Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಆನಂದ ಕಂದ

ನಮ್ಮ ಹಬ್ಬಗಳು | ತಿಳಿಯಲೇಬೇಕಾದ ವಿಷಯಗಳು

February 27, 2025
in ಆನಂದ ಕಂದ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-24  |
ಹಬ್ಬಗಳು ಎಂದರೆ ನೆನಪಿಗೆ ಬರುವುದು ಹೊಸ ಬಟ್ಟೆ, ಸಿಹಿ ತಿಂಡಿ, ತರತರಾವರಿ ಭೋಜನ, ಬಿಟ್ಟರೆ ನೆಂಟರು. ಸಾಮಾನ್ಯವಾಗಿ ಮಕ್ಕಳಿಗೆ ಹಬ್ಬ ಎಂದರೆ ನೆನಪಿಗೆ ಬರುವುದು ಇಷ್ಟೇ. ಇಷ್ಟೇನಾ ಹಬ್ಬಗಳೆಂದರೆ?

ಹಬ್ಬಗಳೆಂದರೆ ಇಷ್ಟೇ ಅಂತೂ ಅಲ್ಲವೇ ಅಲ್ಲ. ಬೆಳಗ್ಗೆ ಬೇಗ ಎದ್ದು, ಸ್ನಾನ ಮಾಡಬೇಕು. ನಂತರ, ಮೈತುಂಬುವಂತಹ ಹೊಸದಾದ ಪಾರಂಪರಿಕವಾದ ಉಡುಗೆ-ತೊಡುಗೆ ಹಾಕಿಕೊಳ್ಳಬೇಕು. ದೇವರಿಗೆ ನಮಸ್ಕರಿಸಿ, ಮನೆಯಲ್ಲಿರುವ ಹಿರಿಯರಿಗೆ ನಮಸ್ಕರಿಸಿ, ಶುಭಾಶಯಗಳನ್ನು ತಿಳಿಸಿ, ದೇವರ ನೈವೇದ್ಯವನ್ನು ಮೆಲ್ಲುವವರಾಗಿ, ನಂತರದಲ್ಲಿ ನಮ್ಮ ನಮ್ಮ ಕಾರ್ಯಗಳಲ್ಲಿ ತೊಡಗಬಹುದು.

Also Read>> ಇಶಾ ಫೌಂಡೇಶನ್‌ ಶಿವರಾತ್ರಿ ಕಾರ್ಯಕ್ರಮ | ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಅಮಿತ್‌ ಶಾ ಭಾಗಿ

ಎಲ್ಲ ಹಬ್ಬಗಳಲ್ಲೂ ಸಂಭ್ರಮ ಎನ್ನುವುದು ಸಾಮಾನ್ಯವಾದರೂ, ಒಂದೊಂದು ಹಬ್ಬದಲ್ಲಿ ಒಂದೊಂದು ವಿಶೇಷತೆಯಿದೆ. ಆ ರೀತಿ ಕೆಲವು ಹಬ್ಬಗಳ ಬಗ್ಗೆ ಇಲ್ಲಿ ತಿಳಿಯೋಣ:

