Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನಮ್ಮ ಮಕ್ಕಳು ನಮಗೇ ಬೆಸ್ಟ್ ಎನ್ನಿಸುವ ಮಟ್ಟಕ್ಕೆ ಸಾಧನೆಯಾಗಬೇಕು

ಮಗಳ ಮೈಲಿಗಲ್ಲುಗಳಿಗೆ ಅಮ್ಮನ ಸಂಭ್ರಮ | ರಂಗಪ್ರವೇಶಕ್ಕೆ ಅಣಿಯಾದ ರಾಧಾ | 25ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ಕಾರ್ಯಕ್ರಮ

October 24, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಯಾರು ಏನೇ ಹೇಳಿದರೂ, ನಮಗೆ ಎಷ್ಟೇ ಮಮಕಾರ ಇದ್ದರೂ ಅವೆಲ್ಲವೂ ಒಂದು ಕಡೆ. ಆದರೆ ನಮಗೆ, ನಮ್ಮ ಅಂತರಂಗಕ್ಕೆ ನಮ್ಮ ‘ಮಕ್ಕಳು ಬೆಸ್ಟ್’ ಎನಿಸಬೇಕು. ಆ ಮಟ್ಟಿಗೆ ಬೆಳೆಯಬೇಕು ಎಂದರೆ ಅವೆಲ್ಲವೂ ಒಂದು ದಿನಕ್ಕೆ ಆಗುವುದಲ್ಲ. ದಶಕಗಳ ಮೈಲಿಗಲ್ಲು ಬೇಕು. ಸಾಧನೆ ಮಾಡುವ ಕೆಚ್ಚು ಬೇಕು. ಮನೆ- ಮನದ ವಾತಾವರಣವೂ ಬೆಂಬಲಿಸಬೇಕು. ಎಲ್ಲದಕ್ಕೂ ಮೀರಿ ಗುರುವಿನ ಅನಂತ ಕೃಪೆ ಬೇಕು- ಹೀಗೆ ಸಂಭ್ರಮದಿಂದ ಮಾತನಾಡುವಾಗ ಕವಿತಾ ಅವರ ಭಾವದಲ್ಲಿ ಒಂದು ಅನನ್ಯವಾದ ‘ಗುರುಭಕ್ತಿ’ ಇತ್ತು. ಕಲಾ ರಂಗದ ಬಗ್ಗೆ ಉತ್ಕಟವಾದ ಗೌರವವಿತ್ತು. ಅವೆಲ್ಲವೂ ಮಗಳಿಗೆ ಇನ್ನಷ್ಟು- ಮತ್ತಷ್ಟು ಒಲಿದು ಬರಲಿ ಎಂಬ ಪ್ರಾರ್ಥನೆ ಇತ್ತು.

ಹೌದು… ಸಂಗೀತ, ಸಂಸ್ಕೃತಿ, ಸಂಸ್ಕಾರ ಮತ್ತು ಗುರು- ಹಿರಿಯರ ಮೇಲಿನ ಗೌರವಗಳು ಒಂದು ಮನೆಯಲ್ಲಿ ದೊರಕುವುದು ಒಂದು ಸುಕೃತವೇ ಸರಿ. ಅವೆಲ್ಲವನ್ನೂ ಧಾರೆ ಧಾರೆಯಾಗಿ ಪಡೆದಿರುವ, ಪಡೆಯುತ್ತಿರುವ ಯುವ ಕಲಾವಿದೆ ರಾಧಾ ಶ್ರೀವತ್ಸ ಇದೀಗ ಭರತನಾಟ್ಯ ರಂಗ ಪ್ರವೇಶಕ್ಕೆ (ಅಕ್ಟೋಬರ್ 25) ಅಣಿಯಾಗಿದ್ದಾಳೆ.

