No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಗ್ರಾಹಕನಿಗೆ 500 ರೂ. ಹಿಂತಿರುಗಿಸದ ಈ ಬ್ಯಾಂಕ್’ಗೆ ಬರೋಬ್ಬರಿ 1 ಲಕ್ಷ ರೂ. ದಂಡ

2 ವರ್ಷದ ನಂತರ ಗ್ರಾಹಕರ ಆಯೋಗದಲ್ಲಿ ಗೆದ್ದ ಸಪ್ತಾಪುರದ ವ್ಯಕ್ತಿ | ವಿವರ ಇಲ್ಲಿದೆ ಓದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 14, 2022
in ಹುಬ್ಬಳ್ಳಿ-ಧಾರವಾಡ
0
ಕ್ಲೇಂ ನಿರಾಕರಿಸಿದ್ದಕ್ಕೆ ದಂಡ ಸೇರಿ 1,31,216 ರೂ. ಪಾವತಿಸಲು ಎಲ್’ಐಸಿಗೆ ಗ್ರಾಹಕ ಆಯೋಗ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಧಾರವಾಡ  |

ಎಟಿಎಂನಲ್ಲಿ ವಿಥ್’ಡ್ರಾ ಮಾಡುವಾಗ ಗ್ರಾಹಕರೊಬ್ಬರಿಗೆ 500 ರೂ. ಹಣವನ್ನು ಹಿಂತಿರುಗಿಸದ ಇಲ್ಲಿನ ಇಂಡಿಯನ್ ಓವರ್’ಸೀಸ್ ಬ್ಯಾಂಕ್’ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಿರುವ ಘಟನೆ ನಡೆದಿದೆ.

ಏನಿದು ಪ್ರಕರಣ?
ಧಾರವಾಡ ಸಪ್ತಾಪುರದ ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖೆಯ ಗ್ರಾಹಕರಾದ ವಕೀಲ ಸಿದ್ದೇಶ ಹೆಬ್ಬಳ್ಳಿ ಅವರು 2020ರ ನ. 28ರಂದು ತಮ್ಮ ಎಟಿಎಂ ಕಾರ್ಡ್’ನಿಂದ ರೂ.500 ಹಣ ತೆಗೆಯಲು ಪ್ರಯತ್ನಿಸಿದಾಗ ತನ್ನ ಉಳಿತಾಯ ಖಾತೆಗೆ ಡೆಬಿಟ್ ಆದರೂ ತನಗೆ ಆ ಹಣ ಬರದ ಕಾರಣ, ಮತ್ತೊಮ್ಮೆ ಪಕ್ಕದ ಎಟಿಎಂ ಮಶೀನಿನಿಂದ ಕಾರ್ಡ್ ಹಾಕಿ ರೂ.500 ಪಡೆದಿದ್ದರು.
ಇಂಡಿಯನ್ ಓವರಸೀಸ್ ಬ್ಯಾಂಕಿನ ಎಟಿಎಂ ಕಾರ್ಡ್’ನಿಂದ ಮೊದಲನೆಯ ಸಲ ತೆಗೆದ ರೂ.500 ತನಗೆ ಬಂದಿಲ್ಲವಾದರೂ ತನ್ನ ಖಾತೆಯಿಂದ ರೂ.500 ಡೆಬಿಟ್ ಆಗಿರುವ ಕುರಿತು 2020ರ ಡಿ.2ರಂದು ತನ್ನ ಖಾತೆಯಿರುವ ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಿಗೆ ದೂರು ಕೊಟ್ಟಿದ್ದರು. ಆದರೆ ಸಿದ್ದೇಶ ಹೆಬ್ಬಳ್ಳಿ ಅವರು ನೀಡಿದ ದೂರು ಕುರಿತು ಶಾಖಾ ವ್ಯವಸ್ಥಾಪಕರು ಯಾವುದೇ ಕ್ರಮ ಕೈಗೊಳ್ಳದೇ ಇದ್ದರಿಂದ, ಅವರು ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ಬ್ಯಾಂಕಿನವರ ಮೇಲೆ ಕ್ರಮ ಕೈಗೊಳ್ಳುವಂತೆ ಧಾರವಾಡದ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