ಯುಗಾದಿ
ಹೊಸ ಸಂವತ್ಸರದ ಮೊದಲ ದಿನವೇ ಈ ಹಬ್ಬವು. ಮನೆಯ ಬಾಗಿಲುಗಳಿಗೆ ಮಾವಿನ ಎಲೆಗಳ ತೋರಣಗಳಿಂದ ಅಲಂಕರಿಸಿ, ಮನೆಯನ್ನು ಮಿಂಚಿಸುವುದು. ಬೇವು ಮತ್ತು ಬೆಲ್ಲದ ರಸಪಾಕವನ್ನು ಮಾಡಿರುತ್ತಾರೆ. ಬೇವು- ಬೆಲ್ಲ ತಿಂದು ಸುಖದಿಂದ ಬಾಳಿರಿ ಎಂದರೆ ಬೇವು- ಕಷ್ಟ, ಬೆಲ್ಲ- ಸುಖ, ಗಳನ್ನು ಸಮಾನವಾಗಿ ತೆಗೆದುಕೊಂಡು ಜೀವನವನ್ನು ನಿರಾತಂಕದಿಂದ ಸಾಗಿಸಿರಿ. ಎಂಬುದಾಗಿ ಹಿರಿಯರು ಹೇಳುತ್ತಾರೆ. ಸಾಯಂಕಾಲ ಆಚಾರ್ಯರು ಅಥವಾ ಸ್ವಾಮಿಗಳು ಪಂಚಾಂಗ ವಾಚನ ಮಾಡುತ್ತಾರೆ. ಈ ಹಬ್ಬವೇ ಯುಗಾದಿ.
ಶ್ರೀಕೃಷ್ಣ ಜನ್ಮಾಷ್ಟಮಿ
ಸೆರೆ ಮನೆಯಲ್ಲಿರುವ ತಾಯಿಯಾದ ದೇವಕಿಯ ಗರ್ಭದಲ್ಲಿ ಹುಟ್ಟಿದವನೇ, ಪುಟ್ಟ ಶಿಶು ಶ್ರೀಕೃಷ್ಣ. ಹುಟ್ಟಿದ ಮರುಕ್ಷಣದಲ್ಲಿ ನೋಡಿದರೆ…. ಆಶ್ಚರ್ಯ! ಅದ್ಭುತ!ಆನಂದ! ಪರಮಾನಂದ! ಶಂಖಚಕ್ರಧಾರನಾದ ಭಗವಂತನು…. ಹುಟ್ಟಿದ ದಿನ ಅಂದು ಶ್ರಾವಣ ಕೃಷ್ಣ ಅಷ್ಟಮಿ.

ಕೃಷ್ಣ ಹುಟ್ಟಿದ್ದು ರಾತ್ರಿ ಚಂದ್ರೋದಯ ಸಮಯಕ್ಕೆ. ಆ ದಿನದಂದು ಉಪವಾಸ ಮಾಡಿ, ಮರುದಿನ ಬೆಳಿಗ್ಗೆ ಬೇಗ ಪಾರಣೆ ಮಾಡುವುದು. ಕೃಷ್ಣನಿಗಾಗಿ ಚಕ್ಕುಲಿ, ಕೋಡುಬಳೆ, ನಿಪ್ಪಟ್ಟು, ಉಂಡೆ, ರಸಾಯನ, ಕಜ್ಜಾಯ ಮತ್ತು ಇತರಪದಾರ್ಥಗಳನ್ನು ತಯಾರು ಮಾಡಿ, ಮನೆಯನ್ನು ದೀಪ, ರಂಗೋಲಿ ಮತ್ತು ಹೂವುಗಳಿಂದ ಅಲಂಕರಿಸಿದರೆ.. ಏಕೆ ಕೃಷ್ಣ ಬರುವುದಿಲ್ಲ? ಬಂದೇ ಬರುತ್ತಾನೆ. ಬರಲೇಬೇಕು. ಎಂಬ ಭರವಸೆಯಿಂದ ಆಚರಿಸುವ ಹಬ್ಬವಿದು. ನನಗಂತೂ ಜನ್ಮಾಷ್ಟಮಿ ಎಂದರೆ ಪ್ರಾಣ. ನಿಮಗೆ?