ಈ ಸಂದರ್ಭ ಅಂತರಾಳದ ಭಾವನೆ ಹಂಚಿಕೊಂಡ ಕವಿತಾ (ರಾಧಾ ಅವರ ತಾಯಿ) ಮಗಳ ಬಗೆಗಿನ ಕನಸು, ಕಲ್ಪನೆಗಳನ್ನು ಹರವಿ ಇಡುವಾಗ ಅದೇನೋ ಭಾವುಕತೆ ಅವರಲ್ಲಿ ಮೈದುಂಬಿತ್ತು. ಯಾವುದೂ ನಮ್ಮದಲ್ಲ. ಕೇವಲ ಉತ್ತೇಜನ ಮಾತ್ರ. ಉಳಿದ ಎಲ್ಲವೂ ಆಕೆಗೆ ಗುರುವಿನ ಕೃಪೆಯಿಂದಲೇ ಬಂದ ನಾಟ್ಯ ವಿದ್ಯೆ ಎಂದು ವಿದುಷಿ ಸುಪರ್ಣಾ ವೆಂಕಟೇಶ ಅವರನ್ನು ಗೌರವಪೂರ್ವಕ ನುಡಿಗಳಿಂದಲೇ ನೆನಪಿಸಿಕೊಂಡರು.
ಕುಟುಂಬದಲ್ಲಿ ಎಲ್ಲರಿಗೂ ಸಂಗೀತ ಇಷ್ಟ. ಸ್ವತಃ ನಮ್ಮ ಯಜಮಾನರೇ ( ಶ್ರೀವತ್ಸ) ವಿದ್ಯಾರ್ಥಿ ದಿಸೆಯಲ್ಲಿ ಸೀನಿಯರ್ ಹಂತದವರೆಗೆ ಭರತನಾಟ್ಯ ಕಲಿತವರು. ಹಾಗಾಗಿ ಮಗಳು ರಾಧಾ ಕೂಡಾ ನರ್ತನ ಕಲಿಯಬೇಕು ಎಂಬ ಅಪೇಕ್ಷೆ ಇತ್ತು. ಹಾಗಾಗಿ ಎಳವೆಯಲ್ಲೇ ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆಗೆ ಸೇರಿಸಿದೆ. ಯೋಗಾಯೋಗ ಎಂಬಂತೆ ಸುಪರ್ಣಾ ಮತ್ತು ವೆಂಕಟೇಶ್ ದಂಪತಿ ದೊರೆತರು. ಇಂದು ಮಗಳು ಜೂನಿಯರ್, ಸೀನಿಯರ್ ಹಂತ ಮುಗಿಸಿ, ದ್ವಿತೀಯ ಪಿಯುಸಿ (ವಿಜ್ಞಾನ ) ಓದುತ್ತಿದ್ದರೂ ರಂಗ ಪ್ರವೇಶ ಮಾಡುತ್ತ ಇದ್ದಾಳೆ ಎಂದರೆ ಅದರ ಹಿಂದೆ ನಮ್ಮೆಲ್ಲ ಹಿರಿಯರ ಅನುಗ್ರಹ ಢಾಳಾಗಿದೆ ಎನ್ನುತ್ತಾರೆ ಕವಿತಾ.

ಕಲಾವಿದೆ ಪರಿಚಯ
ದ್ವಿತೀಯ ಪಿಯು ಅಧ್ಯಯನ ಮಾಡುತ್ತಿರುವ ರಾಧಾ, ಈಗಾಗಲೇ ಸಾಯಿ ಆರ್ಟ್ಸ್ ಸಂಸ್ಥೆಯ ಹತ್ತು, ಹಲವು ಕಾರ್ಯಕ್ರಮದಲ್ಲಿ ತನ್ನ ಹೆಜ್ಜೆ ಗುರುತು ಮೂಡಿಸಿದ ಯುವ ಕಲಾವಿದೆ. ನರ್ತನದಲ್ಲಿ ನವ ನವೀನ ತಂತ್ರಗಳನ್ನು ಕಲಿಯುವಲ್ಲಿ ಅದಮ್ಯ ಆಸಕ್ತಿ. ಹಾಗಾಗಿ ಮುದ್ರಾ, ತಾಳ, ಲಯ ಮತ್ತು ಅಭಿನಯಕ್ಕೆ ಈಕೆಯ ಪ್ರಧಾನ ಆದ್ಯತೆ ಇದೆ. ವಿದುಷಿ ಹರ್ಷಿತಾ ವಿದ್ಯಾ ಅವರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿರುವುದು ಈಕೆಯ ಇನ್ನೊಂದು ಹೆಗ್ಗಳಿಕೆ.

