ನವದೆಹಲಿ: ಜಮ್ಮುವಿನ ಪುಲ್ವಾಮಾದಲ್ಲಿ ಪಾಕ್ ಉಗ್ರರು ದಾಳಿ ನಡೆಸಿ ಸಿಆರ್’ಪಿಎಫ್’ನ 42 ಯೋಧರನ್ನು ಬಲಿ ಪಡೆದ ಹಿನ್ನೆಲೆಯಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಪ್ರಧಾನಿಯವರು, ನಿನ್ನೆ ವೀರಸ್ವರ್ಗ ಸೇರಿದ ಎಲ್ಲ ಯೋಧರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಇದೇ ವೇಳೆ ಭದ್ರತಾ ಪಡೆಗಳಿಗೆ ನಾವು ಸಂಪೂರ್ಣ ಸ್ವಾತಂತ್ರ ನೀಡುತ್ತೇವೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಶತ್ರುಗಳಿಗೆ ಸರಿಯಾದ ಪಾಠ ಕಲಿಸಿ ಎಂದಿದ್ದಾರೆ.
Prime Minister Narendra Modi: I pay tribute to soldiers who lost their lives in #PulwamaAttack. Our security forces have been given full freedom. We have full faith in their bravery. pic.twitter.com/kXtK3GyV70
— ANI (@ANI) February 15, 2019
ಇಂತಹ ಕ್ರೂರ ಭಯೋತ್ಪಾದನಾ ಕೃತ್ಯ ಎಸಗಿರುವ ಉಗ್ರರು ಹಾಗೂ ಅದನ್ನು ಬೆಂಬಲಿಸಿರುವ ಎಲ್ಲರಿಗೂ ಸಹ ತಕ್ಕುದಾದ ಶಿಕ್ಷೆ ಆಗಿಯೇ ತೀರುತ್ತದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಖಾರವಾಗಿ ಹೇಳಿದ್ದಾರೆ.
ನಿನ್ನೆಯ ಘಟನೆಗೆ ಸರಿಯಾದ ಉತ್ತರ ಕೊಡಲು ಇಡಿಯ ದೇಶ ನಮಗೆ ಬೆಂಬಲ ನೀಡುತ್ತದೆ ಎಂದು ನಾನು ನಂಬಿದ್ದೇನೆ. ನಮ್ಮ ಯೋಧರ ತ್ಯಾಗ ಹಾಗೂ ಬಲಿದಾನ ಯಾವುದೇ ಕಾರಣಕ್ಕೂ ವ್ಯರ್ಥವಾಗಲು ನಾವು ಬಿಡುವುದಿಲ್ಲ ಎಂದು ಘರ್ಜಿಸಿದ್ದಾರೆ.
#WATCH PM Narendra Modi pays tribute to CRPF soldiers who lost their lives in #PulwamaTerrorAttack, says, "logon ka khoon khaul raha hai, yeh main samajh raha hun. Humare suraksha balon ko purn swatantra de di gayi hai." pic.twitter.com/kxdCIKe88q
— ANI (@ANI) February 15, 2019
ನೆರೆಯ ದೇಶದ ತನ್ನ ಕುತಂತ್ರ ಹಾಗೂ ವಿಧ್ವಂಸಕ ಕೃತ್ಯಗಳನ್ನು ಬೆಂಬಲಿಸುವ ಮೂಲಕ ನಮ್ಮನ್ನು ಹೆದರಿಸಬಹುದು ಎಂದು ಭಾವಿಸಿದ್ದಾರೆ ಅದು ಅದರ ದೊಡ್ಡ ತಪ್ಪು ತಿಳುವಳಿಕೆ ಎಂದು ಕಿಡಿ ಕಾರಿದ್ದಾರೆ.
Discussion about this post