ನವರಾತ್ರಿ
ನವರಾತ್ರಿಯು ದಸರಾ ಎಂದು ಕರೆಸಿಕೊಳ್ಳುತ್ತದೆ. ಗೊಂಬೆ ಕೂಡಿಸುತ್ತಾರೆ. ಹಾಗೆಂದರೇನು? ಹಾಗೆಂದರೆ, ಮೆಟ್ಟಿಲುಗಳನ್ನು ಜೋಡಿಸಿ, ಮೊದಲನೇ ಮೆಟ್ಟಿಲಿನಲ್ಲಿ ಪಟ್ಟದ ಗೊಂಬೆ ಜೋಡಿಸುತ್ತಾರೆ. ಎರಡು- ಮೂರು- ನಾಲ್ಕು ಮತ್ತು ಐದನೇ ಮೆಟ್ಟಿಲುಗಳಲ್ಲಿ ರಾಮಾಯಣ, ಮಹಾಭಾರತ, ಭಾಗವತ, 18 ಪುರಾಣಗಳು ಮತ್ತು ಹಲವಾರು ಕಥೆಗಳ ಸನ್ನಿವೇಶದ ಬೊಂಬೆಗಳನ್ನು ಜೋಡಿಸಿ, ಅದರಲ್ಲಿ ದೇವರನ್ನು ಅನುಸಂಧಾನ ಮಾಡಿ ಪೂಜೆ ಮಾಡುವುದು ಕೆಲವು ಮನೆಗಳ ಪದ್ಧತಿಯಾಗಿದೆ. ಇದು ದೇಶಾದ್ಯಂತ ಆಚರಿಸುವ ಪ್ರಸಿದ್ಧ ಹಬ್ಬ ಹಾಗೂ ಮೈಸೂರಿನ ದಸರ ಮತ್ತು ಜಂಬೂಸವಾರಿ ಮನೆಮಾತಾಗಿದೆ.ಮೈಸೂರಿನ ದಸರ ಸಮಯದಲ್ಲಿ ಕಾಲಿಡಲಾಗದಷ್ಟು ಜನಸಾಗರ; ಅಷ್ಟು ಆಸಕ್ತಿ ಜನರಿಗೆ ದಸರೆಯನ್ನು ನೋಡಲು. ಕನ್ನಡ ನಾಡಿನ ನಾಡಹಬ್ಬ ಆಗಿರುವುದರಿಂದ ಬಹುಪ್ರಸಿದ್ಧ. ಎಲ್ಲೆಡೆ ರಾಮನು ರಾವಣನನ್ನು ಕೊಲ್ಲುವ ಗೊಂಬೆ ಮತ್ತು ಚಿತ್ರವನ್ನು ಹಾಕುತ್ತಾರೆ. ಆದರೆ ಏಕೆ? ರಾಮನ ಚಿತ್ರ ರಾಮನವಮಿಯಂದು ಹಾಕಬೇಕಲ್ಲವೇ? ಏಕೆಂದರೆ, ರಾಮನು ರಾವಣನು ಕೊಂದದ್ದು ನವರಾತ್ರಿಯಲ್ಲೇ. ಒಂಬತ್ತು ದಿನಗಳ ಕಾಲ ಮನೆಯಲ್ಲಿ ಅಖಂಡ ದೀಪ ಹಚ್ಚುತ್ತಾರೆ.  ಒಂದೊಂದು ದಿನದಲ್ಲಿ ಒಂದೊಂದು ದುರ್ಗೆಯ ಸನ್ನಿಧಾನವಿರುವುದು. ಕುಲದೇವರ ಪೂಜೆ ನವರಾತ್ರಿಯಲ್ಲಿ ನಡೆಯುವುದು.

ದೀಪಾವಳಿ
ದೀಪಾವಳಿಯು ಮೂರು ದಿನಗಳಲ್ಲಿ ಆಚರಿಪಗೂಂಡಿದೆ.