ಆಯೋಗದ ಅಧ್ಯಕ್ಷ ಈಶಪ್ಪ ಕ. ಭೂತೆ ಹಾಗೂ ಸದಸ್ಯರಾದ ವಿ.ಎ. ಬೋಳಶೆಟ್ಟಿ ಮತ್ತು ಪಿ.ಸಿ. ಹಿರೇಮಠ ಅವರು ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿ, ಎಟಿಎಂ ಹಣ ನಿರಾಕರಣೆಯ ಪ್ರಸಂಗಗಳಲ್ಲಿ ಗ್ರಾಹಕರ ಖಾತೆ ಹೊಂದಿದ ಬ್ಯಾಂಕಿನವರು ಹಣ ನಿರಾಕರಣೆಯ ದಿನಾಂಕದಿಂದ 6 ದಿನದ ಒಳಗಾಗಿ ನಿರಾಕರಿಸಿದ ಹಣವನ್ನು ಅವರ ಖಾತೆಗೆ ಜಮಾ ಮಾಡಬೇಕು. ತಪ್ಪಿದಲ್ಲಿ 6 ದಿವಸದ ನಂತರ ದಿನ ಒಂದಕ್ಕೆ ರೂ.100 ರಂತೆ ವಿಳಂಬದ ಅವಧಿಗೆ ಗ್ರಾಹಕರಿಗೆ ಪರಿಹಾರ ಕೊಡಬೇಕು ಎಂದು ರಿಜರ್ವ್ ಬ್ಯಾಂಕಿನ ನಿರ್ದೇಶನವಿದ್ದರೂ ಅದನ್ನು ಪಾಲಿಸದೆ ಧಾರವಾಡದ ಸಪ್ತಾಪುರದ ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖಾ ವ್ಯವಸ್ತಾಪಕರು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾದ್ದಾರೆಂದು ತೀರ್ಪು ನೀಡಿದ್ದಾರೆ.

