ಶಿವಮೊಗ್ಗ: ಪಾಕಿಸ್ಥಾನ ಪ್ರೇರಿತ ಉಗ್ರರ ದಾಳಿಯ ಪರಿಣಾಮ ವೀರಸ್ವರ್ಗ ಸೇರಿದ ಸಿಆರ್’ಪಿಎಫ್’ನ 42 ಯೋಧರಿಗೆ ಶಿವಮೊಗ್ಗದ ವಿವಿಧೆಡೆ ದುಃಖತಪ್ತ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಜಿಲ್ಲಾ ಬಿಜೆಪಿ ವತಿಯಿಂದ ಶಿವಪ್ಪನಾಯಕ ವೃತ್ತದ ಪ್ರತಿಮೆ ಬಳಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ, ಜಿಲ್ಲಾ ಪಂಚಾಯತ್ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್, ಪ್ರಮುಖರಾದ ಎಸ್. ದತ್ತಾತ್ರಿ, ಇ. ವಿಶ್ವಾಸ್ ಸೇರಿದಂತೆ ಹಲವರು ಯೋಧರ ತ್ಯಾಗವನ್ನು ನೆನೆದರು.
ವೃತ್ತದಲ್ಲಿ ಬೃಹತ್ ಮಾನವ ಸರಪಳಿ ಸೃಷ್ಠಿಸಿ ಮೌನಾಚರಣೆ ಮಾಡಿ, ಆನಂತರ ಪಾಕಿಸ್ಥಾನ ಹಾಗೂ ಉಗ್ರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೋಟೆ ಯುವಕ ಸಂಘ:
ಇನ್ನು, ಹುತಾತ್ಮರಾದ ದೇಶಭಕ್ತ ವೀರ ಸೈನಿಕರಿಗೆ ಕೋಟೆ ಯುವಕ ಸಂಘದಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ನೂರಾರು ದೇಶಭಕ್ತರು ಪಾಲ್ಗೊಂಡಿದ್ದರು.
ಇದಲ್ಲದೇ ನಗರದ ವಿವಿಧೆಡೆ ಹುತಾತ್ಮ ಯೋಧರಿಗೆ ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಹಲವು ಸಂಘ ಸಂಸ್ಥೆಗಳ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
(ವರದಿ: ಡಾ.ಸುಧೀಂದ್ರ)
Discussion about this post