  • ನೀರು ತುಂಬುವ ಹಬ್ಬ: ಜಲ ಪೂರ್ಣತ್ರಯೋದಶಿ
  • ನರಕ ಚತುರ್ದಶಿ
  • ಬಲಿಪಾಡ್ಯಮಿ

ದೀಪಾವಳಿಯು ದೀಪದ ಹಬ್ಬ. ಸಂಜೆ ಪಟಾಕಿ ಹಾರಿಸಬೇಕು. (ಇತಿಮಿತಿ ಒಡನೆ) ನಮ್ಮ ಮನೆಗೆ ಆಕಾಶಬುಟ್ಟಿ, ಪ್ರತಿಯೊಂದು ಮೂಲೆಯಲ್ಲಿ ಸಹ ದೀಪವಿಟ್ಟು ಮನೆಯನ್ನು ಬೆಳಗುವ ಹಬ್ಬವಿದು.ನೀರು ತುಂಬುವ ಹಬ್ಬ
ಮನೆಯಲ್ಲಿ ಇರುವ ಎಲ್ಲಾ ತಂಬಿಗೆ ಮತ್ತು ಬಿಂದಿಗೆಗಳಿಗೆ ಸುಣ್ಣ( ಬಿಳಿ )ಕೆಮ್ಮಣ್ಣು (ಕೆಂಪು ಕಂದು)ಗಳನ್ನು ಹಚ್ಚಿ ಗಂಗೆ ಬಂದಿದ್ದಾಳೆಂದು (ಸರ್ವಕಾಲದಲ್ಲಿ ಗಂಗೆ ಇರುವಳು. ಈ ಸಮಯದಲ್ಲಿ ವಿಶೇಷ ಸನ್ನಿಧಾನವಿರುತ್ತದೆ) ಆ ಬಿಂದಿಗೆಗಳಿಗೆ ನಮಸ್ಕರಿಸುತ್ತಾರೆ. ಅಂದು ಮೂರು ವರ್ಷದ ಕೆಳಗಿನ ಮಕ್ಕಳಿಗೆ ಬಿಂದಿಗೆಯಲ್ಲಿರುವ ನೀರನ್ನು ಸಾಧಾರಣ ನೀರಿಗೆ ಬೆರಸಿ, ಅದರಿಂದ ಸ್ನಾನ ಮಾಡಿಸುತ್ತಾರೆ ಎಂಬುದು ಕೇಳಿ ಬಂದಿದೆ.

ನರಕ ಚತುರ್ದಶಿ
ನರಕ (ಅಸುರ) ನನ್ನು ಕೊಂದ ದಿನ ಅದು. ಶ್ರೀ ಕೃಷ್ಣನು ಅಸುರನಾದ ನರಕನನ್ನು ಕೊಂದ ನೆನಪಿಗೆ ಈ ಹಬ್ಬವು ಆಚರಿಸಲ್ಪಟ್ಟಿದೆ.

ಮುಂಜಾನೆ ಅರುಣೋದಯ ಸಮಯಕ್ಕೆ ಹಿರಿಯರು ಎಣ್ಣೆ ಹಚ್ಚುತ್ತಾರೆ. ಬಂಗಾರದ ಉಂಗುರದಿಂದ ತಲೆಗೆ ಒಂದೆರಡು ತೊಟ್ಟು ಎಣ್ಣೆ ಹಚ್ಚುವರು. ನಂತರ ಆರತಿ ಮಾಡಿ ನೂತನವಾದ ವಸ್ತ್ರಗಳನ್ನು ನೀಡುತ್ತಾರೆ. ಅನುಕೂಲವಿದ್ದಲ್ಲಿ, ಹತ್ತಿರದಲ್ಲಿ ಸನ್ಯಾಸಿಗಳಿದ್ದರೆ, ಅವರಲ್ಲಿ ಎಣ್ಣೆಯನ್ನು ಹಲವರು ಪಡೆಯುತ್ತಾರೆ. ನಂತರ ಅಭ್ಯಂಜನ ಸ್ನಾನ ಮಾಡಬೇಕು. ಬಳಿಕ ಸಂಜೆ, ಪಟಾಕಿ ಹಾರಿಸಬೇಕು. (ವಾಯು- ಶಬ್ದ ಮಾಲಿನ್ಯಗಳನ್ನು ಆದಷ್ಟು ನಿಯಂತ್ರಿಸಿ).