ಈ ಅವಧಿಯಲ್ಲಿ ಕೆಲಸ ಮಾಡುತ್ತಿದ್ದ ಶಾಖಾ ವ್ಯವಸ್ತಾಪಕರು ಹಾಗೂ ಆಡಳಿತದ ಉಸ್ತುವಾರಿದಾರರು ಸಾರ್ವಜನಿಕರ ಟ್ರಸ್ಟಿಗಳಾಗಬೇಕಾಗಿದ್ದರವರು ಕರ್ತವ್ಯಲೋಪ ಮಾಡಿ ಸೇವಾ ನ್ಯೂನ್ಯತೆ ಎಸಗಿ ಸಾರ್ವಜನಿಕರ ಸ್ವತ್ತಾದ ಬ್ಯಾಂಕಿನ ಹಣದಿಂದ ಲಕ್ಷಗಟ್ಟಲೆ ಹಣವನ್ನು ದೂರುದಾರರಿಗೆ ಪರಿಹಾರ ಹಾಗೂ ದಂಡದ ರೂಪದಲ್ಲಿ ಕೊಡಬೇಕಾದುದು ವಿಪರ್ಯಾಸವೆಂದು ಆಯೋಗ ತನ್ನ ತೀರ್ಪಿನಲ್ಲಿ ಹೇಳಿ ತಪ್ಪು ಮಾಡಿದ ಬ್ಯಾಂಕ್ ಸಿಬ್ಬಂದಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆ ಬ್ಯಾಂಕಿನ ಮೇಲಾಧಿಕಾರಿಗಳಿಗೆ ನಿರ್ದೇಶಿಸಿದೆ.
ದೂರುದಾರರಿಗೆ ನಿರಾಕರಣೆಯ ರೂ.500 ಗಳು ಮತ್ತು ಅದಕ್ಕೆ 2020ರ ನ.28 ರಿಂದ ಶೇ.8 ರಂತೆ ಬಡ್ಡಿಯ ಜೊತೆ, ರಿಜರ್ವ್ ಬ್ಯಾಂಕಿನ ಸುತ್ತೋಲೆಯಂತೆ ದಿನಕ್ಕೆ ರೂ.100 ರಂತೆ 677 ದಿವಸಗಳ ವಿಳಂಬಕ್ಕೆ ರೂ.67,700 ಪರಿಹಾರ ಹಾಗೂ ಸೇವಾ ನ್ಯೂನ್ಯತೆ ಎಸಗಿದ್ದಕ್ಕಾಗಿ ದೂರುದಾರರಿಗೆ ಆಗಿರುವ ತೊಂದರೆ ಹಾಗೂ ಮಾನಸಿಕ ಹಿಂಸೆಗೆ 25 ಸಾವಿರ ಪರಿಹಾರ ಹಾಗೂ 10 ಸಾವಿರ ಪ್ರಕರಣದ ಖರ್ಚು ವೆಚ್ಚ ಸೇರಿ ರೂ. 1,02,700 ನೀಡಬೇಕೆಂದು ಮತ್ತು ಈ ತೀರ್ಪು ನೀಡಿದ 30 ದಿನದೊಳಗಾಗಿ ಸಂಬಂಧಿಸಿದ ಗ್ರಾಹಕರಿಗೆ ನೀಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ತೀರ್ಪು ಪ್ರಕಟಿಸಿರುವ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಅವರು ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್’ಗಳು ತಮ್ಮ ಗ್ರಾಹಕರಿಗೆ ರಿಜರ್ವ್ ಬ್ಯಾಂಕಿನ ನಿಯಮಗಳನ್ನು ಮತ್ತು ತಮ್ಮ ಬ್ಯಾಂಕಿನ ನಿಯಮಗಳನ್ನು ಸಹವಿವರವಾಗಿ ತಿಳಿಸಬೇಕು. ರಿಜರ್ವ್ ಬ್ಯಾಂಕ್ ಗ್ರಾಹಕರಿಗೆ ನೀಡಿರುವ ಸವಲತ್ತು ಮತ್ತು ಅನುಕೂಲತೆಗಳನ್ನು ಗ್ರಾಹಕರಿಗೆ ಪ್ರಚುರಪಡಿಸಲು ಸ್ಥಳೀಯ ಭಾಷೆಯಲ್ಲಿ ತಮ್ಮ ಬ್ಯಾಂಕ್ ವ್ಯಾಪ್ತಿಯಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಬೇಕು. ಆರ್ಥಿಕ ವ್ಯವಹಾರದ ಕುರಿತು ಎಲ್ಲ ಬ್ಯಾಂಕ್’ಗಳು ತಮ್ಮ ಗ್ರಾಹಕರಿಗೆ ಆರ್ಥಿಕ ಸಾಕ್ಷರತೆ ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ATM CardBankConsumer CourtDharwadDistrict Consumer CommissionIndian Overseas BankKannada News WebsiteLatest News Kannadaಇಂಡಿಯನ್ ಓವರ್'ಸೀಸ್ ಬ್ಯಾಂಕ್ಎಟಿಎಂ ಕಾರ್ಡ್ಗ್ರಾಹಕ ನ್ಯಾಯಾಲಯಜಿಲ್ಲಾ ಗ್ರಾಹಕರ ಆಯೋಗಧಾರವಾಡಬ್ಯಾಂಕ್
Share206Tweet123Send
Previous Post

ಇ ತ್ಯಾಜ್ಯ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಆಗಬೇಕಾದ ಅಗತ್ಯವಿದೆ: ಡಿಸಿ ಸೆಲ್ವಮಣಿ ಅಭಿಮತ

Next Post

ಅಕ್ಟೋಬರ್ 17 ರಂದು ಮಡಿಕೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಲಕಾವೇರಿಯಲ್ಲಿ ತೀರ್ಥೋದ್ಭವ: ಸಂಭ್ರಮದಲ್ಲಿ ಕೊಡಗಿನ ಮಂದಿ

ಅಕ್ಟೋಬರ್ 17 ರಂದು ಮಡಿಕೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL