ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಎಂಆರ್’ಎಸ್ ಸರ್ಕಲ್ ಬಳಿಯಲ್ಲಿ ಬೈಕ್’ವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿದೆ.
ಅತಿ ವೇಗದಿಂದ ಬಂದ ಲಾರಿ ಬೈಕ್’ಗೆ ಡಿಕ್ಕಿ ಹೊಡೆದು, ಸವಾರನ ಮೇಲೆಯೇ ಹರಿದಿದೆ. ಪರಿಣಾಮವಾಗಿ ಆತ ಸ್ಥಳದಲ್ಲೇ ಅಸುನೀಗಿದ್ದಾನೆ. ಇದರಿಂದ ಭಯಗೊಂಡ ಚಾಲಕ, ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗುತ್ತಿದ್ದ ವೇಳೆ ಸ್ಥಳೀಯರು ಆತನನ್ನು ಹಿಡಿದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ವಿಷಯ ತಿಳಿದು ತತಕ್ಷಣ ಆಗಮಿಸಿದ ಪೊಲೀಸರು ಸ್ಥಳೀಯರಿಂದ ಚಾಲಕನ್ನು ಬಿಡಿಸಿ, ವಶಕ್ಕೆ ಪಡೆದಿದ್ದಾರೆ.
ಮೃತ ದುರ್ಧೈವಿಯನ್ನು ಎಲ್’ಬಿಎಸ್ ನಗರ ಪ್ರಸಾದ್ ಎಂದು ಗುರುತಿಸಲಾಗಿದ್ದು, ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Get in Touch With Us info@kalpa.news Whatsapp: 9481252093
Discussion about this post