ಬಲಿಪಾಡ್ಯಮಿ
ಬಲಿಪಾಡ್ಯಮಿಯ ದಿನ ಬಲಿ ಮಹಾ ಚಕ್ರವರ್ತಿಯ ತಲೆಯ ಮೇಲೆ ಕಾಲಿಟ್ಟು ಸುತಲಲೋಕಕ್ಕೆ ಕಳಿಸಿ, ಇಂದಿಗೂ ವಾಮನ ರೂಪಿ ಪರಮಾತ್ಮನು ಬಲಿಯ ಮನೆಯನ್ನು ಕಾಯುತ್ತಿದ್ದಾನೆ. ದೀಪದ ಹಬ್ಬವಾದ ದೀಪಾವಳಿಯ ಸಂಭ್ರಮವು ಹೀಗಿರುವುದು.ಸಂಕ್ರಾಂತಿ
ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಬದಲಾಗುವ ಪರ್ವಕಾಲವೇ ಸಂಕ್ರಾಂತಿ. ಎಳ್ಳು ಬೆಲ್ಲ ತಿನ್ನುತ್ತೇವೆ, ಆದರೆ ಏಕೆ? ಬೆಲ್ಲ, ಎಳ್ಳು, ಕಡಲೆ ಬೀಜ ಮತ್ತು ಕೊಬ್ಬರಿಯ ಸಮನ್ವಿತಪಾಕಬೇಕೆ?ದಕ್ಷಿಣಾಯನದ ಪಿತ್ತ ಪದಾರ್ಥಗಳು ಎಳ್ಳು, ಕೊಬ್ಬರಿ ಮತ್ತು ಶೇಂಗಾ ಬೀಜ. ಉತ್ತರಾಯಣದ ಬೆಲ್ಲ ಆ ಉಷ್ಣ ಪದಾರ್ಥಗಳನ್ನು ಸಮತೋಲನ ಮಾಡುವಂತ ಪದಾರ್ಥ. “ಎಳ್ಳು ಬೆಲ್ಲ ತಿಂದು ಒಳ್ಳೊಳ್ಳೆ ಮಾತನಾಡಿ”ಎಂಬುದಾಗಿ ಹಿರಿಯರು ಹೇಳಿ ನಮ್ಮನ್ನು ಹರಸುವುದು ಪದ್ಧತಿ. ಅಂದಿನ ದಿನ ಕೃಷ್ಣನಿಗೆ ವಿಶೇಷ ಬಲ್ಲದ ನೈವೇದ್ಯ ಹಲವಾರು ಮನೆಗಳಲ್ಲಿ ನಡೆಯುತ್ತದೆ.

ಮನೆಯಲ್ಲಿರುವ ಎಲ್ಲರಿಗೂ ಎಳ್ಳು ಬೆಲ್ಲ ಕೊಡುವುದು. ಹಿರಿಯವರಾಗಿದ್ದರೆ ನಮಸ್ಕರಿಸುವುದು. ಕಿರಿಯವರಾಗಿದ್ದರೆ ಹರಸುವುದು. ಅಕ್ಕ ಪಕ್ಕ ಮನೆಯವರಿಗೆ ಎಳ್ಳು ಬೆಲ್ಲ ಕೊಟ್ಟು, ಸಕ್ಕರೆ ಅಚ್ಚು, ಕಬ್ಬು, ಹಣ್ಣು, ಹೂವು ಮತ್ತು ದಕ್ಷಿಣ ಕೊಡುವುದು ಒಂದು ಪದ್ಧತಿ ಆದರೆ ಬಂಧು ಬಳಗದವರ ಮನೆಗಳಿಗೆ ತೆರಳಿ, ಎಳ್ಳು ಬೆಲ್ಲ ಕೊಟ್ಟು, ಸ್ವಲ್ಪ ಹೊತ್ತು ಹಬ್ಬದ ಕುರಿತು ಮಾತನಾಡಿ ಸಂತಸ ಪಡುವುದು ಮತ್ತೊಂದು ಪದ್ದತಿ. ಇನ್ನೊಂದು ಪದ್ದತಿ ಏನೆಂದರೆ, ಸಂಜೆ ಹೊತ್ತು ಒಂದರಿಂದ ಐದು ವರ್ಷದ ಒಳಗಿನ ಮಕ್ಕಳಿಗೆ ಹಣ್ಣು/ ಉತ್ಸವ ಮಾಡುತ್ತಾರೆ ಮಕ್ಕಳಿಗೆ ಆಗಿರುವ ಎಲ್ಲಾ ದೃಷ್ಟಿಗಳ ಪರಿಹಾರಕ್ಕೆ ಇದು. ಅರಳು/ ಮಂಡಕ್ಕಿಯೊಂದಿಗೆ ಮಕ್ಕಳಿಗೆ ಇಷ್ಟವಾದ ಪೆಪ್ಪರ್ಮೆಂಟು, ನಾಣ್ಯಗಳು ಕಳಿಸಿ ಮಕ್ಕಳ ತಲೆಯ ಮೇಲೆ ಸುರಿಯುತ್ತಾರೆ. ಮಕ್ಕಳು ಅದರಲ್ಲಿ ನಾಣ್ಯಗಳು ಮತ್ತು ಪೇಪರುಮೆಂಟುಗಳು ಹಣ್ಣುಗಳನ್ನು ಆರಿಸಿಕೊಳ್ಳುತ್ತಾರೆ. ಈ ಸಂತಸ ಪಡಿಸುವ ಹಬ್ಬವೇ ಸಂಕ್ರಾಂತಿ. ಇದು ಜನವರಿ 14 ಅಥವಾ 15ರಂದು ಬರುವುದು.

ಹೋಲಿ
ಹೋಳಿಕದಹನ ಮಾಡಿದ ದಿನವೇ ಅಂದು ಓಕಳಿ ಮತ್ತು ಹೋಲಿ ಮುಂತಾದ ಹೆಸರುಗಳಲ್ಲಿ ಈ ಹಬ್ಬವು ಕರೆಸಿಕೊಂಡಿದೆ. ಕೃಷ್ಣನು ಸಹ ಹೋಲಿ ಆಡುತ್ತಿದ್ದನೆಂದು ಉಲ್ಲೇಖ. ಬಣ್ಣ ಬಣ್ಣದ ಪುಡಿಗಳು ಮತ್ತು ನೀರಿನಿಂದ ಆಟವಾಡಿ, ಕೃಷ್ಣನನ್ನು ನೆನೆಯಬೇಕು. ಇತ್ತೀಚೆಗೆ ರಾಸಾಯನಿಕ ಪದಾರ್ಥಗಳನ್ನು ಬಣ್ಣಗಳೊಂದಿಗೆ ಮಿಶ್ರಿತಗೊಳಿಸುತ್ತಿದ್ದಾರೆ. ಹಾಗಾಗಿ ಆರ್ಗಾನಿಕ್ ಬಣ್ಣಗಳಿಂದ ಆಟವಾಡುವುದು ಸೂಕ್ತ. ಇಂದಿಗೂ ಕಟ್ಟಿಗೆಯನ್ನು ಹೋಳಿಕ ಎಂದು ತಿಳಿದು ಅದನ್ನು ಭಸ್ಮ ಮಾಡುವುದು ಪ್ರಸಿದ್ಧ.

ಈ ರೀತಿಯ ಅನೇಕ ಹಬ್ಬಗಳು ನಮ್ಮವು. ಒಂದೊಂದು ಹಬ್ಬದ ಬಗ್ಗೆ ಎಷ್ಟು ತಿಳಿದರೂ ಸಾಲದು. ಭಾರತದಲ್ಲಿ ವರ್ಷಕ್ಕೆ ಕನಿಷ್ಠ 50+ ಹಬ್ಬಗಳು ಆಚರಿಸಲ್ಪಟ್ಟಿವೆ. ಎಲ್ಲ ಹಬ್ಬಗಳ ಬಗ್ಗೆ ಇನ್ನಷ್ಟು ತಿಳಿದು ಆಚರಿಸುವ ಪ್ರಯತ್ನ ಇನ್ನುಮುಂದೆ ನಮ್ಮದಾಗಿರಲಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
Tags: #NavaratriAnandakandaDeepavaliFestivalHoliKannada News WebsiteLatest News KannadaSankranthi FestivalUgadiYugadiದೀಪಾವಳಿನವರಾತ್ರಿಯುಗಾದಿಶ್ರೀಕೃಷ್ಣ ಜನ್ಮಾಷ್ಟಮಿಸಂಕ್ರಾಂತಿಹಬ್ಬಹೊಸ ಸಂವತ್ಸರಹೋಲಿ
Previous Post

ಇಶಾ ಫೌಂಡೇಶನ್‌ ಶಿವರಾತ್ರಿ ಕಾರ್ಯಕ್ರಮ | ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಅಮಿತ್‌ ಶಾ ಭಾಗಿ

Next Post

ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಬಳಕೆ | ಕಠಿಣ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಬಳಕೆ | ಕಠಿಣ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!