ವೇದಿಕೆ ಕಲಾವಿದೆಯಾಗಬೇಕು
ನೃತ್ಯದಲ್ಲಿ ವಿದ್ವತ್ ಮಾಡುವುದರೊಂದಿಗೆ ಬಿಇ. ವ್ಯಾಸಂಗ ಮಾಡಬೇಕು. ಜೀವನಕ್ಕೆ ಭದ್ರವಾದ ಒಂದು ವೃತ್ತಿ ಬೇಕು. ಡಾನ್ಸ್ ಹವ್ಯಾಸವಾಗಿ ಇಟ್ಟುಕೊಳ್ಳುತ್ತೇನೆ. ನಾನು ಉತ್ತಮವಾದ ‘ ವೇದಿಕೆ ಕಲಾವಿದೆ’ ಆಗಬೇಕು ಎಂಬ ಕನಸು ಇದೆ ಎನ್ನುವುದು ರಾಧಾಳ ಅಭಿಪ್ರಾಯ. ಇದಕ್ಕೆ ಇಡೀ ಕುಟುಂಬದ ಬೆಂಬಲವಿದೆ.
25ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ಕಾರ್ಯಕ್ರಮ
ನಾಡಿನ ಪ್ರಖ್ಯಾತ ಭರತನಾಟ್ಯ ವಿದುಷಿ ಡಾ. ಸುಪರ್ಣಾ ವೆಂಕಟೇಶ ಅವರ ಶಿಷ್ಯೆ ರಾಧಾ ಶ್ರೀವತ್ಸ ಅವರ ರಂಗ ಪ್ರವೇಶ ಕಾರ್ಯಕ್ರಮ ಅ . 25ರಂದು ರಾಜಧಾನಿ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ನೆರವೇರಲಿದೆ.

ಮುಖ್ಯ ಅತಿಥಿಗಳಾಗಿ ಹಿರಿಯ ಕಲಾವಿದೆ ಕಲಾಮಂಡಲಮ್ ಉಷಾ ದಾತಾರ್, ಚಿತ್ರನಟಿ ಮಾಳವಿಕಾ ಅವಿನಾಶ್, ನಟ ನೆ.ಲ. ನರೇಂದ್ರ ಬಾಬು ಆಗಮಿಸಲಿದ್ದಾರೆ. ತಾಂತ್ರಿಕ ನಿರ್ದೇಶಕ ಸಾಯಿ ವೆಂಕಟೇಶ್, ಪಾಲಕರಾದ ಶ್ರೀವತ್ಸ ಮತ್ತು ಕವಿತಾ ಹಾಜರಿರಲಿದ್ದಾರೆ.

ನಟವಾಂಗದಲ್ಲಿ ಗುರು ಸುಪರ್ಣಾ, ಗಾಯನದಲ್ಲಿ ರೋಹಿತ್ ಭಟ್, ಮೃದಂಗದಲ್ಲಿ ಗುರುಮೂರ್ತಿ, ಕೊಳಲಿನಲ್ಲಿ ನಿತೀಶ್ ಅಮ್ಮಣ್ಣಾಯ, ವೀಣೆಯಲ್ಲಿ ಗೋಪಾಲ್ ಮತ್ತು ರಿದಂ ಪ್ಯಾಡ್’ನಲ್ಲಿ ಪವನ್ ದತ್ತ ಹಿಮ್ಮೇಳ ಸಹಕಾರ ನೀಡಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUBharatanatyamKannada News WebsiteMusicRadha SrivatsaSpecial Articleಭರತನಾಟ್ಯರಂಗ ಪ್ರವೇಶವಿಶೇಷ ಲೇಖನಸಂಗೀತಸಂಸ್ಕಾರಸಂಸ್ಕೃತಿ
Previous Post

ಅ.25 – 26ರಂದು ಎನ್‌ಇಎಸ್‌ ಕಾಲೇಜಿನಲ್ಲಿ ರೇಂಜರ್ಸ್‌ – ರೋವರ್ಸ್‌ ಅಹೋರಾತ್ರಿ ಶಿಬಿರ

Next Post

ಮನೆ ಮನೆಗೆ ಪೊಲೀಸ್ | ಎಸ್‌ಪಿ ಮಿಥುನ್ ಕುಮಾರ್ ಸಾರ್ವಜನಿಕ ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮನೆ ಮನೆಗೆ ಪೊಲೀಸ್ | ಎಸ್‌ಪಿ ಮಿಥುನ್ ಕುಮಾರ್ ಸಾರ್ವಜನಿಕ ಸಭೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

October 24, 2025
File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025

ಶಿವಮೊಗ್ಗ | ಬಸವನಗುಡಿ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ನಿವಾಸಿಗಳೊಂದಿಗೆ ಸಂವಾದ

October 24, 2025

ಆನಂದಕಂದ ಲೇಖನ ಮಾಲಿಕೆ | ಸಾರ್ಥಕ ಉದ್ದೇಶವೇ ದೊಡ್ಡ ಪ್ರೇರಕ ಶಕ್ತಿ

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

October 24, 2025
File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025

ಶಿವಮೊಗ್ಗ | ಬಸವನಗುಡಿ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ನಿವಾಸಿಗಳೊಂದಿಗೆ ಸಂವಾದ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!