್ಯಾರ್ಥಿಗಳು, ಶಲ್ಯದೊಂದಿಗೆ ನ್ಯಾಯದೀಕ್ಷೆ ಪಡೆದು ಸಂಭ್ರಮಿಸಿದರು. ಅತಿಥಿಗಳಾಗಿ ಭಾಗವಹಿಸಿದ್ದ ನ್ಯಾಯಮೂರ್ತಿಗಳು ಸೇರಿದಂತೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಶರ್ಟು, ಪಂಚೆ, ಮೈಸೂರು ಪೇಟ ಹಾಗೂ ವಿಶೇಷ ಶಲ್ಯದಲ್ಲಿ ಮಿಂಚಿದರು. ಜೊತೆಯಲ್ಲಿ ಶಾಸ್ತ್ರೀಯ ಸಂಗೀತದ ಹಿನ್ನೆಲೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತ್ತು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯ ಅನೇಕರು ನ್ಯಾಯಾಧೀಶರಾಗಿ ಕಾನೂನು ಕ್ಷೇತ್ರದ ಅನೇಕ ಉನ್ನತ ಹುದ್ದೆಗಳಲ್ಲಿ ಅಲಂಕರಿಸಿದ್ದಾರೆ. ವಕೀಲರಾಗುವ ನೀವು ವೃತ್ತಿ ಜೀವನದಲ್ಲಿ ಕುಟುಂಬ ವ್ಯವಸ್ಥೆಗೆ ಹೆಚ್ಚು ಆದ್ಯತೆ ನೀಡಿ. ವಿದ್ಯೆ ಮನುಷ್ಯನಿಗೆ ಆಕಾರ ನೀಡಬೇಕು ವಿನಃ ಅಹಂಕಾರ ನೀಡಬಾರದು. ಸುಶಿಕ್ಷಿತರಾಗುವ ಜೊತೆಗೆ ಸುಸಂಸ್ಕೃತರಾಗಿ ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿದರು. ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲಾ ಅಧ್ಯಕ್ಷತೆ ವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: Bheemasen Rao Law CollegeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaNyayadeekshaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

Next Post

Big Good News for Mysuru–Madar Junction Train Passengers

kalpa News

kalpa News

Next Post
Mysore - Shivamogga - Talguppa Train

Big Good News for Mysuru–Madar Junction Train Passengers

Comments 1

  1. Pingback: Big Good News for Mysuru–Madar Junction Train Passengers » kalpa.news

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL